Homeಮುಖಪುಟಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

ಅಮಿತ್ ಶಾ ನೇತೃತ್ವದಲ್ಲಿ ಪೊಲೀಸ್ ಸಮ್ಮೇಳನ: ಹೆಚ್ಚಿನ ನಿರಾಶ್ರಿತ ಬಂಧೀಖಾನೆ ತೆರೆಯಲು ಚಿಂತನೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ವಾರ್ಷಿಕ ಪೊಲೀಸ್ ಸಮ್ಮೇಳನ ನಡೆಯುತ್ತಿದ್ದು, “ಹೆಚ್ಚಿನ ಸಂಖ್ಯೆಯ ನಿರಾಶ್ರಿತ ಬಂಧೀಖಾನೆಗಳನ್ನು ಸ್ಥಾಪಿಸುವುದು, ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರನ್ನು ಗುರುತಿಸಿ ಗಡೀಪಾರು ಮಾಡಲು ಬಯೋಮೆಟ್ರಿಕ್ಸ್ ಅನ್ನು ಬಳಸುವುದು” ಸೇರಿದಂತೆ ಕೆಲವು ಕ್ರಮಗಳ ಕುರಿತು ಚರ್ಚಿಸಲಾಗಿದೆ.

1951ರ ವಿಶ್ವಸಂಸ್ಥೆಯ ನಿರಾಶ್ರಿತರ ಸಮಾವೇಶ ಮತ್ತು ಅದರ 1967ರ ಶಿಷ್ಟಾಚಾರಕ್ಕೆ ಭಾರತವು ಸಹಿ ಹಾಕಿಲ್ಲ ಎಂದು, ರೋಹಿಂಗ್ಯಾ ಅಥವಾ ವಿಶ್ವಸಂಸ್ಥೆಯಿಂದ ಗುರುತಿಸಲ್ಪಟ್ಟ ನಿರಾಶ್ರಿತರ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸರ್ಕಾರದ ನೀತಿಯ ಬಗ್ಗೆ ಸ್ಪಷ್ಟತೆಯನ್ನು ಕೋರಿದ್ದಾರೆ.

ಜನವರಿ 20ರಂದು ಇಂಟೆಲಿಜೆನ್ಸ್ ಬ್ಯೂರೋ (IB) ಆಯೋಜಿಸಿದ 57ನೇ ‘ಡಿಜಿಪಿ (ಡೈರಕ್ಟರ್‌ ಜನರಲ್ಸ್‌ ಆಫ್‌ ಪೊಲೀಸ್‌) ಮತ್ತು ಐಜಿಪಿ (ಇನ್‌ಸ್ಪೆಕ್ಟರ್‌ ಜನರಲ್ ಆಫ್ ಪೊಲೀಸ್‌) ಸಮಾವೇಶ’ದ ಮೊದಲ ದಿನ ಈ ಕುರಿತು ಚರ್ಚೆಯಾಗಿದೆ. ಭಾರತದಲ್ಲಿ ಅತಿಯಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಲು ಮತ್ತು ಗಡಿಪಾರು ಮಾಡಲು ಸಂಘಟಿತ ಕಾರ್ಯತಂತ್ರದ ಕುರಿತು ಪ್ರಸ್ತಾಪಿಸಲಾಗಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಸರ್ಕಾರಿ ಅಧಿಕಾರಿಯೊಬ್ಬರು  ಮಾತನಾಡಿ, “ವಲಸೆ ಡೇಟಾಬೇಸ್‌ನ ಪ್ರಕಾರ, 2019, 2020 ಮತ್ತು 2021 ವರ್ಷಗಳಲ್ಲಿ ಅವಧಿ ಮೀರಿ ಉಳಿದುಕೊಂಡಿರುವ ವಿದೇಶಿಯರ ಸಂಖ್ಯೆ ಕ್ರಮವಾಗಿ 54,576, 40,239 ಮತ್ತು 25,143ರಷ್ಟಿದೆ” ಎಂದಿದ್ದಾರೆ.

ಅಧಿಕಾರಿಗಳು ಹಲವು ಸವಾಲುಗಳನ್ನು ತಿಳಿಸಿದ್ದಾರೆ. ಪ್ರವಾಸಿ ವೀಸಾ ಮತ್ತು ವಿದ್ಯಾರ್ಥಿ ವೀಸಾವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಅಂತಹ ಅಪರಾಧಿಗಳನ್ನು ಪತ್ತೆಹಚ್ಚಲು ಬಯೋಮೆಟ್ರಿಕ್ಸ್ ಅನ್ನು ವ್ಯಾಪಕವಾಗಿ ಬಳಸಬಹುದು ಎಂದು ಪ್ರತಿಪಾದಿಸಲಾಗಿದೆ.

ಭಾರತದಲ್ಲಿ 180 ದಿನಗಳವರೆಗೆ ಉಳಿಯಲು ಅನುಮತಿಸುವ ಪ್ರವಾಸಿ ವೀಸಾಗಳಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಯಲ್ಲಿ ವರದಿ ಮಾಡುವ ಅಗತ್ಯವಿಲ್ಲ. ಅಂತಹ ವಿದೇಶಿಯರನ್ನು ಪತ್ತೆಹಚ್ಚಲು ಇರುವ ಏಕೈಕ ಮಾರ್ಗವೆಂದರೆ ಸಿ-ಫಾರ್ಮ್‌ಗಳು. ಹೋಟೆಲ್ ಮತ್ತು ಲಾಡ್ಜ್‌ಗಳು ವಸತಿ ಒದಗಿಸುವಾಗ ರೆಕಾರ್ಡ್ ಮಾಡಬೇಕಾಗುತ್ತದೆ. ಅನೇಕ ಬಾಡಿಗೆ ವಸತಿ ಅಥವಾ ಹೋಮ್ ಸ್ಟೇಗಳು ಅವಶ್ಯಕತೆಗಳನ್ನು ಅನುಸರಿಸದ ಕಾರಣ ಅನೇಕ ಬಾರಿ ಇವು ದುಷ್ಪರಿಣಾಮ ಬೀರುತ್ತಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿಯರ ಉಪಸ್ಥಿತಿಯನ್ನು ವರದಿ ಮಾಡದಿರುವ ಸೇವಾ ಪೂರೈಕೆದಾರರ ಹೋಟೆಲ್‌ಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಹೊಣೆಗಾರಿಕೆಯನ್ನು ನಿಗದಿಪಡಿಸುವ ಬಗ್ಗೆಯೂ ಸಮ್ಮೇಳನವು ಚರ್ಚಿಸಿದೆ.

ಗಡಿಪಾರು ವಿಳಂಬಕ್ಕೆ ಕಾರಣವಾಗುವ ಕೆಲವು ದೇಶಗಳ ಅಸಹಕಾರದ ಸಮಸ್ಯೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಚರ್ಚಿಸುವಂತೆಯೂ ಸೂಚಿಸಲಾಗಿದೆ. ಪಾಸ್‌ಪೋರ್ಟ್‌ಗಳು, ಆಧಾರ್ ಕಾರ್ಡ್‌ಗಳಂತಹ ಭಾರತೀಯ ಗುರುತಿನ ದಾಖಲೆಗಳ ದುರುಪಯೋಗವಾಗುತ್ತಿರುವ ಕುರಿತೂ ಚರ್ಚಿಸಲಾಗಿದೆ.

ನೇಪಾಳ ಮತ್ತು ಮ್ಯಾನ್ಮಾರ್‌ನಲ್ಲಿ ಬೇಲಿಯಿಲ್ಲದ ಗಡಿಯಿಂದಾಗಿ ಎದುರಾಗಿರುವ ಸವಾಲುಗಳ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಕ್ತ ಚಲನೆಯು ಭದ್ರತಾ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನೇಪಾಳ ಗಡಿಯಲ್ಲಿ ವಿವಿಧ ವಸ್ತುಗಳ ಕಳ್ಳಸಾಗಣೆಯನ್ನು ಹೊರತುಪಡಿಸಿ, ಜನರು ಅತ್ತಿಂದಿತ್ತ ತಿರುಗಾಡುವುದು ಮತ್ತು ವಿದೇಶಿ ಏಜೆನ್ಸಿಗಳ ಚಟುವಟಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ.

ಗಡಿ ಪ್ರದೇಶಗಳಲ್ಲಿ ಭಾರತದ ಹಿತಾಸಕ್ತಿಗಳ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮತ್ತು ಸರ್ಕಾರದ ನೀತಿಯ ಮೇಲೆ ಪ್ರಭಾವ ಬೀರಲು ವಿದೇಶಿ ಏಜೆನ್ಸಿಗಳು ಪ್ರಯತ್ನಿಸುತ್ತಿವೆ ಎಂದು ಹೇಳಲಾಗಿದೆ. “ಇದರೊಂದಿಗೆ ವಿಶೇಷ ಗಡಿ ಆಡಳಿತದ ಲಾಭವನ್ನು ಪಡೆದುಕೊಳ್ಳುವ ಮೂರನೇ ದೇಶದ ಪ್ರಜೆಗಳ ಅಕ್ರಮ ಸಾಗಣೆಯು ಕಳವಳಕ್ಕೆ ಕಾರಣವಾಗಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ಗಡಿಯುದ್ದಕ್ಕೂ, ಎರಡೂ ದೇಶಗಳಲ್ಲಿ 16 ಕಿಮೀ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಮುಕ್ತ ಚಲನೆಗೆ ಆಡಳಿತ ವ್ಯವಸ್ಥೆ ಅನುವು ಮಾಡಿಕೊಟ್ಟಿದೆ. ಎರಡು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ನಡೆದ ದಂಗೆಯ ನಂತರ ಮಿಜೋರಾಂಗೆ ನಿರಾಶ್ರಿತರ ಒಳಹರಿವು  ಹೆಚ್ಚಾಗಿದ್ದು, ಕಳವಳಕಾರಿಯಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...