Homeಮುಖಪುಟರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

ರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 72 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಪ್ರಭುತ್ವ ಹಲವು ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಸಿಂಘು, ಟಿಕ್ರಿ ಗಾಝಿಪುರ್ ಗಡಿಗಳಲ್ಲಿ ಮುಳ್ಳು ತಂತಿ ಹಾಕುವುದು, ರಸ್ತೆಗೆ ಕಬ್ಬಿಣದ ಮುಳ್ಳುಗಳನ್ನು ನೆಡುವುದು, ಬ್ಯಾರಿಕೆಡ್‌ಗಳ ಮಧ್ಯೆ ಇರುವ ಸ್ಥಳ ತುಂಬಲು ಕಾಂಕ್ರಿಟ್ ಹಾಕಿ ಗೋಡೆಗಳ ನಿರ್ಮಾಣ ಮಾಡಲಾಗಿದೆ.

ಸಿಂಘು ಗಡಿಯಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ವೇದಿಕೆಗಳ ನಡುವೆ ಈಗಾಗಲೇ ಬ್ಯಾರಿಕಡ್ ಮತ್ತು ಮುಳ್ಳುತಂತಿ ಹಾಕಲಾಗಿದೆ. ನಿನ್ನೆ (ಫೆಬ್ರವರಿ) ರಸ್ತೆಗಳಲ್ಲಿ ಗುಂಡಿಗಳನ್ನೂ ತೊಡಲಾಗಿದೆ. ಈಗ ಈ ಎರಡು ವೇದಿಕೆಗಳ ಮಧ್ಯೆ ಇರುವ ಒಂದೇ ಒಂದು ಪುಟ್ಟ ಗಲ್ಲಿಯನ್ನು ಮುಚ್ಚಲು ಹೊರಟಿದ್ದಾರೆ.

ಈ ದಾರಿಯೊಂದೆ ಪ್ರತಿಭಟನಾಕಾರರನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿದೆ. ಎರಡು ವೇದಿಕೆಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈಗಾಗಲೇ ಸರ್ಕಾರ ಹಲವು ಪ್ರಯತ್ನಗಳನ್ನು ನಡೆಸಿದೆ. ಈ ಗಲ್ಲಿ ಮೂಲಕ ದೆಹಲಿ ಭಾಗದ ವೇದಿಕೆಯ ಜನರು ಹರಿಯಾಣ ಭಾಗದಲ್ಲಿರುವ ಲಂಗರ್‌ಗಳಿಗೆ ಹೋಗುತ್ತಾರೆ. ಈಗ ಈ ಗಲ್ಲಿಯನ್ನು ಬಂದ್ ಮಾಡಲು ತೊಡಗಿದ್ದು, ರೈತ ಸ್ವಯಂ ಸೇವಕರು ಗಲ್ಲಿ ಬಂದ್ ಮಾಡದಂತೆ ಪಹರೆ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಇದಲ್ಲದೇ ಸಿಂಘು ಗಡಿಗೆ ಪ್ರತಿಭಟನಾ ಬೆಂಬಲಿಗರು ಮತ್ತು ಪತ್ರಕಾರರು ಹೋಗದಂತೆ ತಡೆಯಲು ಕುಂಡ್ಲಿ ಬಾರ್ಡರ್ ಕೂಡ ಬಂದ್ ಮಾಡಲು ಯೋಜನೆ ರೂಪಿಸುತ್ತಿದೆ. ದೆಹಲಿಯಿಂದ ಹೋಗುವವರು ಸಿಂಘು ಗಡಿಗೆ ಸಮೀಪವಿರುವ ನರೇಲಾ ಬಳಿ ಇಳಿದುಕೊಂಡು ಇಲ್ಲಿಂದ ಮತ್ತೊಂದು ವಾಹನದ ಮೂಲಕ ಕುಂಡ್ಲಿ ಬಾರ್ಡರ್ ತಲುಪಬೇಕಾಗುತ್ತದೆ. ಅಥವಾ ಕುಂಡ್ಲಿ ಬಾರ್ಡರ್‌ಗೆ ವಾಹನ ಸಿಕ್ಕರೆ ಅಲ್ಲಿಯೇ ಇಳಿದುಕೊಂಡು ಬ್ಯಾರಿಕೇಡ್ ದಾಟಿ ಹರಿಯಾಣ ಭಾಗದ ವಾಹನ ತೆಗೆದುಕೊಳ್ಳಬೇಕು. ಹರಿಯಾಣ ಮೂಲಕ ಆಟೋಗಳಲ್ಲಿ ಹೋಗಿ ಪ್ರತಿಭಟನಾ ಸ್ಥಳಕ್ಕೆ ಹತ್ತಿರವಾಗುವ ಜಾಗದಲ್ಲಿ ಇಳಿದುಕೊಂಡು ಸಿಂಘು ಬಾರ್ಡರ್ ತಲುಪಬೇಕು.

ಈ ಕುಂಡ್ಲಿ ಬಾರ್ಡರ್ ಮೂಲಕ ಈಗ ಜನರು ಸಿಂಘು ಬಾರ್ಡರ್ ತಲುಪುತಿದ್ದು ಅಲ್ಲಿಯೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಪಹರೆಯನ್ನು ಹಾಕಿದೆ. ಒಂದು ದಿನದ ಅಂತರದಲ್ಲಿ ಕುಂಡ್ಲಿ ಬಾರ್ಡರ್ ಬಳಿಯೇ ಒಂದು ಕಿಲೋಮೀಟರ್ ದೂರದಲ್ಲಿ ವಾಹನ ನಿಲ್ಲುವಂತೆ ಮಾಡಿದೆ. ಇದರಿಂದ ಪ್ರತಿಭಟನಾಕಾರರನ್ನು ತಲುಪಲು ಮತ್ತಷ್ಟು ತೊಂದರೆಯಾಗಲಿದೆ. ಇಂಟರ್ನೆಟ್ ಸಂಪರ್ಕ ಇಲ್ಲದ ಕಾರಣ ಆಟೋ, ಟ್ಯಾಕ್ಸಿಗಳು ಕೇಳಿದಷ್ಟು ಹಣಕೊಟ್ಟು ಇಲ್ಲಿಗೆ ಬರಬೇಕಾದ ಪರಿಸ್ಥತಿ ಪ್ರತಿಭಟನಾ ಬೆಂಬಲಿಗರಿಗೆ ಬಂದಿದೆ.

ಈ ಸ್ಥಳಗಳಿಗೆ ತಲುಪಲು ಕೂಡ ನಾವು ಸ್ಥಳೀಯರಂತೆ ಕಾಣುವುದು ಮುಖ್ಯ. ಬೇರೆ ಭಾಗಗಳಿಂದ ಬಂದವರಂತೆ ತೋರಿಸಿಕೊಂಡರೇ ಬಾರ್ಡರ್‌ಗಳಿಂದಲೇ ವಾಪಸ್ ಕಳುಹಿಸಲಾಗುತ್ತದೆ. ಕುಂಡ್ಲಿ ಬಾರ್ಡರ್ನಲ್ಲಿಯೂ ಬಸ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿದೆ.

ರೈತ ಹೋರಾಟ ಜಾಗತಿಕವಾಗಿ ಚರ್ಚೆಗೆ ಬಂದಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿರುವ ಗಾಝಿಪುರ್ ಗಡಿಯಲ್ಲಿ, ಪೊಲೀಸರು ಹಾಕಿದ್ದ ಕಬ್ಬಿಣದ ಮೊಳೆಗಳನ್ನು ತೆಗೆಯಲಾಗಿದೆ. ಆದರೆ ಸಣ್ಣ ಸಣ್ಣ ದಾರಿಗಳ ಮೂಲಕ ಪ್ರತಿಭಟನಾ ಸ್ಥಳಗಳನ್ನು ಸೇರಿಕೊಳ್ಳುವವರನ್ನು ತಡೆಯುವ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...