Homeದಲಿತ್ ಫೈಲ್ಸ್ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಜಾತಿ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ವಿಳಂಬ: ಮನನೊಂದು ದಲಿತ ಯುವಕ ಸಾವಿಗೆ ಶರಣು

ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ ಎಂದು ರಾಜಸ್ಥಾನದ ದಲಿತ ಯುವಕ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

- Advertisement -
- Advertisement -

ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ರೂಪಂಗಢ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ 25 ವರ್ಷದ ದಲಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜಕೀಯ ಒತ್ತಡದಿಂದ ಪೊಲೀಸರು ತನ್ನ ದೂರಿನ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ‘ಡೆತ್‌ ನೋಟ್’ ಬರೆದಿದ್ದಾನೆ.

ಮೃತರನ್ನು ಓಂಪ್ರಕಾಶ್ ರಾಯಗಾರ್ ಎಂದು ಗುರುತಿಸಲಾಗಿದೆ. ರಾಯಗಾರ್‌ ಅವರ ಡೆತ್‌ನೋಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ. ತಮ್ಮ ದೈಹಿಕ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ರೂಪಂಗಢ ಪೊಲೀಸರು ಮತ್ತು ಪ್ರಭಾವಿ ಸಮುದಾಯದ ಸ್ಥಳೀಯರೊಬ್ಬರು ಪ್ರಕರಣದ ವರದಿಯನ್ನು ದುರ್ಬಲಗೊಳಿಸಿದರು, ರಾಜಕೀಯ ಒತ್ತಡವನ್ನು ಸೃಷ್ಟಿಸಿದರು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನನ್ನ ತಂದೆ ನಾರಾಯಣ್ ರಾಯಗಾರ್‌ ಅವರು ದೀಪಾವಳಿಯಂದು ನಮ್ಮ ಹೊಲದಲ್ಲಿ ಚೌಳೆಕಾಯಿ ಮತ್ತು ಸಜ್ಜೆ ಸಂಗ್ರಹಿಸುತ್ತಿದ್ದರು. ಆಗ ಕಿಷ್ಣರಾಮ್ ಗುರ್ಜರ್ ಎಂಬ ವ್ಯಕ್ತಿ ಮತ್ತು ಅವರ ಇಬ್ಬರು ಸೋದರಳಿಯರಾದ ಕನರಾಮ್, ನಂದರಾಮ್ ಅವರು ತಮ್ಮ ದನಗಳನ್ನು ಮೇಯಿಸಲು ಹೊಲಕ್ಕೆ ಬಂದರು. ನಮ್ಮ ತಂದೆ ವಿರೋಧಿಸಿದಾಗ ಹಲ್ಲೆ ನಡೆಸಿದರು” ಎಂದು ರಾಯಗಾರ್‌‌ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ನನ್ನ ತಂದೆ ಹೇಗೋ ಅವರಿಂದ ತಪ್ಪಿಸಿಕೊಂಡು ಊರಿನ ಕಡೆಗೆ ಓಡಿಬಂದರು. ಅವರು ನನಗೆ ಮತ್ತು ನನ್ನ ತಾಯಿಗೆ ಘಟನೆಯನ್ನು ವಿವರಿಸಿದರು. ನಾವು ಹೊಲದತ್ತ ಹೋದಾಗ, ಅವರು ನಮ್ಮನ್ನು ಸುತ್ತುವರೆದು ಜಾತಿ ನಿಂದನೆ ಮಾಡಿ ಅವಮಾನಿಸಿದರು. ಅವರು ನಮ್ಮೊಂದಿಗೆ ಪ್ರತಿ ವರ್ಷವೂ ಅದೇ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ನಾವು ಬೆಳೆಯನ್ನು ಬೆಳೆಯುವಾಗ ನಮಗೆ ತೊಂದರೆ ನೀಡಲು ತಮ್ಮ ಕುರಿ ಮತ್ತು ಮೇಕೆಗಳನ್ನು ಹೊಲದಲ್ಲಿ ಬಿಡುತ್ತಾರೆ” ಎಂದು ರಾಯಗಾರ್‌‌ ತಮ್ಮ ಆತ್ಮಹತ್ಯೆ ಪತ್ರದಲ್ಲಿ ಸಂಕಟ ವ್ಯಕ್ತಪಡಿಸಿದ್ದಾರೆ.

ಅವರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದರು. ರಾಯಗಾರ್‌ ಕುಟುಂಬದ ವಿವರಗಳನ್ನು ಕೇಳುತ್ತಿದ್ದ ಅಧಿಕಾರಿಗೆ ಪ್ರಕರಣವನ್ನು ದಾಖಲಿಸಬೇಡಿ ಎಂಬ ಸೂಚನೆಯೊಂದು ಕರೆಯ ಮೂಲಕ ಬಂದು. ರಾಯಗಾರ್‌‌ ಅವರ ಕುಟುಂಬವನ್ನು ವೈದ್ಯಕೀಯ ಪರೀಕ್ಷೆ ಮಾಡಿದ ನಂತರ ಮನೆಗೆ ಕಳುಹಿಸಲಾಯಿತು. ಮರುದಿನ ಬರುವಂತೆ ಪೊಲೀಸರು ಹೇಳಿದ್ದರು.

“ನಾವು ಮರುದಿನ ಹೋದಾಗ, ಮತ್ತೆ ಮರುದಿನ ಬರಲು ಹೇಳಲಾಯಿತು. ನಾಳೆ ಬನ್ನಿ ಎಂದು ಹೇಳುವ ಮೂಲಕ ಪೊಲೀಸರು ವಿಳಂಬ ಮಾಡಿದರು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಪೊಲೀಸರಿಗೆ ಹೇಳಿದಾಗ ಅವರು ಎಫ್ಐಆರ್ ದಾಖಲಿಸಿದರು. ಆದರೆ ಪ್ರಕರಣವನ್ನು ದುರ್ಬಲಗೊಳಿಸಿದರು” ಎಂದು ಆತ್ಮಹತ್ಯೆ ಪತ್ರದಲ್ಲಿ ದೂರಲಾಗಿದೆ.

“…ನಮ್ಮ ಗ್ರಾಮದ ಮಾಜಿ ಸರಪಂಚ್ ರಂಜಿತ್ ಸಿಂಗ್ ರಾಥೋಡ್ ಮತ್ತು ಠಾಣಾಧಿಕಾರಿ ಅಯೂಬ್ ಖಾನ್ ಅವರು ನನ್ನ ಕಿರಿಯ ಸಹೋದರ ರಾಹುಲ್ ಮತ್ತು ನನ್ನ ಚಿಕ್ಕಪ್ಪ ಜುಗಲ್ಕಿಶೋರ್ ವಿರುದ್ಧ ನಕಲಿ ಎಫ್ಐಆರ್ ದಾಖಲಿಸಿದ್ದಾರೆ. ಇದುವರೆಗೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ರಾಯಗಾರ್‌ ತಿಳಿಸಿದ್ದಾರೆ.

“ತಂದೆ-ತಾಯಿಯ ಆತ್ಮಗೌರವವನ್ನು ಉಳಿಸಲಾಗಲಿಲ್ಲ. ಸಂವಿಧಾನವನ್ನು ಓದಿ ಅರ್ಥ ಮಾಡಿಕೊಂಡಿದ್ದೇನೆ. ಈ ವ್ಯವಸ್ಥೆಯಿಂದ ಏನೂ ಮಾಡಲಾಗಲಿಲ್ಲ. ಮಾಜಿ ಸರಪಂಚ್‌ಗೆ ರಾಜಕೀಯ ಶಕ್ತಿ ಇದೆ. ನಾನು ನೋಡುತ್ತಲೇ ಇದ್ದೆ. ಯಾವಾಗ ನಾನು ಕಾನೂನಿನ ಸಹಾಯವನ್ನು ಪಡೆಯಲು ಪ್ರಯತ್ನಿಸಿದೆನೋ, ಅವರು ನಮ್ಮ ವಿರುದ್ಧ ನಕಲಿ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ವಿವರಿಸಿದ್ದಾರೆ.

ತಾನು ಇಡುತ್ತಿರುವ ಹೆಜ್ಜೆಯನ್ನು “ತಪ್ಪು” ಎಂದು ಕರೆದುಕೊಂಡಿರುವ ರಾಯಗಾರ್‌ ತನ್ನ ತಾಯಿಯಲ್ಲಿ ಕ್ಷಮೆಯಾಚಿಸಿದ್ದಾರೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡದಂತೆ ಸಹೋದರಿ ನೀತೂ ಅವರಿಗೆ ಕೋರಿರುವ ರಾಯಗರ್, “… ಪಿತೂರಿಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಿ, ಎಲ್ಲವನ್ನೂ ಮಾರಾಟ ಮಾಡಿದರೂ ಸರಿ ಯಾರನ್ನೂ ಬಿಡಬೇಡಿ” ಎಂದು ಮನನೊಂದು ನುಡಿದಿದ್ದಾರೆ.

ಬುಧವಾರ ದಲಿತ ಜನ ಸಮೂಹವು ರಾಯಗಾರ್‌‌ ಅವರ ಕುಟುಂಬದ ಜೊತೆಗೂಡಿ ಸಮುದಾಯ ವೈದ್ಯಕೀಯ ಕೇಂದ್ರದ ಹೊರಗೆ ಧರಣಿ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಂಡಿತು. ನ್ಯಾಯ ಸಿಗುವವರೆಗೂ ಶವವನ್ನು ತೆಗೆದುಕೊಳ್ಳಲು ನಿರಾಕರಿಸಲಾಯಿತು. ಭೀಮ್ ಆರ್ಮಿಯ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಕೂಡ ರೂಪಂಗಢಕ್ಕೆ ಬಂದು ಸೇರಿಕೊಂಡರು.

ರಾಯಗಾರ್‌ ಅವರ ಮನೆಗೆ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದ ಗೋಪಾಲ್ಗಢ ಶಾಸಕ ಪುಖ್ರಾಜ್ ಗರ್ಗ್ ಭೇಟಿ ನೀಡಿದರು. ಮೃತರ ಸಂಬಂಧಿಕರಿಗೆ ಪರಿಹಾರ, ಸರ್ಕಾರಿ ನೌಕರಿ ಹಾಗೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ನಾಲ್ಕು ಪೊಲೀಸ್ ಠಾಣೆಗಳಿಂದ ಪೊಲೀಸ್ ತಂಡಗಳು, ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಶರ್ಮಾ ಸ್ಥಳಕ್ಕೆ ಆಗಮಿಸಿ ದಲಿತ ಸಮುದಾಯವನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಪೊಲೀಸರು ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ ನಂತರ, ಶವಪರೀಕ್ಷೆಗೆ ಕುಟುಂಬ ಒಪ್ಪಿದೆ.

ಇದನ್ನೂ ಓದಿರಿ: ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

ಸಂತ್ರಸ್ತೆಯ ಕುಟುಂಬದವರ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಮನೀಶ್ ಶರ್ಮಾ ತಿಳಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಮತ್ತು ಇತರ ನಾಲ್ವರ ವಿರುದ್ಧ ಆರೋಪ ಮಾಡಲಾಗಿದೆ. “ದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

ಭೀಮ್ ಆರ್ಮಿಯ ಚಂದ್ರಶೇಖರ್ ಅವರು ಆಜಾದ್ ಪ್ರಕರಣವನ್ನು ಖಂಡಿಸಿದ್ದು, “ಓಂಪ್ರಕಾಶ್ ರಾಯಗಾರ್‌‌ ನಿಧನರಾಗಿ ಮೂರು ದಿನಗಳು ಕಳೆದರೂ ನಿರ್ದಿಷ್ಟ ಕ್ರಮ ಕೈಗೊಂಡಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...