Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ ಎಂದು ರಾಜಸ್ಥಾನದ ದಲಿತ ಯುವಕ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ರೂಪಂಗಢ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 25 ವರ್ಷದ ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜಕೀಯ ಒತ್ತಡದಿಂದ ಪೊಲೀಸರು ತನ್ನ ದೂರಿನ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ‘ಡೆತ್‌ ನೋಟ್’ ಬರೆದಿದ್ದಾನೆ.

ಮೃತರನ್ನು ಓಂಪ್ರಕಾಶ್ ರಾಯಗಾರ್ ಎಂದು ಗುರುತಿಸಲಾಗಿದೆ. ರಾಯಗಾರ್‌ ಅವರ ಡೆತ್‌ನೋಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ತಮ್ಮ ದೈಹಿಕ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ರೂಪಂಗಢ ಪೊಲೀಸರು ಮತ್ತು ಪ್ರಭಾವಿ ಸಮುದಾಯದ ಸ್ಥಳೀಯರೊಬ್ಬರು ಪ್ರಕರಣದ ವರದಿಯನ್ನು ದುರ್ಬಲಗೊಳಿಸಿದರು, ರಾಜಕೀಯ ಒತ್ತಡವನ್ನು ಸೃಷ್ಟಿಸಿದರು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ತಂದೆ ನಾರಾಯಣ್ ರಾಯಗಾರ್‌ ಅವರು ದೀಪಾವಳಿಯಂದು ನಮ್ಮ ಹೊಲದಲ್ಲಿ ಚೌಳೆಕಾಯಿ ಮತ್ತು ಸಜ್ಜೆ ಸಂಗ್ರಹಿಸುತ್ತಿದ್ದರು. ಆಗ ಕಿಷ್ಣರಾಮ್ ಗುರ್ಜರ್ ಎಂಬ ವ್ಯಕ್ತಿ ಮತ್ತು ಅವರ ಇಬ್ಬರು ಸೋದರಳಿಯರಾದ ಕನರಾಮ್, ನಂದರಾಮ್ ಅವರು ತಮ್ಮ ದನಗಳನ್ನು ಮೇಯಿಸಲು ಹೊಲಕ್ಕೆ ಬಂದರು. ನಮ್ಮ ತಂದೆ ವಿರೋಧಿಸಿದಾಗ ಹಲ್ಲೆ ನಡೆಸಿದರು” ಎಂದು ರಾಯಗಾರ್‌‌ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ನನ್ನ ತಂದೆ ಹೇಗೋ ಅವರಿಂದ ತಪ್ಪಿಸಿಕೊಂಡು ಊರಿನ ಕಡೆಗೆ ಓಡಿಬಂದರು. ಅವರು ನನಗೆ ಮತ್ತು ನನ್ನ ತಾಯಿಗೆ ಘಟನೆಯನ್ನು ವಿವರಿಸಿದರು. ನಾವು ಹೊಲದತ್ತ ಹೋದಾಗ, ಅವರು ನಮ್ಮನ್ನು ಸುತ್ತುವರೆದು ಜಾತಿ ನಿಂದನೆ ಮಾಡಿ ಅವಮಾನಿಸಿದರು. ಅವರು ನಮ್ಮೊಂದಿಗೆ ಪ್ರತಿ ವರ್ಷವೂ ಅದೇ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ನಾವು ಬೆಳೆಯನ್ನು ಬೆಳೆಯುವಾಗ ನಮಗೆ ತೊಂದರೆ ನೀಡಲು ತಮ್ಮ ಕುರಿ ಮತ್ತು ಮೇಕೆಗಳನ್ನು ಹೊಲದಲ್ಲಿ ಬಿಡುತ್ತಾರೆ” ಎಂದು ರಾಯಗಾರ್‌‌ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಸಂಕಟ ವ್ಯಕ್ತಪಡಿಸಿದ್ದಾರೆ.

ಅವರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದರು. ರಾಯಗಾರ್‌ ಕುಟುಂಬದ ವಿವರಗಳನ್ನು ಕೇಳುತ್ತಿದ್ದ ಅಧಿಕಾರಿಗೆ ಪ್ರಕರಣವನ್ನು ದಾಖಲಿಸಬೇಡಿ ಎಂಬ ಸೂಚನೆಯೊಂದು ಕರೆಯ ಮೂಲಕ ಬಂದು. ರಾಯಗಾರ್‌‌ ಅವರ ಕುಟುಂಬವನ್ನು ವೈದ್ಯಕೀಯ ಪರೀಕ್ಷೆ ಮಾಡಿದ ನಂತರ ಮನೆಗೆ ಕಳುಹಿಸಲಾಯಿತು. ಮರುದಿನ ಬರುವಂತೆ ಪೊಲೀಸರು ಹೇಳಿದ್ದರು.

“ನಾವು ಮರುದಿನ ಹೋದಾಗ, ಮತ್ತೆ ಮರುದಿನ ಬರಲು ಹೇಳಲಾಯಿತು. ನಾಳೆ ಬನ್ನಿ ಎಂದು ಹೇಳುವ ಮೂಲಕ ಪೊಲೀಸರು ವಿಳಂಬ ಮಾಡಿದರು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಪೊಲೀಸರಿಗೆ ಹೇಳಿದಾಗ ಅವರು ಎಫ್ಐಆರ್ ದಾಖಲಿಸಿದರು. ಆದರೆ ಪ್ರಕರಣವನ್ನು ದುರ್ಬಲಗೊಳಿಸಿದರು” ಎಂದು ಆತ್ಮಹತ್ಯೆ ಪತ್ರದಲ್ಲಿ ದೂರಲಾಗಿದೆ.

“…ನಮ್ಮ ಗ್ರಾಮದ ಮಾಜಿ ಸರಪಂಚ್ ರಂಜಿತ್ ಸಿಂಗ್ ರಾಥೋಡ್ ಮತ್ತು ಠಾಣಾಧಿಕಾರಿ ಅಯೂಬ್ ಖಾನ್ ಅವರು ನನ್ನ ಕಿರಿಯ ಸಹೋದರ ರಾಹುಲ್ ಮತ್ತು ನನ್ನ ಚಿಕ್ಕಪ್ಪ ಜುಗಲ್ಕಿಶೋರ್ ವಿರುದ್ಧ ನಕಲಿ ಎಫ್ಐಆರ್ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ರಾಯಗಾರ್‌ ತಿಳಿಸಿದ್ದಾರೆ.

“ತಂದೆ-ತಾಯಿಯ ಆತ್ಮಗೌರವವನ್ನು ಉಳಿಸಲಾಗಲಿಲ್ಲ. ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ. ಮಾಜಿ ಸರಪಂಚ್‌ಗೆ ರಾಜಕೀಯ ಶಕ್ತಿ ಇದೆ. ನಾನು ನೋಡುತ್ತಲೇ ಇದ್ದೆ. ಯಾವಾಗ ನಾನು ಕಾನೂನಿನ ಸಹಾಯವನ್ನು ಪಡೆಯಲು ಪ್ರಯತ್ನಿಸಿದೆನೋ, ಅವರು ನಮ್ಮ ವಿರುದ್ಧ ನಕಲಿ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ವಿವರಿಸಿದ್ದಾರೆ.

ತಾನು ಇಡುತ್ತಿರುವ ಹೆಜ್ಜೆಯನ್ನು “ತಪ್ಪು” ಎಂದು ಕರೆದುಕೊಂಡಿರುವ ರಾಯಗಾರ್‌ ತನ್ನ ತಾಯಿಯಲ್ಲಿ ಕ್ಷಮೆಯಾಚಿಸಿದ್ದಾರೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡದಂತೆ ಸಹೋದರಿ ನೀತೂ ಅವರಿಗೆ ಕೋರಿರುವ ರಾಯಗರ್, “… ಪಿತೂರಿಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಿ, ಎಲ್ಲವನ್ನೂ ಮಾರಾಟ ಮಾಡಿದರೂ ಸರಿ ಯಾರನ್ನೂ ಬಿಡಬೇಡಿ” ಎಂದು ಮನನೊಂದು ನುಡಿದಿದ್ದಾರೆ.

ಬುಧವಾರ ದಲಿತ ಜನ ಸಮೂಹವು ರಾಯಗಾರ್‌‌ ಅವರ ಕುಟುಂಬದ ಜೊತೆಗೂಡಿ ಸಮುದಾಯ ವೈದ್ಯಕೀಯ ಕೇಂದ್ರದ ಹೊರಗೆ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಂಡಿತು. ನ್ಯಾಯ ಸಿಗುವವರೆಗೂ ಶವವನ್ನು ತೆಗೆದುಕೊಳ್ಳಲು ನಿರಾಕರಿಸಲಾಯಿತು. ಭೀಮ್ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಕೂಡ ರೂಪಂಗಢಕ್ಕೆ ಬಂದು ಸೇರಿಕೊಂಡರು.

ರಾಯಗಾರ್‌ ಅವರ ಮನೆಗೆ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಗೋಪಾಲ್ಗಢ ಶಾಸಕ ಪುಖ್ರಾಜ್ ಗರ್ಗ್ ಭೇಟಿ ನೀಡಿದರು. ಮೃತರ ಸಂಬಂಧಿಕರಿಗೆ ಪರಿಹಾರ, ಸರ್ಕಾರಿ ನೌಕರಿ ಹಾಗೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನಾಲ್ಕು ಪೊಲೀಸ್ ಠಾಣೆಗಳಿಂದ ಪೊಲೀಸ್ ತಂಡಗಳು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಶರ್ಮಾ ಸ್ಥಳಕ್ಕೆ ಆಗಮಿಸಿ ದಲಿತ ಸಮುದಾಯವನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ ನಂತರ, ಶವಪರೀಕ್ಷೆಗೆ ಕುಟುಂಬ ಒಪ್ಪಿದೆ.

ಇದನ್ನೂ ಓದಿರಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ಸಂತ್ರಸ್ತೆಯ ಕುಟುಂಬದವರ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಮನೀಶ್ ಶರ್ಮಾ ತಿಳಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಲ್ವರ ವಿರುದ್ಧ ಆರೋಪ ಮಾಡಲಾಗಿದೆ. “ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

ಭೀಮ್ ಆರ್ಮಿಯ ಚಂದ್ರಶೇಖರ್ ಅವರು ಆಜಾದ್ ಪ್ರಕರಣವನ್ನು ಖಂಡಿಸಿದ್ದು, “ಓಂಪ್ರಕಾಶ್ ರಾಯಗಾರ್‌‌ ನಿಧನರಾಗಿ ಮೂರು ದಿನಗಳು ಕಳೆದರೂ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...