Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ ಎಂದು ರಾಜಸ್ಥಾನದ ದಲಿತ ಯುವಕ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ರೂಪಂಗಢ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 25 ವರ್ಷದ ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜಕೀಯ ಒತ್ತಡದಿಂದ ಪೊಲೀಸರು ತನ್ನ ದೂರಿನ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ‘ಡೆತ್‌ ನೋಟ್’ ಬರೆದಿದ್ದಾನೆ.

ಮೃತರನ್ನು ಓಂಪ್ರಕಾಶ್ ರಾಯಗಾರ್ ಎಂದು ಗುರುತಿಸಲಾಗಿದೆ. ರಾಯಗಾರ್‌ ಅವರ ಡೆತ್‌ನೋಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ತಮ್ಮ ದೈಹಿಕ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ರೂಪಂಗಢ ಪೊಲೀಸರು ಮತ್ತು ಪ್ರಭಾವಿ ಸಮುದಾಯದ ಸ್ಥಳೀಯರೊಬ್ಬರು ಪ್ರಕರಣದ ವರದಿಯನ್ನು ದುರ್ಬಲಗೊಳಿಸಿದರು, ರಾಜಕೀಯ ಒತ್ತಡವನ್ನು ಸೃಷ್ಟಿಸಿದರು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ತಂದೆ ನಾರಾಯಣ್ ರಾಯಗಾರ್‌ ಅವರು ದೀಪಾವಳಿಯಂದು ನಮ್ಮ ಹೊಲದಲ್ಲಿ ಚೌಳೆಕಾಯಿ ಮತ್ತು ಸಜ್ಜೆ ಸಂಗ್ರಹಿಸುತ್ತಿದ್ದರು. ಆಗ ಕಿಷ್ಣರಾಮ್ ಗುರ್ಜರ್ ಎಂಬ ವ್ಯಕ್ತಿ ಮತ್ತು ಅವರ ಇಬ್ಬರು ಸೋದರಳಿಯರಾದ ಕನರಾಮ್, ನಂದರಾಮ್ ಅವರು ತಮ್ಮ ದನಗಳನ್ನು ಮೇಯಿಸಲು ಹೊಲಕ್ಕೆ ಬಂದರು. ನಮ್ಮ ತಂದೆ ವಿರೋಧಿಸಿದಾಗ ಹಲ್ಲೆ ನಡೆಸಿದರು” ಎಂದು ರಾಯಗಾರ್‌‌ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ನನ್ನ ತಂದೆ ಹೇಗೋ ಅವರಿಂದ ತಪ್ಪಿಸಿಕೊಂಡು ಊರಿನ ಕಡೆಗೆ ಓಡಿಬಂದರು. ಅವರು ನನಗೆ ಮತ್ತು ನನ್ನ ತಾಯಿಗೆ ಘಟನೆಯನ್ನು ವಿವರಿಸಿದರು. ನಾವು ಹೊಲದತ್ತ ಹೋದಾಗ, ಅವರು ನಮ್ಮನ್ನು ಸುತ್ತುವರೆದು ಜಾತಿ ನಿಂದನೆ ಮಾಡಿ ಅವಮಾನಿಸಿದರು. ಅವರು ನಮ್ಮೊಂದಿಗೆ ಪ್ರತಿ ವರ್ಷವೂ ಅದೇ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ನಾವು ಬೆಳೆಯನ್ನು ಬೆಳೆಯುವಾಗ ನಮಗೆ ತೊಂದರೆ ನೀಡಲು ತಮ್ಮ ಕುರಿ ಮತ್ತು ಮೇಕೆಗಳನ್ನು ಹೊಲದಲ್ಲಿ ಬಿಡುತ್ತಾರೆ” ಎಂದು ರಾಯಗಾರ್‌‌ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಸಂಕಟ ವ್ಯಕ್ತಪಡಿಸಿದ್ದಾರೆ.

ಅವರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದರು. ರಾಯಗಾರ್‌ ಕುಟುಂಬದ ವಿವರಗಳನ್ನು ಕೇಳುತ್ತಿದ್ದ ಅಧಿಕಾರಿಗೆ ಪ್ರಕರಣವನ್ನು ದಾಖಲಿಸಬೇಡಿ ಎಂಬ ಸೂಚನೆಯೊಂದು ಕರೆಯ ಮೂಲಕ ಬಂದು. ರಾಯಗಾರ್‌‌ ಅವರ ಕುಟುಂಬವನ್ನು ವೈದ್ಯಕೀಯ ಪರೀಕ್ಷೆ ಮಾಡಿದ ನಂತರ ಮನೆಗೆ ಕಳುಹಿಸಲಾಯಿತು. ಮರುದಿನ ಬರುವಂತೆ ಪೊಲೀಸರು ಹೇಳಿದ್ದರು.

“ನಾವು ಮರುದಿನ ಹೋದಾಗ, ಮತ್ತೆ ಮರುದಿನ ಬರಲು ಹೇಳಲಾಯಿತು. ನಾಳೆ ಬನ್ನಿ ಎಂದು ಹೇಳುವ ಮೂಲಕ ಪೊಲೀಸರು ವಿಳಂಬ ಮಾಡಿದರು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಪೊಲೀಸರಿಗೆ ಹೇಳಿದಾಗ ಅವರು ಎಫ್ಐಆರ್ ದಾಖಲಿಸಿದರು. ಆದರೆ ಪ್ರಕರಣವನ್ನು ದುರ್ಬಲಗೊಳಿಸಿದರು” ಎಂದು ಆತ್ಮಹತ್ಯೆ ಪತ್ರದಲ್ಲಿ ದೂರಲಾಗಿದೆ.

“…ನಮ್ಮ ಗ್ರಾಮದ ಮಾಜಿ ಸರಪಂಚ್ ರಂಜಿತ್ ಸಿಂಗ್ ರಾಥೋಡ್ ಮತ್ತು ಠಾಣಾಧಿಕಾರಿ ಅಯೂಬ್ ಖಾನ್ ಅವರು ನನ್ನ ಕಿರಿಯ ಸಹೋದರ ರಾಹುಲ್ ಮತ್ತು ನನ್ನ ಚಿಕ್ಕಪ್ಪ ಜುಗಲ್ಕಿಶೋರ್ ವಿರುದ್ಧ ನಕಲಿ ಎಫ್ಐಆರ್ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ರಾಯಗಾರ್‌ ತಿಳಿಸಿದ್ದಾರೆ.

“ತಂದೆ-ತಾಯಿಯ ಆತ್ಮಗೌರವವನ್ನು ಉಳಿಸಲಾಗಲಿಲ್ಲ. ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ. ಮಾಜಿ ಸರಪಂಚ್‌ಗೆ ರಾಜಕೀಯ ಶಕ್ತಿ ಇದೆ. ನಾನು ನೋಡುತ್ತಲೇ ಇದ್ದೆ. ಯಾವಾಗ ನಾನು ಕಾನೂನಿನ ಸಹಾಯವನ್ನು ಪಡೆಯಲು ಪ್ರಯತ್ನಿಸಿದೆನೋ, ಅವರು ನಮ್ಮ ವಿರುದ್ಧ ನಕಲಿ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ವಿವರಿಸಿದ್ದಾರೆ.

ತಾನು ಇಡುತ್ತಿರುವ ಹೆಜ್ಜೆಯನ್ನು “ತಪ್ಪು” ಎಂದು ಕರೆದುಕೊಂಡಿರುವ ರಾಯಗಾರ್‌ ತನ್ನ ತಾಯಿಯಲ್ಲಿ ಕ್ಷಮೆಯಾಚಿಸಿದ್ದಾರೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡದಂತೆ ಸಹೋದರಿ ನೀತೂ ಅವರಿಗೆ ಕೋರಿರುವ ರಾಯಗರ್, “… ಪಿತೂರಿಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಿ, ಎಲ್ಲವನ್ನೂ ಮಾರಾಟ ಮಾಡಿದರೂ ಸರಿ ಯಾರನ್ನೂ ಬಿಡಬೇಡಿ” ಎಂದು ಮನನೊಂದು ನುಡಿದಿದ್ದಾರೆ.

ಬುಧವಾರ ದಲಿತ ಜನ ಸಮೂಹವು ರಾಯಗಾರ್‌‌ ಅವರ ಕುಟುಂಬದ ಜೊತೆಗೂಡಿ ಸಮುದಾಯ ವೈದ್ಯಕೀಯ ಕೇಂದ್ರದ ಹೊರಗೆ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಂಡಿತು. ನ್ಯಾಯ ಸಿಗುವವರೆಗೂ ಶವವನ್ನು ತೆಗೆದುಕೊಳ್ಳಲು ನಿರಾಕರಿಸಲಾಯಿತು. ಭೀಮ್ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಕೂಡ ರೂಪಂಗಢಕ್ಕೆ ಬಂದು ಸೇರಿಕೊಂಡರು.

ರಾಯಗಾರ್‌ ಅವರ ಮನೆಗೆ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಗೋಪಾಲ್ಗಢ ಶಾಸಕ ಪುಖ್ರಾಜ್ ಗರ್ಗ್ ಭೇಟಿ ನೀಡಿದರು. ಮೃತರ ಸಂಬಂಧಿಕರಿಗೆ ಪರಿಹಾರ, ಸರ್ಕಾರಿ ನೌಕರಿ ಹಾಗೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನಾಲ್ಕು ಪೊಲೀಸ್ ಠಾಣೆಗಳಿಂದ ಪೊಲೀಸ್ ತಂಡಗಳು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಶರ್ಮಾ ಸ್ಥಳಕ್ಕೆ ಆಗಮಿಸಿ ದಲಿತ ಸಮುದಾಯವನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ ನಂತರ, ಶವಪರೀಕ್ಷೆಗೆ ಕುಟುಂಬ ಒಪ್ಪಿದೆ.

ಇದನ್ನೂ ಓದಿರಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ಸಂತ್ರಸ್ತೆಯ ಕುಟುಂಬದವರ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಮನೀಶ್ ಶರ್ಮಾ ತಿಳಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಲ್ವರ ವಿರುದ್ಧ ಆರೋಪ ಮಾಡಲಾಗಿದೆ. “ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

ಭೀಮ್ ಆರ್ಮಿಯ ಚಂದ್ರಶೇಖರ್ ಅವರು ಆಜಾದ್ ಪ್ರಕರಣವನ್ನು ಖಂಡಿಸಿದ್ದು, “ಓಂಪ್ರಕಾಶ್ ರಾಯಗಾರ್‌‌ ನಿಧನರಾಗಿ ಮೂರು ದಿನಗಳು ಕಳೆದರೂ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...