ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಮುಂದಾದ ಪೊಲೀಸ್ ಪೇದೆಯ ಮೇಲೆ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹರಿಸಿದ ಕಾರಣ ಪೇದೆ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹುಲ್ಲೂರು ಗ್ರಾಮದಲ್ಲಿ ವರದಿಯಾಗಿದೆ.
ಗುರುವಾರ ಸಂಜೆ ಭೀಮಾ ನದಿ ತೀರದಿಂದ ಅಕ್ರಮ ಮರಳು ಸಾಗಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಪೇದೆ ಮಯೂರ ಚವ್ಹಾಣ (51) ಎಂಬುವವರು ತಡೆಯಲು ಮುಂದಾದಾಗ ಅವರ ಮೇಲೆ ಟ್ರಾಕ್ಟರ್ ಹರಿಸಿ ಕೊಲ್ಲಲಾಗಿದೆ ಎಂದು ಪೊಲೀಸರು ಎಫ್ಐಆರ್ ದಾಖಲಿಸಿ, ಸಿದ್ದಪ್ಪ ಕರ್ಜಗಿ ಎಂಬಾತನನ್ನು ಬಂಧಿಸಿದ್ದಾರೆ.
ಹುಲ್ಲೂರು ಗ್ರಾಮದಲ್ಲಿ ತಪಾಸಣೆ ನಡೆಸಲು ಚೆಕ್ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿಲ್ಲಿಸದೇ ತೆರಳುತ್ತಿದ್ದ ಟ್ರ್ಯಾಕ್ಟರ್ಗೆ ಅಡ್ಡಬಂದ ಪೊಲೀಸ್ ಮೇಲೆ ಹರಿಸಲಾಗಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್ 302, 333, 307, 379, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ.
Karnataka | A case has been registered under sections 302, 333, 307, 379, 504, and 506 of IPC against those who killed head constable Mayura Chauhan on June 15 while he was trying to stop a tractor transporting illegally mined sand near Narayanpur in Jewargi taluk of Kalaburagi.… pic.twitter.com/V2kHHJAW4v
— ANI (@ANI) June 16, 2023
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರು ಸಂತ್ರಸ್ತರ ಕುಟುಂಬದವರೊಡನೆ ಮಾತನಾಡಿದ್ದು, ಸೂಕ್ತ ತನಿಖೆ ಮತ್ತು ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ: ಬಿಜೆಪಿಯವರು ಅದೆಷ್ಟೇ ಷಡ್ಯಂತ್ರ ನಡೆಸಿದರೂ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸುವುದು ನಿಶ್ಚಿತ: ಕಾಂಗ್ರೆಸ್…