Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ ಎಂದು ರಾಜಸ್ಥಾನದ ದಲಿತ ಯುವಕ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ರೂಪಂಗಢ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 25 ವರ್ಷದ ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜಕೀಯ ಒತ್ತಡದಿಂದ ಪೊಲೀಸರು ತನ್ನ ದೂರಿನ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ‘ಡೆತ್‌ ನೋಟ್’ ಬರೆದಿದ್ದಾನೆ.

ಮೃತರನ್ನು ಓಂಪ್ರಕಾಶ್ ರಾಯಗಾರ್ ಎಂದು ಗುರುತಿಸಲಾಗಿದೆ. ರಾಯಗಾರ್‌ ಅವರ ಡೆತ್‌ನೋಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ತಮ್ಮ ದೈಹಿಕ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ರೂಪಂಗಢ ಪೊಲೀಸರು ಮತ್ತು ಪ್ರಭಾವಿ ಸಮುದಾಯದ ಸ್ಥಳೀಯರೊಬ್ಬರು ಪ್ರಕರಣದ ವರದಿಯನ್ನು ದುರ್ಬಲಗೊಳಿಸಿದರು, ರಾಜಕೀಯ ಒತ್ತಡವನ್ನು ಸೃಷ್ಟಿಸಿದರು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ತಂದೆ ನಾರಾಯಣ್ ರಾಯಗಾರ್‌ ಅವರು ದೀಪಾವಳಿಯಂದು ನಮ್ಮ ಹೊಲದಲ್ಲಿ ಚೌಳೆಕಾಯಿ ಮತ್ತು ಸಜ್ಜೆ ಸಂಗ್ರಹಿಸುತ್ತಿದ್ದರು. ಆಗ ಕಿಷ್ಣರಾಮ್ ಗುರ್ಜರ್ ಎಂಬ ವ್ಯಕ್ತಿ ಮತ್ತು ಅವರ ಇಬ್ಬರು ಸೋದರಳಿಯರಾದ ಕನರಾಮ್, ನಂದರಾಮ್ ಅವರು ತಮ್ಮ ದನಗಳನ್ನು ಮೇಯಿಸಲು ಹೊಲಕ್ಕೆ ಬಂದರು. ನಮ್ಮ ತಂದೆ ವಿರೋಧಿಸಿದಾಗ ಹಲ್ಲೆ ನಡೆಸಿದರು” ಎಂದು ರಾಯಗಾರ್‌‌ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ನನ್ನ ತಂದೆ ಹೇಗೋ ಅವರಿಂದ ತಪ್ಪಿಸಿಕೊಂಡು ಊರಿನ ಕಡೆಗೆ ಓಡಿಬಂದರು. ಅವರು ನನಗೆ ಮತ್ತು ನನ್ನ ತಾಯಿಗೆ ಘಟನೆಯನ್ನು ವಿವರಿಸಿದರು. ನಾವು ಹೊಲದತ್ತ ಹೋದಾಗ, ಅವರು ನಮ್ಮನ್ನು ಸುತ್ತುವರೆದು ಜಾತಿ ನಿಂದನೆ ಮಾಡಿ ಅವಮಾನಿಸಿದರು. ಅವರು ನಮ್ಮೊಂದಿಗೆ ಪ್ರತಿ ವರ್ಷವೂ ಅದೇ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ನಾವು ಬೆಳೆಯನ್ನು ಬೆಳೆಯುವಾಗ ನಮಗೆ ತೊಂದರೆ ನೀಡಲು ತಮ್ಮ ಕುರಿ ಮತ್ತು ಮೇಕೆಗಳನ್ನು ಹೊಲದಲ್ಲಿ ಬಿಡುತ್ತಾರೆ” ಎಂದು ರಾಯಗಾರ್‌‌ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಸಂಕಟ ವ್ಯಕ್ತಪಡಿಸಿದ್ದಾರೆ.

ಅವರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದರು. ರಾಯಗಾರ್‌ ಕುಟುಂಬದ ವಿವರಗಳನ್ನು ಕೇಳುತ್ತಿದ್ದ ಅಧಿಕಾರಿಗೆ ಪ್ರಕರಣವನ್ನು ದಾಖಲಿಸಬೇಡಿ ಎಂಬ ಸೂಚನೆಯೊಂದು ಕರೆಯ ಮೂಲಕ ಬಂದು. ರಾಯಗಾರ್‌‌ ಅವರ ಕುಟುಂಬವನ್ನು ವೈದ್ಯಕೀಯ ಪರೀಕ್ಷೆ ಮಾಡಿದ ನಂತರ ಮನೆಗೆ ಕಳುಹಿಸಲಾಯಿತು. ಮರುದಿನ ಬರುವಂತೆ ಪೊಲೀಸರು ಹೇಳಿದ್ದರು.

“ನಾವು ಮರುದಿನ ಹೋದಾಗ, ಮತ್ತೆ ಮರುದಿನ ಬರಲು ಹೇಳಲಾಯಿತು. ನಾಳೆ ಬನ್ನಿ ಎಂದು ಹೇಳುವ ಮೂಲಕ ಪೊಲೀಸರು ವಿಳಂಬ ಮಾಡಿದರು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಪೊಲೀಸರಿಗೆ ಹೇಳಿದಾಗ ಅವರು ಎಫ್ಐಆರ್ ದಾಖಲಿಸಿದರು. ಆದರೆ ಪ್ರಕರಣವನ್ನು ದುರ್ಬಲಗೊಳಿಸಿದರು” ಎಂದು ಆತ್ಮಹತ್ಯೆ ಪತ್ರದಲ್ಲಿ ದೂರಲಾಗಿದೆ.

“…ನಮ್ಮ ಗ್ರಾಮದ ಮಾಜಿ ಸರಪಂಚ್ ರಂಜಿತ್ ಸಿಂಗ್ ರಾಥೋಡ್ ಮತ್ತು ಠಾಣಾಧಿಕಾರಿ ಅಯೂಬ್ ಖಾನ್ ಅವರು ನನ್ನ ಕಿರಿಯ ಸಹೋದರ ರಾಹುಲ್ ಮತ್ತು ನನ್ನ ಚಿಕ್ಕಪ್ಪ ಜುಗಲ್ಕಿಶೋರ್ ವಿರುದ್ಧ ನಕಲಿ ಎಫ್ಐಆರ್ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ರಾಯಗಾರ್‌ ತಿಳಿಸಿದ್ದಾರೆ.

“ತಂದೆ-ತಾಯಿಯ ಆತ್ಮಗೌರವವನ್ನು ಉಳಿಸಲಾಗಲಿಲ್ಲ. ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ. ಮಾಜಿ ಸರಪಂಚ್‌ಗೆ ರಾಜಕೀಯ ಶಕ್ತಿ ಇದೆ. ನಾನು ನೋಡುತ್ತಲೇ ಇದ್ದೆ. ಯಾವಾಗ ನಾನು ಕಾನೂನಿನ ಸಹಾಯವನ್ನು ಪಡೆಯಲು ಪ್ರಯತ್ನಿಸಿದೆನೋ, ಅವರು ನಮ್ಮ ವಿರುದ್ಧ ನಕಲಿ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ವಿವರಿಸಿದ್ದಾರೆ.

ತಾನು ಇಡುತ್ತಿರುವ ಹೆಜ್ಜೆಯನ್ನು “ತಪ್ಪು” ಎಂದು ಕರೆದುಕೊಂಡಿರುವ ರಾಯಗಾರ್‌ ತನ್ನ ತಾಯಿಯಲ್ಲಿ ಕ್ಷಮೆಯಾಚಿಸಿದ್ದಾರೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡದಂತೆ ಸಹೋದರಿ ನೀತೂ ಅವರಿಗೆ ಕೋರಿರುವ ರಾಯಗರ್, “… ಪಿತೂರಿಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಿ, ಎಲ್ಲವನ್ನೂ ಮಾರಾಟ ಮಾಡಿದರೂ ಸರಿ ಯಾರನ್ನೂ ಬಿಡಬೇಡಿ” ಎಂದು ಮನನೊಂದು ನುಡಿದಿದ್ದಾರೆ.

ಬುಧವಾರ ದಲಿತ ಜನ ಸಮೂಹವು ರಾಯಗಾರ್‌‌ ಅವರ ಕುಟುಂಬದ ಜೊತೆಗೂಡಿ ಸಮುದಾಯ ವೈದ್ಯಕೀಯ ಕೇಂದ್ರದ ಹೊರಗೆ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಂಡಿತು. ನ್ಯಾಯ ಸಿಗುವವರೆಗೂ ಶವವನ್ನು ತೆಗೆದುಕೊಳ್ಳಲು ನಿರಾಕರಿಸಲಾಯಿತು. ಭೀಮ್ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಕೂಡ ರೂಪಂಗಢಕ್ಕೆ ಬಂದು ಸೇರಿಕೊಂಡರು.

ರಾಯಗಾರ್‌ ಅವರ ಮನೆಗೆ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಗೋಪಾಲ್ಗಢ ಶಾಸಕ ಪುಖ್ರಾಜ್ ಗರ್ಗ್ ಭೇಟಿ ನೀಡಿದರು. ಮೃತರ ಸಂಬಂಧಿಕರಿಗೆ ಪರಿಹಾರ, ಸರ್ಕಾರಿ ನೌಕರಿ ಹಾಗೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನಾಲ್ಕು ಪೊಲೀಸ್ ಠಾಣೆಗಳಿಂದ ಪೊಲೀಸ್ ತಂಡಗಳು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಶರ್ಮಾ ಸ್ಥಳಕ್ಕೆ ಆಗಮಿಸಿ ದಲಿತ ಸಮುದಾಯವನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ ನಂತರ, ಶವಪರೀಕ್ಷೆಗೆ ಕುಟುಂಬ ಒಪ್ಪಿದೆ.

ಇದನ್ನೂ ಓದಿರಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ಸಂತ್ರಸ್ತೆಯ ಕುಟುಂಬದವರ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಮನೀಶ್ ಶರ್ಮಾ ತಿಳಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಲ್ವರ ವಿರುದ್ಧ ಆರೋಪ ಮಾಡಲಾಗಿದೆ. “ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

ಭೀಮ್ ಆರ್ಮಿಯ ಚಂದ್ರಶೇಖರ್ ಅವರು ಆಜಾದ್ ಪ್ರಕರಣವನ್ನು ಖಂಡಿಸಿದ್ದು, “ಓಂಪ್ರಕಾಶ್ ರಾಯಗಾರ್‌‌ ನಿಧನರಾಗಿ ಮೂರು ದಿನಗಳು ಕಳೆದರೂ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...