Homeಮುಖಪುಟರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

ರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 72 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಪ್ರಭುತ್ವ ಹಲವು ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಸಿಂಘು, ಟಿಕ್ರಿ ಗಾಝಿಪುರ್ ಗಡಿಗಳಲ್ಲಿ ಮುಳ್ಳು ತಂತಿ ಹಾಕುವುದು, ರಸ್ತೆಗೆ ಕಬ್ಬಿಣದ ಮುಳ್ಳುಗಳನ್ನು ನೆಡುವುದು, ಬ್ಯಾರಿಕೆಡ್‌ಗಳ ಮಧ್ಯೆ ಇರುವ ಸ್ಥಳ ತುಂಬಲು ಕಾಂಕ್ರಿಟ್ ಹಾಕಿ ಗೋಡೆಗಳ ನಿರ್ಮಾಣ ಮಾಡಲಾಗಿದೆ.

ಸಿಂಘು ಗಡಿಯಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ವೇದಿಕೆಗಳ ನಡುವೆ ಈಗಾಗಲೇ ಬ್ಯಾರಿಕಡ್ ಮತ್ತು ಮುಳ್ಳುತಂತಿ ಹಾಕಲಾಗಿದೆ. ನಿನ್ನೆ (ಫೆಬ್ರವರಿ) ರಸ್ತೆಗಳಲ್ಲಿ ಗುಂಡಿಗಳನ್ನೂ ತೊಡಲಾಗಿದೆ. ಈಗ ಈ ಎರಡು ವೇದಿಕೆಗಳ ಮಧ್ಯೆ ಇರುವ ಒಂದೇ ಒಂದು ಪುಟ್ಟ ಗಲ್ಲಿಯನ್ನು ಮುಚ್ಚಲು ಹೊರಟಿದ್ದಾರೆ.

ಈ ದಾರಿಯೊಂದೆ ಪ್ರತಿಭಟನಾಕಾರರನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿದೆ. ಎರಡು ವೇದಿಕೆಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈಗಾಗಲೇ ಸರ್ಕಾರ ಹಲವು ಪ್ರಯತ್ನಗಳನ್ನು ನಡೆಸಿದೆ. ಈ ಗಲ್ಲಿ ಮೂಲಕ ದೆಹಲಿ ಭಾಗದ ವೇದಿಕೆಯ ಜನರು ಹರಿಯಾಣ ಭಾಗದಲ್ಲಿರುವ ಲಂಗರ್‌ಗಳಿಗೆ ಹೋಗುತ್ತಾರೆ. ಈಗ ಈ ಗಲ್ಲಿಯನ್ನು ಬಂದ್ ಮಾಡಲು ತೊಡಗಿದ್ದು, ರೈತ ಸ್ವಯಂ ಸೇವಕರು ಗಲ್ಲಿ ಬಂದ್ ಮಾಡದಂತೆ ಪಹರೆ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಇದಲ್ಲದೇ ಸಿಂಘು ಗಡಿಗೆ ಪ್ರತಿಭಟನಾ ಬೆಂಬಲಿಗರು ಮತ್ತು ಪತ್ರಕಾರರು ಹೋಗದಂತೆ ತಡೆಯಲು ಕುಂಡ್ಲಿ ಬಾರ್ಡರ್ ಕೂಡ ಬಂದ್ ಮಾಡಲು ಯೋಜನೆ ರೂಪಿಸುತ್ತಿದೆ. ದೆಹಲಿಯಿಂದ ಹೋಗುವವರು ಸಿಂಘು ಗಡಿಗೆ ಸಮೀಪವಿರುವ ನರೇಲಾ ಬಳಿ ಇಳಿದುಕೊಂಡು ಇಲ್ಲಿಂದ ಮತ್ತೊಂದು ವಾಹನದ ಮೂಲಕ ಕುಂಡ್ಲಿ ಬಾರ್ಡರ್ ತಲುಪಬೇಕಾಗುತ್ತದೆ. ಅಥವಾ ಕುಂಡ್ಲಿ ಬಾರ್ಡರ್‌ಗೆ ವಾಹನ ಸಿಕ್ಕರೆ ಅಲ್ಲಿಯೇ ಇಳಿದುಕೊಂಡು ಬ್ಯಾರಿಕೇಡ್ ದಾಟಿ ಹರಿಯಾಣ ಭಾಗದ ವಾಹನ ತೆಗೆದುಕೊಳ್ಳಬೇಕು. ಹರಿಯಾಣ ಮೂಲಕ ಆಟೋಗಳಲ್ಲಿ ಹೋಗಿ ಪ್ರತಿಭಟನಾ ಸ್ಥಳಕ್ಕೆ ಹತ್ತಿರವಾಗುವ ಜಾಗದಲ್ಲಿ ಇಳಿದುಕೊಂಡು ಸಿಂಘು ಬಾರ್ಡರ್ ತಲುಪಬೇಕು.

ಈ ಕುಂಡ್ಲಿ ಬಾರ್ಡರ್ ಮೂಲಕ ಈಗ ಜನರು ಸಿಂಘು ಬಾರ್ಡರ್ ತಲುಪುತಿದ್ದು ಅಲ್ಲಿಯೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಪಹರೆಯನ್ನು ಹಾಕಿದೆ. ಒಂದು ದಿನದ ಅಂತರದಲ್ಲಿ ಕುಂಡ್ಲಿ ಬಾರ್ಡರ್ ಬಳಿಯೇ ಒಂದು ಕಿಲೋಮೀಟರ್ ದೂರದಲ್ಲಿ ವಾಹನ ನಿಲ್ಲುವಂತೆ ಮಾಡಿದೆ. ಇದರಿಂದ ಪ್ರತಿಭಟನಾಕಾರರನ್ನು ತಲುಪಲು ಮತ್ತಷ್ಟು ತೊಂದರೆಯಾಗಲಿದೆ. ಇಂಟರ್ನೆಟ್ ಸಂಪರ್ಕ ಇಲ್ಲದ ಕಾರಣ ಆಟೋ, ಟ್ಯಾಕ್ಸಿಗಳು ಕೇಳಿದಷ್ಟು ಹಣಕೊಟ್ಟು ಇಲ್ಲಿಗೆ ಬರಬೇಕಾದ ಪರಿಸ್ಥತಿ ಪ್ರತಿಭಟನಾ ಬೆಂಬಲಿಗರಿಗೆ ಬಂದಿದೆ.

ಈ ಸ್ಥಳಗಳಿಗೆ ತಲುಪಲು ಕೂಡ ನಾವು ಸ್ಥಳೀಯರಂತೆ ಕಾಣುವುದು ಮುಖ್ಯ. ಬೇರೆ ಭಾಗಗಳಿಂದ ಬಂದವರಂತೆ ತೋರಿಸಿಕೊಂಡರೇ ಬಾರ್ಡರ್‌ಗಳಿಂದಲೇ ವಾಪಸ್ ಕಳುಹಿಸಲಾಗುತ್ತದೆ. ಕುಂಡ್ಲಿ ಬಾರ್ಡರ್ನಲ್ಲಿಯೂ ಬಸ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿದೆ.

ರೈತ ಹೋರಾಟ ಜಾಗತಿಕವಾಗಿ ಚರ್ಚೆಗೆ ಬಂದಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿರುವ ಗಾಝಿಪುರ್ ಗಡಿಯಲ್ಲಿ, ಪೊಲೀಸರು ಹಾಕಿದ್ದ ಕಬ್ಬಿಣದ ಮೊಳೆಗಳನ್ನು ತೆಗೆಯಲಾಗಿದೆ. ಆದರೆ ಸಣ್ಣ ಸಣ್ಣ ದಾರಿಗಳ ಮೂಲಕ ಪ್ರತಿಭಟನಾ ಸ್ಥಳಗಳನ್ನು ಸೇರಿಕೊಳ್ಳುವವರನ್ನು ತಡೆಯುವ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...