Homeಮುಖಪುಟರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

ರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 72 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಪ್ರಭುತ್ವ ಹಲವು ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಸಿಂಘು, ಟಿಕ್ರಿ ಗಾಝಿಪುರ್ ಗಡಿಗಳಲ್ಲಿ ಮುಳ್ಳು ತಂತಿ ಹಾಕುವುದು, ರಸ್ತೆಗೆ ಕಬ್ಬಿಣದ ಮುಳ್ಳುಗಳನ್ನು ನೆಡುವುದು, ಬ್ಯಾರಿಕೆಡ್‌ಗಳ ಮಧ್ಯೆ ಇರುವ ಸ್ಥಳ ತುಂಬಲು ಕಾಂಕ್ರಿಟ್ ಹಾಕಿ ಗೋಡೆಗಳ ನಿರ್ಮಾಣ ಮಾಡಲಾಗಿದೆ.

ಸಿಂಘು ಗಡಿಯಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ವೇದಿಕೆಗಳ ನಡುವೆ ಈಗಾಗಲೇ ಬ್ಯಾರಿಕಡ್ ಮತ್ತು ಮುಳ್ಳುತಂತಿ ಹಾಕಲಾಗಿದೆ. ನಿನ್ನೆ (ಫೆಬ್ರವರಿ) ರಸ್ತೆಗಳಲ್ಲಿ ಗುಂಡಿಗಳನ್ನೂ ತೊಡಲಾಗಿದೆ. ಈಗ ಈ ಎರಡು ವೇದಿಕೆಗಳ ಮಧ್ಯೆ ಇರುವ ಒಂದೇ ಒಂದು ಪುಟ್ಟ ಗಲ್ಲಿಯನ್ನು ಮುಚ್ಚಲು ಹೊರಟಿದ್ದಾರೆ.

ಈ ದಾರಿಯೊಂದೆ ಪ್ರತಿಭಟನಾಕಾರರನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿದೆ. ಎರಡು ವೇದಿಕೆಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈಗಾಗಲೇ ಸರ್ಕಾರ ಹಲವು ಪ್ರಯತ್ನಗಳನ್ನು ನಡೆಸಿದೆ. ಈ ಗಲ್ಲಿ ಮೂಲಕ ದೆಹಲಿ ಭಾಗದ ವೇದಿಕೆಯ ಜನರು ಹರಿಯಾಣ ಭಾಗದಲ್ಲಿರುವ ಲಂಗರ್‌ಗಳಿಗೆ ಹೋಗುತ್ತಾರೆ. ಈಗ ಈ ಗಲ್ಲಿಯನ್ನು ಬಂದ್ ಮಾಡಲು ತೊಡಗಿದ್ದು, ರೈತ ಸ್ವಯಂ ಸೇವಕರು ಗಲ್ಲಿ ಬಂದ್ ಮಾಡದಂತೆ ಪಹರೆ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಇದಲ್ಲದೇ ಸಿಂಘು ಗಡಿಗೆ ಪ್ರತಿಭಟನಾ ಬೆಂಬಲಿಗರು ಮತ್ತು ಪತ್ರಕಾರರು ಹೋಗದಂತೆ ತಡೆಯಲು ಕುಂಡ್ಲಿ ಬಾರ್ಡರ್ ಕೂಡ ಬಂದ್ ಮಾಡಲು ಯೋಜನೆ ರೂಪಿಸುತ್ತಿದೆ. ದೆಹಲಿಯಿಂದ ಹೋಗುವವರು ಸಿಂಘು ಗಡಿಗೆ ಸಮೀಪವಿರುವ ನರೇಲಾ ಬಳಿ ಇಳಿದುಕೊಂಡು ಇಲ್ಲಿಂದ ಮತ್ತೊಂದು ವಾಹನದ ಮೂಲಕ ಕುಂಡ್ಲಿ ಬಾರ್ಡರ್ ತಲುಪಬೇಕಾಗುತ್ತದೆ. ಅಥವಾ ಕುಂಡ್ಲಿ ಬಾರ್ಡರ್‌ಗೆ ವಾಹನ ಸಿಕ್ಕರೆ ಅಲ್ಲಿಯೇ ಇಳಿದುಕೊಂಡು ಬ್ಯಾರಿಕೇಡ್ ದಾಟಿ ಹರಿಯಾಣ ಭಾಗದ ವಾಹನ ತೆಗೆದುಕೊಳ್ಳಬೇಕು. ಹರಿಯಾಣ ಮೂಲಕ ಆಟೋಗಳಲ್ಲಿ ಹೋಗಿ ಪ್ರತಿಭಟನಾ ಸ್ಥಳಕ್ಕೆ ಹತ್ತಿರವಾಗುವ ಜಾಗದಲ್ಲಿ ಇಳಿದುಕೊಂಡು ಸಿಂಘು ಬಾರ್ಡರ್ ತಲುಪಬೇಕು.

ಈ ಕುಂಡ್ಲಿ ಬಾರ್ಡರ್ ಮೂಲಕ ಈಗ ಜನರು ಸಿಂಘು ಬಾರ್ಡರ್ ತಲುಪುತಿದ್ದು ಅಲ್ಲಿಯೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಪಹರೆಯನ್ನು ಹಾಕಿದೆ. ಒಂದು ದಿನದ ಅಂತರದಲ್ಲಿ ಕುಂಡ್ಲಿ ಬಾರ್ಡರ್ ಬಳಿಯೇ ಒಂದು ಕಿಲೋಮೀಟರ್ ದೂರದಲ್ಲಿ ವಾಹನ ನಿಲ್ಲುವಂತೆ ಮಾಡಿದೆ. ಇದರಿಂದ ಪ್ರತಿಭಟನಾಕಾರರನ್ನು ತಲುಪಲು ಮತ್ತಷ್ಟು ತೊಂದರೆಯಾಗಲಿದೆ. ಇಂಟರ್ನೆಟ್ ಸಂಪರ್ಕ ಇಲ್ಲದ ಕಾರಣ ಆಟೋ, ಟ್ಯಾಕ್ಸಿಗಳು ಕೇಳಿದಷ್ಟು ಹಣಕೊಟ್ಟು ಇಲ್ಲಿಗೆ ಬರಬೇಕಾದ ಪರಿಸ್ಥತಿ ಪ್ರತಿಭಟನಾ ಬೆಂಬಲಿಗರಿಗೆ ಬಂದಿದೆ.

ಈ ಸ್ಥಳಗಳಿಗೆ ತಲುಪಲು ಕೂಡ ನಾವು ಸ್ಥಳೀಯರಂತೆ ಕಾಣುವುದು ಮುಖ್ಯ. ಬೇರೆ ಭಾಗಗಳಿಂದ ಬಂದವರಂತೆ ತೋರಿಸಿಕೊಂಡರೇ ಬಾರ್ಡರ್‌ಗಳಿಂದಲೇ ವಾಪಸ್ ಕಳುಹಿಸಲಾಗುತ್ತದೆ. ಕುಂಡ್ಲಿ ಬಾರ್ಡರ್ನಲ್ಲಿಯೂ ಬಸ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿದೆ.

ರೈತ ಹೋರಾಟ ಜಾಗತಿಕವಾಗಿ ಚರ್ಚೆಗೆ ಬಂದಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿರುವ ಗಾಝಿಪುರ್ ಗಡಿಯಲ್ಲಿ, ಪೊಲೀಸರು ಹಾಕಿದ್ದ ಕಬ್ಬಿಣದ ಮೊಳೆಗಳನ್ನು ತೆಗೆಯಲಾಗಿದೆ. ಆದರೆ ಸಣ್ಣ ಸಣ್ಣ ದಾರಿಗಳ ಮೂಲಕ ಪ್ರತಿಭಟನಾ ಸ್ಥಳಗಳನ್ನು ಸೇರಿಕೊಳ್ಳುವವರನ್ನು ತಡೆಯುವ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...