Homeಚಳವಳಿಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ಸ್ಥಳೀಯ ಮಾಧ್ಯಮಗಳು ಪೊಲೀಸರ ಕ್ರಮವನ್ನು ‘ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ’ ಎಂದು ಕರೆದಿವೆ.

- Advertisement -
- Advertisement -

ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿಯ ನಾಯಕರಾದ ಅಖಿಲ್ ಗೊಗೋಯ್ ಅವರ ಭಿತ್ತಿಚಿತ್ರವನ್ನು ಚಿತ್ರಿಸಿದ್ದಕ್ಕಾಗಿ ಗುವಾಹಟಿ ಮೂಲದ ನಾಲ್ವರು ಕಲಾವಿದರ ಗುಂಪನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕಲಾವಿದರನ್ನು ಛತ್ರ ಮುಕ್ತಿ ಸಂಗ್ರಾಮ್ ಸಮಿತಿ (SMS) ಮುಖಂಡ ಪ್ರಂಜಲ್ ಕಾಳಿತಾ ಅವರೊಂದಿಗೆ ಬಸಿಸ್ಥಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಅಖಿಲ್ ಗೊಗೋಯ್ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಅಸ್ಸಾಂನಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಇವರನನ್ನು ಬಂಧಿಸಲಾಗಿತ್ತು. ದೇಶದ್ರೋಹ ಸೇರಿದಂತೆ ಗೊಗೊಯ್ ಅವರನ್ನು ಹಲವಾರು ಅಪರಾಧಗಳ ಆರೋಪದಲ್ಲಿ ಜೈಲಿನಲ್ಲಿ ಇರಿಸಲಾಗಿದೆ.

ಗುವಾಹಟಿಯ ಅಂಗ ಆರ್ಟ್ ಗುಂಪಿಗೆ ಸೇರಿದ ನಾಲ್ವರು ಕಲಾವಿದರು, ಬಸಿಸ್ಥಾದ  ಸಿಟಿ ಬ್ರಿಡ್ಜ್‌ನ ಸಾರ್ವಜನಿಕ ಗೋಡೆಯ ಮೇಲೆ ರೈತ ನಾಯಕ ಅಖಿಲ್ ಗೊಗೋಯ್ ಅವರನ್ನು ಪೊಲೀಸರು ಎಳೆದೊಯ್ಯುತ್ತಿರುವ ವರ್ಣಚಿತ್ರವನ್ನು ಕಲಾವಿದರು ಚಿತ್ರಿಸಿದ್ದರು. ಭಿತ್ತಿ ಚಿತ್ರವನ್ನು ನಂತರ ಪೊಲೀಸರು ಅಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು ಪೊಲೀಸರ ಕ್ರಮವನ್ನು ‘ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ’ ಎಂದು ಕರೆದಿವೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

PC: The Wire

ಗೌಹಟಿ ಹೈಕೋರ್ಟ್ ಗೊಗೋಯ್ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುತ್ತಿದ್ದ ದಿನವೇ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಭಿತ್ತಿಚಿತ್ರ ವೈರಲ್ ಆಗಿತ್ತು. ಕಲಾವಿದರು ಬುಧವಾರವೇ ಚಿತ್ರ ರಚಿಸಲು ಪ್ರಾರಂಭಿಸಿದ್ದರು. ಆದರೇ ಆ ದಿನ ಪೊಲೀಸರು ಅದನ್ನು ಗಮನಿಸಿರಲಿಲ್ಲ ಎಂದು ಕಲಾವಿದರು ತಿಳಿಸಿದ್ದಾರೆ.

ನಾಲ್ವರು ಕಲಾವಿದರಲ್ಲಿ ಒಬ್ಬರಾದ ಧ್ರುಬಾ ಶರ್ಮಾ ದಿ ವೈರ್‌ಗೆ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,“ಇದು ತುಂಬಾ ವಿಚಿತ್ರವಾಗಿದೆ. ನಾವು ಸರ್ಕಾರಿ ಆಸ್ತಿಗೆ ಹಾನಿ ಮಾಡುತ್ತಿದ್ದೇವೆ ಎಂಬ ಆರೋಪದ ಮೇಲೆ ನಮಗೆ ಚಿತ್ರ ಬಿಡಿಸಲು ಯಾವುದೇ ಅನುಮತಿ ನೀಡಿಲ್ಲ ಎಂದು ಪೊಲೀಸರು ಹೇಳಿದಾಗ ನಾವಾಗಲೇ ಅರ್ಧದಷ್ಟು ಚಿತ್ರ ಪೂರ್ಣಗೊಳಿಸಿದ್ದೇವು” ಎಂದಿದ್ದಾರೆ.

ನಮ್ಮನ್ನು ವಶಕ್ಕೆ ಪಡೆದ ಪೊಲೀಸರು, ನಾವು ಅಖಿಲ್ ಗೊಗೋಯ್ ಅವರನ್ನು ದೇವರ ರೀತಿಯಲ್ಲಿ ಏಕೆ ಚಿತ್ರಿಸುತ್ತಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ ಎಂದು ಕಲಾವಿದ ಧ್ರುಬಾ ಶರ್ಮಾ ಹೇಳಿದ್ದಾರೆ. ಜೊತೆಗೆ ಕೆಲವು ಪೊಲೀಸರು, ತಾವು ರಚಿಸಿದ ಭಿತ್ತಿಚಿತ್ರವನ್ನು ಇಷ್ಟಪಟ್ಟಿದ್ದಾರೆ ಎಂದಿದ್ದಾರೆ.

ಅಂಗಾ ಆರ್ಟ್ ಗುಂಪು 2010 ರಲ್ಲಿ ಭಿತ್ತಿಚಿತ್ರಗಳನ್ನು ರಾಜಕೀಯ ಅಭಿವ್ಯಕ್ತಿಯ ರೂಪವಾಗಿ ಚಿತ್ರಿಸಲು ಪ್ರಾರಂಭಿಸಿತು. 2019 ರ ಕೊನೆಯಿಂದ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಗುರಿಯಾಗಿಟ್ಟುಕೊಂಡು ‘ದ್ವೇಷದ ವಿರುದ್ಧ ಕಲೆ’ ಎಂಬ ಶೀರ್ಷಿಕೆಯಲ್ಲಿ ಕಲಾತ್ಮಕವಾಗಿ ಅನಿಸಿಕೆಗಳನ್ನು ಚಿತ್ರಿಸಲು ಪ್ರಾರಂಭಿಸಿತು.


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...