ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆ ಮತ್ತು ಆನಂತರದ ಹಿಂಸಾಚಾರದಲ್ಲಿ ನಾಲ್ವರು ಕಾರ್ಯಕರ್ತರು ಕೊಲೆಯಾದ ಘಟನೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರೈತರ ಹತ್ಯೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಇಂದು ಮುಂಜಾನೆ ಹತ್ಯೆಯಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ಮಾತಿನ ಚಕಮಕಿ ನಡೆದಿದೆ.
Priyanka Gandhi who was enroute Kheri has been detained at Sitapur by UP cops. pic.twitter.com/OB4VQ75Nay
— Arvind Gunasekar (@arvindgunasekar) October 4, 2021
ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಮತ್ತು ಕೇಂದ್ರದ ಸಹಾಯಕ ಗೃಹಸಚಿವ ಅಜಯ್ ಮಿಶ್ರಾ ಅವರ ಭೇಟಿಯನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅವರ ಮೇಲೆ ಕಾರು ಹರಿಸಲಾಗಿತ್ತು. ಈ ಹಿಂಸಾಚಾರದಲ್ಲಿ ಒಂಟು ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಬಂಧನದ ಬಳಿಕ ಉತ್ತರ ಪ್ರದೇಶ ಕಾಂಗ್ರೆಸ್ ವಿಡಿಯೋವೊಂದನ್ನು ಟ್ವೀಟ್ ಮಾಡಿದೆ. ರೈತರ ಭೇಟಿಗೆ ಹೊರಟಿದ್ದ ನಮ್ಮ ನಾಯಕಿ ಪ್ರಿಯಾಂಕ ಗಾಂಧಿಯನ್ನು ಸೀತಾಪುರ ಪೊಲೀಸರು ಬಂಧಿಸಿದ್ದಾರೆ. ಬನ್ನಿ ಹೆಚ್ಚಿನ ಸಂಖ್ಯೆಯಲ್ಲಿ ಸೇರೋಣ ಎಂದು ಕರೆ ನೀಡಲಾಗಿದೆ.
श्रीमती @priyankagandhi जी को हरगांव से गिरफ्तार करके सीतापुर पुलिस लाइन ले जाया जा रहा हूं, कृपया सभी लोग पहुंचे। pic.twitter.com/d0GClYamvr
— UP Congress (@INCUttarPradesh) October 3, 2021
“ನೀವು ಕೊಂದ ರೈತರಿಗಿಂತ ನಾನು ಮುಖ್ಯವಲ್ಲ. ಆದರೆ ನೀವು ಈ ಸರ್ಕಾರವನ್ನು ರಕ್ಷಿಸುತ್ತಿದ್ದೀರಿ. ನೀವು ನನಗೆ ಕಾನೂನು ವಾರಂಟ್, ಕಾನೂನು ಆಧಾರ ನೀಡಿ. ಇಲ್ಲವಾದರೆ ನಾನು ಇಲ್ಲಿಂದ ಕದಲುವುದಿಲ್ಲ ಮತ್ತು ನೀವು ನನ್ನನ್ನು ಮುಟ್ಟುವಂತಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಪೊಲೀಸರೊಡನೆ ವಾಗ್ವಾದ ಮಾಡುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ದಾಖಲಾಗಿವೆ.
ಇದೇ ವೇಳೆ ಪೊಲೀಸರು ಪ್ರಿಯಾಂಕ ಗಾಂಧಿ ಜೊತೆಗಿದ್ದ ಕಾಂಗ್ರೆಸ್ ಮುಖಂಡ ದೀಪೇಂದರ್ ಹೂಡಾ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂದು ಅವರು ಆರೋಪಿಸಿದ್ದಾರೆ. ನಾನು ಇದನ್ನು ಕಣ್ಣರೆ ಕಂಡಿದ್ದೇನೆ, ಹೂಡಾ ಅವರನ್ನು ಪೊಲೀಸರು ಹಿಂದೆ ತಳ್ಳಿದ್ದಾರೆ ಎಂದು ಪ್ರಿಯಾಂಕ ಆರೋಪಿಸಿದ್ದಾರೆ.
“ನೀವು ಮಹಿಳೆಯೊಂದಿಗೆ ಮಾತನಾಡುತ್ತಿಲ್ಲ, ಆದರೆ ಆತನನ್ನು ಹೊಡೆಯುತ್ತಿದ್ದೀರಿ” ಎಂದು ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಮತ್ತೆ ಆತನನ್ನು ಹಿಂದಕ್ಕೆ ತಳ್ಳುತ್ತಿದ್ದೀರಿ ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.
प्रियंका, मैं जानता हूँ तुम पीछे नहीं हटोगी- तुम्हारी हिम्मत से वे डर गए हैं।
न्याय की इस अहिंसक लड़ाई में हम देश के अन्नदाता को जिता कर रहेंगे। #NoFear #लखीमपुर_किसान_नरसंहार
— Rahul Gandhi (@RahulGandhi) October 4, 2021
ಈ ಕುರಿತು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, “ಪ್ರಿಯಾಂಕ, ನನಗೆ ಗೊತ್ತು ನೀನು ಹಿಂದೆ ಸರಿಯುವುದಿಲ್ಲ ಎಂದು. ನಿನ್ನ ಧೈರ್ಯದಿಂದ ಅವರು ಕಂಗಲಾಗಿದ್ದಾರೆ. ಈ ಅಹಿಂಸಾತ್ಮಕ ಹೋರಾಟದಿಂದ ನಾವು ದೇಶದ ಅನ್ನದಾತರನ್ನು ಗೆಲ್ಲಿಸುತ್ತೇವೆ” ಎಂದಿದ್ದಾರೆ.
ಇದನ್ನೂ ಒದಿ: ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು