Homeಚಳವಳಿಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ಸ್ಥಳೀಯ ಮಾಧ್ಯಮಗಳು ಪೊಲೀಸರ ಕ್ರಮವನ್ನು ‘ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ’ ಎಂದು ಕರೆದಿವೆ.

- Advertisement -
- Advertisement -

ಅಸ್ಸಾಮಿನ ಪ್ರಮುಖ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿಯ ನಾಯಕರಾದ ಅಖಿಲ್ ಗೊಗೋಯ್ ಅವರ ಭಿತ್ತಿಚಿತ್ರವನ್ನು ಚಿತ್ರಿಸಿದ್ದಕ್ಕಾಗಿ ಗುವಾಹಟಿ ಮೂಲದ ನಾಲ್ವರು ಕಲಾವಿದರ ಗುಂಪನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕಲಾವಿದರನ್ನು ಛತ್ರ ಮುಕ್ತಿ ಸಂಗ್ರಾಮ್ ಸಮಿತಿ (SMS) ಮುಖಂಡ ಪ್ರಂಜಲ್ ಕಾಳಿತಾ ಅವರೊಂದಿಗೆ ಬಸಿಸ್ಥಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಅಖಿಲ್ ಗೊಗೋಯ್ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಅಸ್ಸಾಂನಲ್ಲಿ ನಡೆದ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಇವರನನ್ನು ಬಂಧಿಸಲಾಗಿತ್ತು. ದೇಶದ್ರೋಹ ಸೇರಿದಂತೆ ಗೊಗೊಯ್ ಅವರನ್ನು ಹಲವಾರು ಅಪರಾಧಗಳ ಆರೋಪದಲ್ಲಿ ಜೈಲಿನಲ್ಲಿ ಇರಿಸಲಾಗಿದೆ.

ಗುವಾಹಟಿಯ ಅಂಗ ಆರ್ಟ್ ಗುಂಪಿಗೆ ಸೇರಿದ ನಾಲ್ವರು ಕಲಾವಿದರು, ಬಸಿಸ್ಥಾದ  ಸಿಟಿ ಬ್ರಿಡ್ಜ್‌ನ ಸಾರ್ವಜನಿಕ ಗೋಡೆಯ ಮೇಲೆ ರೈತ ನಾಯಕ ಅಖಿಲ್ ಗೊಗೋಯ್ ಅವರನ್ನು ಪೊಲೀಸರು ಎಳೆದೊಯ್ಯುತ್ತಿರುವ ವರ್ಣಚಿತ್ರವನ್ನು ಕಲಾವಿದರು ಚಿತ್ರಿಸಿದ್ದರು. ಭಿತ್ತಿ ಚಿತ್ರವನ್ನು ನಂತರ ಪೊಲೀಸರು ಅಳಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳು ಪೊಲೀಸರ ಕ್ರಮವನ್ನು ‘ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ’ ಎಂದು ಕರೆದಿವೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

PC: The Wire

ಗೌಹಟಿ ಹೈಕೋರ್ಟ್ ಗೊಗೋಯ್ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸುತ್ತಿದ್ದ ದಿನವೇ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಭಿತ್ತಿಚಿತ್ರ ವೈರಲ್ ಆಗಿತ್ತು. ಕಲಾವಿದರು ಬುಧವಾರವೇ ಚಿತ್ರ ರಚಿಸಲು ಪ್ರಾರಂಭಿಸಿದ್ದರು. ಆದರೇ ಆ ದಿನ ಪೊಲೀಸರು ಅದನ್ನು ಗಮನಿಸಿರಲಿಲ್ಲ ಎಂದು ಕಲಾವಿದರು ತಿಳಿಸಿದ್ದಾರೆ.

ನಾಲ್ವರು ಕಲಾವಿದರಲ್ಲಿ ಒಬ್ಬರಾದ ಧ್ರುಬಾ ಶರ್ಮಾ ದಿ ವೈರ್‌ಗೆ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,“ಇದು ತುಂಬಾ ವಿಚಿತ್ರವಾಗಿದೆ. ನಾವು ಸರ್ಕಾರಿ ಆಸ್ತಿಗೆ ಹಾನಿ ಮಾಡುತ್ತಿದ್ದೇವೆ ಎಂಬ ಆರೋಪದ ಮೇಲೆ ನಮಗೆ ಚಿತ್ರ ಬಿಡಿಸಲು ಯಾವುದೇ ಅನುಮತಿ ನೀಡಿಲ್ಲ ಎಂದು ಪೊಲೀಸರು ಹೇಳಿದಾಗ ನಾವಾಗಲೇ ಅರ್ಧದಷ್ಟು ಚಿತ್ರ ಪೂರ್ಣಗೊಳಿಸಿದ್ದೇವು” ಎಂದಿದ್ದಾರೆ.

ನಮ್ಮನ್ನು ವಶಕ್ಕೆ ಪಡೆದ ಪೊಲೀಸರು, ನಾವು ಅಖಿಲ್ ಗೊಗೋಯ್ ಅವರನ್ನು ದೇವರ ರೀತಿಯಲ್ಲಿ ಏಕೆ ಚಿತ್ರಿಸುತ್ತಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ ಎಂದು ಕಲಾವಿದ ಧ್ರುಬಾ ಶರ್ಮಾ ಹೇಳಿದ್ದಾರೆ. ಜೊತೆಗೆ ಕೆಲವು ಪೊಲೀಸರು, ತಾವು ರಚಿಸಿದ ಭಿತ್ತಿಚಿತ್ರವನ್ನು ಇಷ್ಟಪಟ್ಟಿದ್ದಾರೆ ಎಂದಿದ್ದಾರೆ.

ಅಂಗಾ ಆರ್ಟ್ ಗುಂಪು 2010 ರಲ್ಲಿ ಭಿತ್ತಿಚಿತ್ರಗಳನ್ನು ರಾಜಕೀಯ ಅಭಿವ್ಯಕ್ತಿಯ ರೂಪವಾಗಿ ಚಿತ್ರಿಸಲು ಪ್ರಾರಂಭಿಸಿತು. 2019 ರ ಕೊನೆಯಿಂದ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಗುರಿಯಾಗಿಟ್ಟುಕೊಂಡು ‘ದ್ವೇಷದ ವಿರುದ್ಧ ಕಲೆ’ ಎಂಬ ಶೀರ್ಷಿಕೆಯಲ್ಲಿ ಕಲಾತ್ಮಕವಾಗಿ ಅನಿಸಿಕೆಗಳನ್ನು ಚಿತ್ರಿಸಲು ಪ್ರಾರಂಭಿಸಿತು.


ಇದನ್ನೂ ಓದಿ: ಅಸ್ಸಾಂ ಚುನಾವಣೆ: ಹೊಸ ಪ್ರಾದೇಶಿಕ ಪಕ್ಷ ಸ್ಥಾಪನೆ. ಅಖಿಲ್ ಗೊಗೊಯ್ ಸಿಎಂ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...