Homeಮುಖಪುಟರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

ರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 72 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಪ್ರಭುತ್ವ ಹಲವು ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಸಿಂಘು, ಟಿಕ್ರಿ ಗಾಝಿಪುರ್ ಗಡಿಗಳಲ್ಲಿ ಮುಳ್ಳು ತಂತಿ ಹಾಕುವುದು, ರಸ್ತೆಗೆ ಕಬ್ಬಿಣದ ಮುಳ್ಳುಗಳನ್ನು ನೆಡುವುದು, ಬ್ಯಾರಿಕೆಡ್‌ಗಳ ಮಧ್ಯೆ ಇರುವ ಸ್ಥಳ ತುಂಬಲು ಕಾಂಕ್ರಿಟ್ ಹಾಕಿ ಗೋಡೆಗಳ ನಿರ್ಮಾಣ ಮಾಡಲಾಗಿದೆ.

ಸಿಂಘು ಗಡಿಯಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ವೇದಿಕೆಗಳ ನಡುವೆ ಈಗಾಗಲೇ ಬ್ಯಾರಿಕಡ್ ಮತ್ತು ಮುಳ್ಳುತಂತಿ ಹಾಕಲಾಗಿದೆ. ನಿನ್ನೆ (ಫೆಬ್ರವರಿ) ರಸ್ತೆಗಳಲ್ಲಿ ಗುಂಡಿಗಳನ್ನೂ ತೊಡಲಾಗಿದೆ. ಈಗ ಈ ಎರಡು ವೇದಿಕೆಗಳ ಮಧ್ಯೆ ಇರುವ ಒಂದೇ ಒಂದು ಪುಟ್ಟ ಗಲ್ಲಿಯನ್ನು ಮುಚ್ಚಲು ಹೊರಟಿದ್ದಾರೆ.

ಈ ದಾರಿಯೊಂದೆ ಪ್ರತಿಭಟನಾಕಾರರನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿದೆ. ಎರಡು ವೇದಿಕೆಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈಗಾಗಲೇ ಸರ್ಕಾರ ಹಲವು ಪ್ರಯತ್ನಗಳನ್ನು ನಡೆಸಿದೆ. ಈ ಗಲ್ಲಿ ಮೂಲಕ ದೆಹಲಿ ಭಾಗದ ವೇದಿಕೆಯ ಜನರು ಹರಿಯಾಣ ಭಾಗದಲ್ಲಿರುವ ಲಂಗರ್‌ಗಳಿಗೆ ಹೋಗುತ್ತಾರೆ. ಈಗ ಈ ಗಲ್ಲಿಯನ್ನು ಬಂದ್ ಮಾಡಲು ತೊಡಗಿದ್ದು, ರೈತ ಸ್ವಯಂ ಸೇವಕರು ಗಲ್ಲಿ ಬಂದ್ ಮಾಡದಂತೆ ಪಹರೆ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಇದಲ್ಲದೇ ಸಿಂಘು ಗಡಿಗೆ ಪ್ರತಿಭಟನಾ ಬೆಂಬಲಿಗರು ಮತ್ತು ಪತ್ರಕಾರರು ಹೋಗದಂತೆ ತಡೆಯಲು ಕುಂಡ್ಲಿ ಬಾರ್ಡರ್ ಕೂಡ ಬಂದ್ ಮಾಡಲು ಯೋಜನೆ ರೂಪಿಸುತ್ತಿದೆ. ದೆಹಲಿಯಿಂದ ಹೋಗುವವರು ಸಿಂಘು ಗಡಿಗೆ ಸಮೀಪವಿರುವ ನರೇಲಾ ಬಳಿ ಇಳಿದುಕೊಂಡು ಇಲ್ಲಿಂದ ಮತ್ತೊಂದು ವಾಹನದ ಮೂಲಕ ಕುಂಡ್ಲಿ ಬಾರ್ಡರ್ ತಲುಪಬೇಕಾಗುತ್ತದೆ. ಅಥವಾ ಕುಂಡ್ಲಿ ಬಾರ್ಡರ್‌ಗೆ ವಾಹನ ಸಿಕ್ಕರೆ ಅಲ್ಲಿಯೇ ಇಳಿದುಕೊಂಡು ಬ್ಯಾರಿಕೇಡ್ ದಾಟಿ ಹರಿಯಾಣ ಭಾಗದ ವಾಹನ ತೆಗೆದುಕೊಳ್ಳಬೇಕು. ಹರಿಯಾಣ ಮೂಲಕ ಆಟೋಗಳಲ್ಲಿ ಹೋಗಿ ಪ್ರತಿಭಟನಾ ಸ್ಥಳಕ್ಕೆ ಹತ್ತಿರವಾಗುವ ಜಾಗದಲ್ಲಿ ಇಳಿದುಕೊಂಡು ಸಿಂಘು ಬಾರ್ಡರ್ ತಲುಪಬೇಕು.

ಈ ಕುಂಡ್ಲಿ ಬಾರ್ಡರ್ ಮೂಲಕ ಈಗ ಜನರು ಸಿಂಘು ಬಾರ್ಡರ್ ತಲುಪುತಿದ್ದು ಅಲ್ಲಿಯೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಪಹರೆಯನ್ನು ಹಾಕಿದೆ. ಒಂದು ದಿನದ ಅಂತರದಲ್ಲಿ ಕುಂಡ್ಲಿ ಬಾರ್ಡರ್ ಬಳಿಯೇ ಒಂದು ಕಿಲೋಮೀಟರ್ ದೂರದಲ್ಲಿ ವಾಹನ ನಿಲ್ಲುವಂತೆ ಮಾಡಿದೆ. ಇದರಿಂದ ಪ್ರತಿಭಟನಾಕಾರರನ್ನು ತಲುಪಲು ಮತ್ತಷ್ಟು ತೊಂದರೆಯಾಗಲಿದೆ. ಇಂಟರ್ನೆಟ್ ಸಂಪರ್ಕ ಇಲ್ಲದ ಕಾರಣ ಆಟೋ, ಟ್ಯಾಕ್ಸಿಗಳು ಕೇಳಿದಷ್ಟು ಹಣಕೊಟ್ಟು ಇಲ್ಲಿಗೆ ಬರಬೇಕಾದ ಪರಿಸ್ಥತಿ ಪ್ರತಿಭಟನಾ ಬೆಂಬಲಿಗರಿಗೆ ಬಂದಿದೆ.

ಈ ಸ್ಥಳಗಳಿಗೆ ತಲುಪಲು ಕೂಡ ನಾವು ಸ್ಥಳೀಯರಂತೆ ಕಾಣುವುದು ಮುಖ್ಯ. ಬೇರೆ ಭಾಗಗಳಿಂದ ಬಂದವರಂತೆ ತೋರಿಸಿಕೊಂಡರೇ ಬಾರ್ಡರ್‌ಗಳಿಂದಲೇ ವಾಪಸ್ ಕಳುಹಿಸಲಾಗುತ್ತದೆ. ಕುಂಡ್ಲಿ ಬಾರ್ಡರ್ನಲ್ಲಿಯೂ ಬಸ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿದೆ.

ರೈತ ಹೋರಾಟ ಜಾಗತಿಕವಾಗಿ ಚರ್ಚೆಗೆ ಬಂದಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿರುವ ಗಾಝಿಪುರ್ ಗಡಿಯಲ್ಲಿ, ಪೊಲೀಸರು ಹಾಕಿದ್ದ ಕಬ್ಬಿಣದ ಮೊಳೆಗಳನ್ನು ತೆಗೆಯಲಾಗಿದೆ. ಆದರೆ ಸಣ್ಣ ಸಣ್ಣ ದಾರಿಗಳ ಮೂಲಕ ಪ್ರತಿಭಟನಾ ಸ್ಥಳಗಳನ್ನು ಸೇರಿಕೊಳ್ಳುವವರನ್ನು ತಡೆಯುವ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...