Homeಮುಖಪುಟರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

ರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 72 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಪ್ರಭುತ್ವ ಹಲವು ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಸಿಂಘು, ಟಿಕ್ರಿ ಗಾಝಿಪುರ್ ಗಡಿಗಳಲ್ಲಿ ಮುಳ್ಳು ತಂತಿ ಹಾಕುವುದು, ರಸ್ತೆಗೆ ಕಬ್ಬಿಣದ ಮುಳ್ಳುಗಳನ್ನು ನೆಡುವುದು, ಬ್ಯಾರಿಕೆಡ್‌ಗಳ ಮಧ್ಯೆ ಇರುವ ಸ್ಥಳ ತುಂಬಲು ಕಾಂಕ್ರಿಟ್ ಹಾಕಿ ಗೋಡೆಗಳ ನಿರ್ಮಾಣ ಮಾಡಲಾಗಿದೆ.

ಸಿಂಘು ಗಡಿಯಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ವೇದಿಕೆಗಳ ನಡುವೆ ಈಗಾಗಲೇ ಬ್ಯಾರಿಕಡ್ ಮತ್ತು ಮುಳ್ಳುತಂತಿ ಹಾಕಲಾಗಿದೆ. ನಿನ್ನೆ (ಫೆಬ್ರವರಿ) ರಸ್ತೆಗಳಲ್ಲಿ ಗುಂಡಿಗಳನ್ನೂ ತೊಡಲಾಗಿದೆ. ಈಗ ಈ ಎರಡು ವೇದಿಕೆಗಳ ಮಧ್ಯೆ ಇರುವ ಒಂದೇ ಒಂದು ಪುಟ್ಟ ಗಲ್ಲಿಯನ್ನು ಮುಚ್ಚಲು ಹೊರಟಿದ್ದಾರೆ.

ಈ ದಾರಿಯೊಂದೆ ಪ್ರತಿಭಟನಾಕಾರರನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿದೆ. ಎರಡು ವೇದಿಕೆಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈಗಾಗಲೇ ಸರ್ಕಾರ ಹಲವು ಪ್ರಯತ್ನಗಳನ್ನು ನಡೆಸಿದೆ. ಈ ಗಲ್ಲಿ ಮೂಲಕ ದೆಹಲಿ ಭಾಗದ ವೇದಿಕೆಯ ಜನರು ಹರಿಯಾಣ ಭಾಗದಲ್ಲಿರುವ ಲಂಗರ್‌ಗಳಿಗೆ ಹೋಗುತ್ತಾರೆ. ಈಗ ಈ ಗಲ್ಲಿಯನ್ನು ಬಂದ್ ಮಾಡಲು ತೊಡಗಿದ್ದು, ರೈತ ಸ್ವಯಂ ಸೇವಕರು ಗಲ್ಲಿ ಬಂದ್ ಮಾಡದಂತೆ ಪಹರೆ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಇದಲ್ಲದೇ ಸಿಂಘು ಗಡಿಗೆ ಪ್ರತಿಭಟನಾ ಬೆಂಬಲಿಗರು ಮತ್ತು ಪತ್ರಕಾರರು ಹೋಗದಂತೆ ತಡೆಯಲು ಕುಂಡ್ಲಿ ಬಾರ್ಡರ್ ಕೂಡ ಬಂದ್ ಮಾಡಲು ಯೋಜನೆ ರೂಪಿಸುತ್ತಿದೆ. ದೆಹಲಿಯಿಂದ ಹೋಗುವವರು ಸಿಂಘು ಗಡಿಗೆ ಸಮೀಪವಿರುವ ನರೇಲಾ ಬಳಿ ಇಳಿದುಕೊಂಡು ಇಲ್ಲಿಂದ ಮತ್ತೊಂದು ವಾಹನದ ಮೂಲಕ ಕುಂಡ್ಲಿ ಬಾರ್ಡರ್ ತಲುಪಬೇಕಾಗುತ್ತದೆ. ಅಥವಾ ಕುಂಡ್ಲಿ ಬಾರ್ಡರ್‌ಗೆ ವಾಹನ ಸಿಕ್ಕರೆ ಅಲ್ಲಿಯೇ ಇಳಿದುಕೊಂಡು ಬ್ಯಾರಿಕೇಡ್ ದಾಟಿ ಹರಿಯಾಣ ಭಾಗದ ವಾಹನ ತೆಗೆದುಕೊಳ್ಳಬೇಕು. ಹರಿಯಾಣ ಮೂಲಕ ಆಟೋಗಳಲ್ಲಿ ಹೋಗಿ ಪ್ರತಿಭಟನಾ ಸ್ಥಳಕ್ಕೆ ಹತ್ತಿರವಾಗುವ ಜಾಗದಲ್ಲಿ ಇಳಿದುಕೊಂಡು ಸಿಂಘು ಬಾರ್ಡರ್ ತಲುಪಬೇಕು.

ಈ ಕುಂಡ್ಲಿ ಬಾರ್ಡರ್ ಮೂಲಕ ಈಗ ಜನರು ಸಿಂಘು ಬಾರ್ಡರ್ ತಲುಪುತಿದ್ದು ಅಲ್ಲಿಯೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಪಹರೆಯನ್ನು ಹಾಕಿದೆ. ಒಂದು ದಿನದ ಅಂತರದಲ್ಲಿ ಕುಂಡ್ಲಿ ಬಾರ್ಡರ್ ಬಳಿಯೇ ಒಂದು ಕಿಲೋಮೀಟರ್ ದೂರದಲ್ಲಿ ವಾಹನ ನಿಲ್ಲುವಂತೆ ಮಾಡಿದೆ. ಇದರಿಂದ ಪ್ರತಿಭಟನಾಕಾರರನ್ನು ತಲುಪಲು ಮತ್ತಷ್ಟು ತೊಂದರೆಯಾಗಲಿದೆ. ಇಂಟರ್ನೆಟ್ ಸಂಪರ್ಕ ಇಲ್ಲದ ಕಾರಣ ಆಟೋ, ಟ್ಯಾಕ್ಸಿಗಳು ಕೇಳಿದಷ್ಟು ಹಣಕೊಟ್ಟು ಇಲ್ಲಿಗೆ ಬರಬೇಕಾದ ಪರಿಸ್ಥತಿ ಪ್ರತಿಭಟನಾ ಬೆಂಬಲಿಗರಿಗೆ ಬಂದಿದೆ.

ಈ ಸ್ಥಳಗಳಿಗೆ ತಲುಪಲು ಕೂಡ ನಾವು ಸ್ಥಳೀಯರಂತೆ ಕಾಣುವುದು ಮುಖ್ಯ. ಬೇರೆ ಭಾಗಗಳಿಂದ ಬಂದವರಂತೆ ತೋರಿಸಿಕೊಂಡರೇ ಬಾರ್ಡರ್‌ಗಳಿಂದಲೇ ವಾಪಸ್ ಕಳುಹಿಸಲಾಗುತ್ತದೆ. ಕುಂಡ್ಲಿ ಬಾರ್ಡರ್ನಲ್ಲಿಯೂ ಬಸ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿದೆ.

ರೈತ ಹೋರಾಟ ಜಾಗತಿಕವಾಗಿ ಚರ್ಚೆಗೆ ಬಂದಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿರುವ ಗಾಝಿಪುರ್ ಗಡಿಯಲ್ಲಿ, ಪೊಲೀಸರು ಹಾಕಿದ್ದ ಕಬ್ಬಿಣದ ಮೊಳೆಗಳನ್ನು ತೆಗೆಯಲಾಗಿದೆ. ಆದರೆ ಸಣ್ಣ ಸಣ್ಣ ದಾರಿಗಳ ಮೂಲಕ ಪ್ರತಿಭಟನಾ ಸ್ಥಳಗಳನ್ನು ಸೇರಿಕೊಳ್ಳುವವರನ್ನು ತಡೆಯುವ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...