Homeಮುಖಪುಟಒಮರ್ ಅಬ್ದುಲ್ಲಾ ಸೇರಿದಂತೆ ಜಮ್ಮುಕಾಶ್ಮೀರದ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು!

ಒಮರ್ ಅಬ್ದುಲ್ಲಾ ಸೇರಿದಂತೆ ಜಮ್ಮುಕಾಶ್ಮೀರದ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು!

- Advertisement -
- Advertisement -

ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕಾರ್ ಡಿಕ್ಲರೇಶನ್ (ಪಿಎಜಿಡಿ) ಒಕ್ಕೂಟವು ಡಿಲಿಮಿಟೇಶನ್ ಆಯೋಗದ ಶಿಫಾರಸುಗಳನ್ನು ವಿರೋಧಿಸಿ ನಡೆಸಲು ಉದ್ದೇಶಿಸಿದ್ದ ಮೆರವಣಿಗೆಗೆ ಮುನ್ನವೇ ಜಮ್ಮು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದ ರಾಜಕೀಯ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನು ವಿರೋಧಿಸಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಶುಭೋದಯ ಮತ್ತು 2022ಕ್ಕೆ ಸುಸ್ವಾಗತ. ಕಾನೂನುಬಾಹಿರವಾಗಿ ಜನರ ಮನೆಗಳಿಗೆ ಬೀಗ ಹಾಕುತ್ತಿರುವ ಜಮ್ಮುಕಾಶ್ಮೀರದ ಅದೇ ಪೊಲೀಸರು ಮತ್ತು ಸಾಮಾನ್ಯ ಪ್ರಜಾಪ್ರಭುತ್ವ ಚಟುವಟಿಕೆಯಿಂದ ಭಯಭೀತರಾಗಿರುವ ಆಡಳಿತದೊಂದಿಗೆ ಹೊಸ ವರ್ಷ… ಗುಪ್ಕರ್‌ ಒಕ್ಕೂಟದ ಶಾಂತಿಯುತ ಧರಣಿ ಪ್ರತಿಭಟನೆಯನ್ನು ತಡೆಯಲು ನಮ್ಮ ಗೇಟ್‌ಗಳ ಹೊರಗೆ ಟ್ರಕ್‌ಗಳನ್ನು ನಿಲ್ಲಿಸಲಾಗಿದೆ. ಕೆಲವು ವಿಷಯಗಳು ಎಂದಿಗೂ ಬದಲಾಗುವುದಿಲ್ಲ” ಎಂದು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರೂ ಆಗಿರುವ ಒಮರ್‌ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಜಮ್ಮು ಕಾಶ್ಮೀರದಲ್ಲಿ ಈ ವರ್ಷ 40 ನಾಗರಿಕರು ಕೊಲ್ಲಲ್ಪಟ್ಟಿದ್ದು, 72 ಮಂದಿ ಗಾಯಗೊಂಡಿದ್ದಾರೆ: ಒಪ್ಪಿಕೊಂಡ ಒಕ್ಕೂಟ ಸರ್ಕಾರ

ಅವರ ಮನೆಗೆ ಪೊಲೀಸರು ಮುತ್ತಿಗೆ ಹಾಕುವುದರ ಜೊತೆಗೆ, ಅವರ ತಂದೆಯ ಮನೆ ಮತ್ತು ಸಹೋದರಿಯ ಮನೆಗೆ ಸಂಪರ್ಕಿಸುವ ಗೇಟ್‌ಗೆ ಬೀಗ ಹಾಕಿಲಾಗಿದೆ ಎಂದು ಅಬ್ದುಲ್ಲಾ ಆರೋಪಿಸಿದ್ದಾರೆ. ಅವರು ಇದನ್ನು “ಕಾನೂನು ರಹಿತ ಪೊಲೀಸ್ ರಾಜ್ಯ” ಎಂದು ಟೀಕಿಸಿದ್ದಾರೆ.

ಜಮ್ಮು ವಿಭಾಗದಲ್ಲಿ ಆರು ಮತ್ತು ಕಾಶ್ಮೀರದಲ್ಲಿ ಒಂದು ವಿಧಾನಸಭಾ ಸೀಟುಗಳನ್ನು ಹೆಚ್ಚಿಸುವ ಡಿಲಿಮಿಟೇಶನ್ ಆಯೋಗದ ಪ್ರಸ್ತಾವನೆಯನ್ನು ವಿರೋಧಿಸಿ ಗುಪ್ಕರ್‌ ಒಕ್ಕೂಟವು ಶನಿವಾರ ಶ್ರೀನಗರದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಇದರೊಂದಿಗೆ ಜಮ್ಮುವಿನ ವಿಧಾನಸಭಾ ಸೀಟುಗಳ ಸಂಖ್ಯೆ 43ಕ್ಕೆ ಮತ್ತು ಕಾಶ್ಮೀರದಲ್ಲಿ 47ಕ್ಕೆ ಏರಲಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ: ಹೈದರ್‌ಪೋರಾ ಎನ್‌ಕೌಂಟರ್‌ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

ಜಮ್ಮುಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರ ಮನೆಗೆ ಕೂಡಾ ಟ್ರಕ್‌ಗಳು ಮುತ್ತಿಗೆ ಹಾಕಿವೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜಾಸತ್ತಾತ್ಮಕ ಮತ್ತು ಶಾಂತಿಯುತ ಪ್ರತಿಭಟನೆಗೂ ಆಡಳಿತ ಅವಕಾಶ ನೀಡದಿರುವುದು ಶೋಚನೀಯ ಸ್ಥಿತಿ ಎಂದು ಗುಪ್ಕರ್‌ ಮೈತ್ರಿಕೂಟದ ವಕ್ತಾರರಾದ ಸಿಪಿಐ (ಎಂ) ಹಿರಿಯ ನಾಯಕ ಎಂ ಯೂಸುಫ್‌ ತರಿಗಾಮಿ ಹೇಳಿದ್ದಾರೆ.

ಡಿಲಿಮಿಟೇಶನ್ ಆಯೋಗವು ಪ್ರತಿ ರಾಜ್ಯದ ವಿಧಾನಸಭೆಗೆ ಒಟ್ಟು ಎಷ್ಟು ಸ್ಥಾನಗಳನ್ನು ನಿಗದಿಪಡಿಸಬೇಕು ಮತ್ತು ಜನಗಣತಿಯ ಅಂಕಿಅಂಶಗಳ ಆಧಾರದ ಮೇಲೆ ನಿರ್ಧರಿಸುವ ಅಧಿಕಾರವನ್ನು ಹೊಂದಿದೆ. ಹೆಚ್ಚುವರಿ ಸ್ಥಾನಗಳನ್ನು ಪರಿಚಯಿಸುವ ಕ್ರಮದ ಬಗ್ಗೆ ಈಗಾಗಲೇ ವಿರೋಧಗಳು ಎದ್ದಿದ್ದು, ಬಿಜೆಪಿಯು ಹಿಂದೂ ಬಹುಸಂಖ್ಯಾತ ಜಮ್ಮುವನ್ನು ಮುಂದಕ್ಕೆ ತರುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಜಮ್ಮು-ಕಾಶ್ಮೀರವನ್ನು ಬಿಜೆಪಿ ದಶಕಗಳಷ್ಟು ಹಿಂದಕ್ಕೆ ಒಯ್ದಿದೆ: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...