Homeಮುಖಪುಟಒಮರ್ ಅಬ್ದುಲ್ಲಾ ಸೇರಿದಂತೆ ಜಮ್ಮುಕಾಶ್ಮೀರದ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು!

ಒಮರ್ ಅಬ್ದುಲ್ಲಾ ಸೇರಿದಂತೆ ಜಮ್ಮುಕಾಶ್ಮೀರದ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು!

- Advertisement -
- Advertisement -

ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಶನ್ (ಪಿಎಜಿಡಿ) ಒಕ್ಕೂಟವು ಡಿಲಿಮಿಟೇಶನ್ ಆಯೋಗದ ಶಿಫಾರಸುಗಳನ್ನು ವಿರೋಧಿಸಿ ನಡೆಸಲು ಉದ್ದೇಶಿಸಿದ್ದ ಮೆರವಣಿಗೆಗೆ ಮುನ್ನವೇ ಜಮ್ಮು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದ ರಾಜಕೀಯ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನು ವಿರೋಧಿಸಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಶುಭೋದಯ ಮತ್ತು 2022ಕ್ಕೆ ಸುಸ್ವಾಗತ. ಕಾನೂನುಬಾಹಿರವಾಗಿ ಜನರ ಮನೆಗಳಿಗೆ ಬೀಗ ಹಾಕುತ್ತಿರುವ ಜಮ್ಮುಕಾಶ್ಮೀರದ ಅದೇ ಪೊಲೀಸರು ಮತ್ತು ಸಾಮಾನ್ಯ ಪ್ರಜಾಪ್ರಭುತ್ವ ಚಟುವಟಿಕೆಯಿಂದ ಭಯಭೀತರಾಗಿರುವ ಆಡಳಿತದೊಂದಿಗೆ ಹೊಸ ವರ್ಷ… ಗುಪ್ಕರ್‌ ಒಕ್ಕೂಟದ ಶಾಂತಿಯುತ ಧರಣಿ ಪ್ರತಿಭಟನೆಯನ್ನು ತಡೆಯಲು ನಮ್ಮ ಗೇಟ್‌ಗಳ ಹೊರಗೆ ಟ್ರಕ್‌ಗಳನ್ನು ನಿಲ್ಲಿಸಲಾಗಿದೆ. ಕೆಲವು ವಿಷಯಗಳು ಎಂದಿಗೂ ಬದಲಾಗುವುದಿಲ್ಲ” ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರೂ ಆಗಿರುವ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಜಮ್ಮು ಕಾಶ್ಮೀರದಲ್ಲಿ ಈ ವರ್ಷ 40 ನಾಗರಿಕರು ಕೊಲ್ಲಲ್ಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ: ಒಪ್ಪಿಕೊಂಡ ಒಕ್ಕೂಟ ಸರ್ಕಾರ

ಅವರ ಮನೆಗೆ ಪೊಲೀಸರು ಮುತ್ತಿಗೆ ಹಾಕುವುದರ ಜೊತೆಗೆ, ಅವರ ತಂದೆಯ ಮನೆ ಮತ್ತು ಸಹೋದರಿಯ ಮನೆಗೆ ಸಂಪರ್ಕಿಸುವ ಗೇಟ್‌ಗೆ ಬೀಗ ಹಾಕಿಲಾಗಿದೆ ಎಂದು ಅಬ್ದುಲ್ಲಾ ಆರೋಪಿಸಿದ್ದಾರೆ. ಅವರು ಇದನ್ನು “ಕಾನೂನು ರಹಿತ ಪೊಲೀಸ್ ರಾಜ್ಯ” ಎಂದು ಟೀಕಿಸಿದ್ದಾರೆ.

ಜಮ್ಮು ವಿಭಾಗದಲ್ಲಿ ಆರು ಮತ್ತು ಕಾಶ್ಮೀರದಲ್ಲಿ ಒಂದು ವಿಧಾನಸಭಾ ಸೀಟುಗಳನ್ನು ಹೆಚ್ಚಿಸುವ ಡಿಲಿಮಿಟೇಶನ್ ಆಯೋಗದ ಪ್ರಸ್ತಾವನೆಯನ್ನು ವಿರೋಧಿಸಿ ಗುಪ್ಕರ್‌ ಒಕ್ಕೂಟವು ಶನಿವಾರ ಶ್ರೀನಗರದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಇದರೊಂದಿಗೆ ಜಮ್ಮುವಿನ ವಿಧಾನಸಭಾ ಸೀಟುಗಳ ಸಂಖ್ಯೆ 43ಕ್ಕೆ ಮತ್ತು ಕಾಶ್ಮೀರದಲ್ಲಿ 47ಕ್ಕೆ ಏರಲಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ: ಹೈದರ್‌ಪೋರಾ ಎನ್‌ಕೌಂಟರ್‌ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಜಮ್ಮುಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರ ಮನೆಗೆ ಕೂಡಾ ಟ್ರಕ್‌ಗಳು ಮುತ್ತಿಗೆ ಹಾಕಿವೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜಾಸತ್ತಾತ್ಮಕ ಮತ್ತು ಶಾಂತಿಯುತ ಪ್ರತಿಭಟನೆಗೂ ಆಡಳಿತ ಅವಕಾಶ ನೀಡದಿರುವುದು ಶೋಚನೀಯ ಸ್ಥಿತಿ ಎಂದು ಗುಪ್ಕರ್‌ ಮೈತ್ರಿಕೂಟದ ವಕ್ತಾರರಾದ ಸಿಪಿಐ (ಎಂ) ಹಿರಿಯ ನಾಯಕ ಎಂ ಯೂಸುಫ್‌ ತರಿಗಾಮಿ ಹೇಳಿದ್ದಾರೆ.

ಡಿಲಿಮಿಟೇಶನ್ ಆಯೋಗವು ಪ್ರತಿ ರಾಜ್ಯದ ವಿಧಾನಸಭೆಗೆ ಒಟ್ಟು ಎಷ್ಟು ಸ್ಥಾನಗಳನ್ನು ನಿಗದಿಪಡಿಸಬೇಕು ಮತ್ತು ಜನಗಣತಿಯ ಅಂಕಿಅಂಶಗಳ ಆಧಾರದ ಮೇಲೆ ನಿರ್ಧರಿಸುವ ಅಧಿಕಾರವನ್ನು ಹೊಂದಿದೆ. ಹೆಚ್ಚುವರಿ ಸ್ಥಾನಗಳನ್ನು ಪರಿಚಯಿಸುವ ಕ್ರಮದ ಬಗ್ಗೆ ಈಗಾಗಲೇ ವಿರೋಧಗಳು ಎದ್ದಿದ್ದು, ಬಿಜೆಪಿಯು ಹಿಂದೂ ಬಹುಸಂಖ್ಯಾತ ಜಮ್ಮುವನ್ನು ಮುಂದಕ್ಕೆ ತರುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಜಮ್ಮು-ಕಾಶ್ಮೀರವನ್ನು ಬಿಜೆಪಿ ದಶಕಗಳಷ್ಟು ಹಿಂದಕ್ಕೆ ಒಯ್ದಿದೆ: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...