Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ ಎಂದು ರಾಜಸ್ಥಾನದ ದಲಿತ ಯುವಕ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ರೂಪಂಗಢ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 25 ವರ್ಷದ ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜಕೀಯ ಒತ್ತಡದಿಂದ ಪೊಲೀಸರು ತನ್ನ ದೂರಿನ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ‘ಡೆತ್‌ ನೋಟ್’ ಬರೆದಿದ್ದಾನೆ.

ಮೃತರನ್ನು ಓಂಪ್ರಕಾಶ್ ರಾಯಗಾರ್ ಎಂದು ಗುರುತಿಸಲಾಗಿದೆ. ರಾಯಗಾರ್‌ ಅವರ ಡೆತ್‌ನೋಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ತಮ್ಮ ದೈಹಿಕ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ರೂಪಂಗಢ ಪೊಲೀಸರು ಮತ್ತು ಪ್ರಭಾವಿ ಸಮುದಾಯದ ಸ್ಥಳೀಯರೊಬ್ಬರು ಪ್ರಕರಣದ ವರದಿಯನ್ನು ದುರ್ಬಲಗೊಳಿಸಿದರು, ರಾಜಕೀಯ ಒತ್ತಡವನ್ನು ಸೃಷ್ಟಿಸಿದರು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ತಂದೆ ನಾರಾಯಣ್ ರಾಯಗಾರ್‌ ಅವರು ದೀಪಾವಳಿಯಂದು ನಮ್ಮ ಹೊಲದಲ್ಲಿ ಚೌಳೆಕಾಯಿ ಮತ್ತು ಸಜ್ಜೆ ಸಂಗ್ರಹಿಸುತ್ತಿದ್ದರು. ಆಗ ಕಿಷ್ಣರಾಮ್ ಗುರ್ಜರ್ ಎಂಬ ವ್ಯಕ್ತಿ ಮತ್ತು ಅವರ ಇಬ್ಬರು ಸೋದರಳಿಯರಾದ ಕನರಾಮ್, ನಂದರಾಮ್ ಅವರು ತಮ್ಮ ದನಗಳನ್ನು ಮೇಯಿಸಲು ಹೊಲಕ್ಕೆ ಬಂದರು. ನಮ್ಮ ತಂದೆ ವಿರೋಧಿಸಿದಾಗ ಹಲ್ಲೆ ನಡೆಸಿದರು” ಎಂದು ರಾಯಗಾರ್‌‌ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ನನ್ನ ತಂದೆ ಹೇಗೋ ಅವರಿಂದ ತಪ್ಪಿಸಿಕೊಂಡು ಊರಿನ ಕಡೆಗೆ ಓಡಿಬಂದರು. ಅವರು ನನಗೆ ಮತ್ತು ನನ್ನ ತಾಯಿಗೆ ಘಟನೆಯನ್ನು ವಿವರಿಸಿದರು. ನಾವು ಹೊಲದತ್ತ ಹೋದಾಗ, ಅವರು ನಮ್ಮನ್ನು ಸುತ್ತುವರೆದು ಜಾತಿ ನಿಂದನೆ ಮಾಡಿ ಅವಮಾನಿಸಿದರು. ಅವರು ನಮ್ಮೊಂದಿಗೆ ಪ್ರತಿ ವರ್ಷವೂ ಅದೇ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ನಾವು ಬೆಳೆಯನ್ನು ಬೆಳೆಯುವಾಗ ನಮಗೆ ತೊಂದರೆ ನೀಡಲು ತಮ್ಮ ಕುರಿ ಮತ್ತು ಮೇಕೆಗಳನ್ನು ಹೊಲದಲ್ಲಿ ಬಿಡುತ್ತಾರೆ” ಎಂದು ರಾಯಗಾರ್‌‌ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಸಂಕಟ ವ್ಯಕ್ತಪಡಿಸಿದ್ದಾರೆ.

ಅವರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದರು. ರಾಯಗಾರ್‌ ಕುಟುಂಬದ ವಿವರಗಳನ್ನು ಕೇಳುತ್ತಿದ್ದ ಅಧಿಕಾರಿಗೆ ಪ್ರಕರಣವನ್ನು ದಾಖಲಿಸಬೇಡಿ ಎಂಬ ಸೂಚನೆಯೊಂದು ಕರೆಯ ಮೂಲಕ ಬಂದು. ರಾಯಗಾರ್‌‌ ಅವರ ಕುಟುಂಬವನ್ನು ವೈದ್ಯಕೀಯ ಪರೀಕ್ಷೆ ಮಾಡಿದ ನಂತರ ಮನೆಗೆ ಕಳುಹಿಸಲಾಯಿತು. ಮರುದಿನ ಬರುವಂತೆ ಪೊಲೀಸರು ಹೇಳಿದ್ದರು.

“ನಾವು ಮರುದಿನ ಹೋದಾಗ, ಮತ್ತೆ ಮರುದಿನ ಬರಲು ಹೇಳಲಾಯಿತು. ನಾಳೆ ಬನ್ನಿ ಎಂದು ಹೇಳುವ ಮೂಲಕ ಪೊಲೀಸರು ವಿಳಂಬ ಮಾಡಿದರು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಪೊಲೀಸರಿಗೆ ಹೇಳಿದಾಗ ಅವರು ಎಫ್ಐಆರ್ ದಾಖಲಿಸಿದರು. ಆದರೆ ಪ್ರಕರಣವನ್ನು ದುರ್ಬಲಗೊಳಿಸಿದರು” ಎಂದು ಆತ್ಮಹತ್ಯೆ ಪತ್ರದಲ್ಲಿ ದೂರಲಾಗಿದೆ.

“…ನಮ್ಮ ಗ್ರಾಮದ ಮಾಜಿ ಸರಪಂಚ್ ರಂಜಿತ್ ಸಿಂಗ್ ರಾಥೋಡ್ ಮತ್ತು ಠಾಣಾಧಿಕಾರಿ ಅಯೂಬ್ ಖಾನ್ ಅವರು ನನ್ನ ಕಿರಿಯ ಸಹೋದರ ರಾಹುಲ್ ಮತ್ತು ನನ್ನ ಚಿಕ್ಕಪ್ಪ ಜುಗಲ್ಕಿಶೋರ್ ವಿರುದ್ಧ ನಕಲಿ ಎಫ್ಐಆರ್ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ರಾಯಗಾರ್‌ ತಿಳಿಸಿದ್ದಾರೆ.

“ತಂದೆ-ತಾಯಿಯ ಆತ್ಮಗೌರವವನ್ನು ಉಳಿಸಲಾಗಲಿಲ್ಲ. ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ. ಮಾಜಿ ಸರಪಂಚ್‌ಗೆ ರಾಜಕೀಯ ಶಕ್ತಿ ಇದೆ. ನಾನು ನೋಡುತ್ತಲೇ ಇದ್ದೆ. ಯಾವಾಗ ನಾನು ಕಾನೂನಿನ ಸಹಾಯವನ್ನು ಪಡೆಯಲು ಪ್ರಯತ್ನಿಸಿದೆನೋ, ಅವರು ನಮ್ಮ ವಿರುದ್ಧ ನಕಲಿ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ವಿವರಿಸಿದ್ದಾರೆ.

ತಾನು ಇಡುತ್ತಿರುವ ಹೆಜ್ಜೆಯನ್ನು “ತಪ್ಪು” ಎಂದು ಕರೆದುಕೊಂಡಿರುವ ರಾಯಗಾರ್‌ ತನ್ನ ತಾಯಿಯಲ್ಲಿ ಕ್ಷಮೆಯಾಚಿಸಿದ್ದಾರೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡದಂತೆ ಸಹೋದರಿ ನೀತೂ ಅವರಿಗೆ ಕೋರಿರುವ ರಾಯಗರ್, “… ಪಿತೂರಿಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಿ, ಎಲ್ಲವನ್ನೂ ಮಾರಾಟ ಮಾಡಿದರೂ ಸರಿ ಯಾರನ್ನೂ ಬಿಡಬೇಡಿ” ಎಂದು ಮನನೊಂದು ನುಡಿದಿದ್ದಾರೆ.

ಬುಧವಾರ ದಲಿತ ಜನ ಸಮೂಹವು ರಾಯಗಾರ್‌‌ ಅವರ ಕುಟುಂಬದ ಜೊತೆಗೂಡಿ ಸಮುದಾಯ ವೈದ್ಯಕೀಯ ಕೇಂದ್ರದ ಹೊರಗೆ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಂಡಿತು. ನ್ಯಾಯ ಸಿಗುವವರೆಗೂ ಶವವನ್ನು ತೆಗೆದುಕೊಳ್ಳಲು ನಿರಾಕರಿಸಲಾಯಿತು. ಭೀಮ್ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಕೂಡ ರೂಪಂಗಢಕ್ಕೆ ಬಂದು ಸೇರಿಕೊಂಡರು.

ರಾಯಗಾರ್‌ ಅವರ ಮನೆಗೆ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಗೋಪಾಲ್ಗಢ ಶಾಸಕ ಪುಖ್ರಾಜ್ ಗರ್ಗ್ ಭೇಟಿ ನೀಡಿದರು. ಮೃತರ ಸಂಬಂಧಿಕರಿಗೆ ಪರಿಹಾರ, ಸರ್ಕಾರಿ ನೌಕರಿ ಹಾಗೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನಾಲ್ಕು ಪೊಲೀಸ್ ಠಾಣೆಗಳಿಂದ ಪೊಲೀಸ್ ತಂಡಗಳು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಶರ್ಮಾ ಸ್ಥಳಕ್ಕೆ ಆಗಮಿಸಿ ದಲಿತ ಸಮುದಾಯವನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ ನಂತರ, ಶವಪರೀಕ್ಷೆಗೆ ಕುಟುಂಬ ಒಪ್ಪಿದೆ.

ಇದನ್ನೂ ಓದಿರಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ಸಂತ್ರಸ್ತೆಯ ಕುಟುಂಬದವರ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಮನೀಶ್ ಶರ್ಮಾ ತಿಳಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಲ್ವರ ವಿರುದ್ಧ ಆರೋಪ ಮಾಡಲಾಗಿದೆ. “ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

ಭೀಮ್ ಆರ್ಮಿಯ ಚಂದ್ರಶೇಖರ್ ಅವರು ಆಜಾದ್ ಪ್ರಕರಣವನ್ನು ಖಂಡಿಸಿದ್ದು, “ಓಂಪ್ರಕಾಶ್ ರಾಯಗಾರ್‌‌ ನಿಧನರಾಗಿ ಮೂರು ದಿನಗಳು ಕಳೆದರೂ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...