Homeಮುಖಪುಟ"ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು": ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

“ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು”: ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

- Advertisement -
- Advertisement -

ಜನವರಿ 22ರಂದು ಅಯೋಧ್ಯೆ ರಾಮಮಂದಿರದ ಉದ್ಘಾಟನೆಯ ದಿನ ಹಿಂದೂಗಳ ರ್‍ಯಾಲಿಗೆ ಮುಸ್ಲಿಮರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಮುಂಬೈನ ಮೀರಾ ರಸ್ತೆಯಲ್ಲಿ ಹಿಂದುತ್ವ ಗುಂಪಿನ ಉದ್ರಿಕ್ತ ಯುವಕರು ದಾಂಧಲೆ ನಡೆಸಿದ್ದಾರೆ.

ಜನವರಿ 23ರಂದು ಮಂಗಳವಾರ ಮುಂಬೈನ ಮೀರಾ ರಸ್ತೆಯ ಶಾಂತಿ ನಗರದ ಸೆಕ್ಟರ್ 5ರಲ್ಲಿ 200 ರಿಂದ 300 ಹಿಂದುತ್ವ ಗುಂಪಿನ ಯುವಕರು ಮುಸ್ಲಿಮರ ಅಂಗಡಿ-ಮುಂಗಟ್ಟುಗಳನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ. ಅಲ್ಲದೆ, ಮುಸ್ಲಿಮರನ್ನು ಹುಡುಕಿ ಹುಡುಕಿ ಹಲ್ಲೆ ನಡೆಸಿದ್ದಾರೆ. ಯುವಕರ ಗುಂಪು ‘ಜೈ ಶ್ರೀರಾಮ್‌’ ಎಂಬ ಕೇಸರಿ ಧ್ವಜ ಇಲ್ಲದ ಹಾಗೂ ಮುಸ್ಲಿಂ ಹೆಸರಿನ ಅಂಗಡಿ ಮತ್ತು ವಾಹನಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಉದ್ರಿಕ್ತರ ಗುಂಪು ದಾಳಿ ನಡೆಸಿದ ಅಂಗಡಿಗಳ ಪೈಕಿ ಮೀರಾ ರಸ್ತೆಯ ಶಂಶರ್ ಆಲಂ ಅವರದ್ದೂ ಒಂದು. ಕಳೆದ 13 ವರ್ಷಗಳಿಂದ ಶಂಶರ್ ಆಲಂ ಇಲ್ಲಿ ಅಂಗಡಿ ಇಟ್ಟುಕೊಂಡಿದ್ದಾರೆ. ಜನವರಿ 23ರಂದು ಸುಮಾರು 20 ಹರೆಯದ ಯುವಕರ ಗುಂಪು ಏಕಾಏಕಿ ಶಂಶರ್ ಅವರ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದೆ. ಯುವಕರು ತಮ್ಮ ಬಳಿ ಬ್ಯಾಗ್‌ಗಳಲ್ಲಿ ಕಲ್ಲುಗಳನ್ನು ಶೇಖರಿಸಿಟ್ಟುಕೊಂಡಿದ್ದರು. ಇದರಿಂದ ಅವರು ದಾಳಿಗೆ ಮೊದಲೇ ಸಿದ್ದತೆ ನಡೆಸಿದ್ದರು ಎಂದು ಗೊತ್ತಾಗುತ್ತದೆ. ಶಂಶರ್ ಆಲಂ ಅವರ ಅಂಗಡಿಯಲ್ಲಿ 30 ಸೆಕೆಂಡುಗಳ ಕಾಲ ಗಾಜು ಸೇರಿದಂತೆ ಇತ್ಯಾದಿ ವಸ್ತುಗಳನ್ನು ಪುಡಿಗೈದ ಅವರು ಮುಂದೆ ಸಾಗಿದ್ದಾರೆ ಎಂದು ದಿ ವೈರ್ ತಿಳಿಸಿದೆ.

“ನನ್ನ ಅಂಗಡಿ ಧ್ವಂಸಗೈದ ಬಳಿಕ ಉದ್ರಿಕ್ತ ಯುವಕರು ಪಕ್ಕದ ರಸ್ತೆಯ ಮುಸ್ಲಿಮರಿಗೆ ಸೇರಿದ ಇತರ ಅಂಗಡಿಗಳ ಮೇಲೆ ದಾಳಿ ಮುಂದುವರಿಸಿದರು. ಈ ವೇಳೆ ನಯಾ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಅಲ್ಲೇ ಕೇವಲ 20 ಮೀಟರ್ ದೂರದಲ್ಲಿ ರಸ್ತೆಯಲ್ಲಿ ನಿಂತಿದ್ದರು. ಯುವಕರ ದುಷ್ಕೃತ್ಯ ನೋಡಿಯೂ ಅವರು ಸುಮ್ಮನಾಗಿದ್ದರು” ಎಂದು ಶಂಶರ್ ಆಲಂ ಹೇಳಿದ್ದಾರೆ.

ಜನವರಿ 24ರಂದು ಶಂಶರ್ ಆಲಂ ಸೇರಿದಂತೆ ಹಿಂದುತ್ವ ತಂಡದ ದಾಳಿಯಿಂದ ನಷ್ಟ ಅನುಭವಿಸಿದ ಅಂಗಡಿ ಮಾಲೀಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, ಸಾಕ್ಷ್ಯ ಒದಗಿಸಿದರೂ ಪೊಲೀಸರು ಆರೋಪಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೀರಾ ರಸ್ತೆಯ ‘ಚೋಟೆ ನವಾಬ್’ ಎಂಬ ಶೂ ಅಂಗಡಿಯ ಮಾಲೀಕ ಶೇಖ್ ಫೈಯಾಝ್ ಅಹ್ಮದ್ ತನ್ನ ಅಂಗಡಿಯ ಮೇಲೆ ದಾಳಿ ಮಾಡಿದ ಸಮಯದ ಸಿಸಿಟಿವಿ ದೃಶ್ಯಾವಳಿಗಳನ್ನು ನಮಗೆ ತೋರಿಸಿದ್ದಾರೆ. ಅದರಲ್ಲಿ ಹದಿಹರೆಯದ ಯುವಕರು ಅಂಗಡಿಯ ಮೇಲೆ ಕಲ್ಲು ತೂರುವುದನ್ನು ನೋಡಬಹುದು. ಅವರ ಬೆನ್ನಿನಲ್ಲಿ ಕಲ್ಲುಗಳನ್ನು ತುಂಬಿದ್ದ ಭಾರವಾದ ಬ್ಯಾಗ್‌ ಇತ್ತು. ಕೆಲವರು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದರು ಎಂದು ದಿ ವೈರ್ ಹೇಳಿದೆ.

ಮೀರಾ ರಸ್ತೆಯ ಸೆಕ್ಟರ್ 3ರಲ್ಲಿ “ರಶೀದ್ ಟೆಂಪೋ ಸರ್ವಿಸ್” ಎಂದು ಬರೆಯಲಾಗಿದ್ದ ಟೆಂಪೋ ಮೇಲೆ ಯುವಕ ಗುಂಪು ದಾಳಿ ನಡೆಸಿದೆ. ಘಟನೆಯಲ್ಲಿ 21 ವರ್ಷದ ಮೊಹಮ್ಮದ್ ತಾರಿಕ್ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ. ಈ ವೇಳೆ ಪಕ್ಕದ ಮೊಬೈಲ್ ಅಂಗಡಿಯೊಂದರ ಸಮೀಪದಲ್ಲಿದ್ದ ಮತ್ತೊಬ್ಬ 49 ವರ್ಷದ ವ್ಯಕ್ತಿ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ವೈರಲ್‌ ವಿಡಿಯೋವೊಂದರಲ್ಲಿ ಯುವಕರ ಗುಂಪು “ರಶೀದ್ ಟೆಂಪೋ ಸರ್ವಿಸ್” ಎಂದು ಬರೆಯಲಾಗಿದ್ದ ಟೆಂಪೋ ಮೇಲೆ ದಾಳಿ ನಡೆಸಿದ್ದನ್ನು ನೋಡಬಹುದು. ದಾಳಿ ವೇಳೆ ಟೆಂಪೋ ಚಾಲಕ ಹೊರಗಿಳಿದಿದ್ದಾನೆ. ಆಗ ಆತನಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಟೆಂಪೋ ಮೇಲಿದ್ದ ಮತ್ತೊಬ್ಬ ವ್ಯಕ್ತಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆಗ ಅಪ್ರಾಪ್ತ ಹುಡುಗನೊಬ್ಬ ಟೆಂಪೋ ಮೇಲೇರಿ ಆತನಿಗೆ ಥಳಿಸಿರುವುದು ವಿಡಿಯೋದಲ್ಲಿ ಗಮನಿಸಬಹುದು.

ಮುಸ್ಲಿಮರ ಆಟೋ ರಿಕ್ಷಾ ಮತ್ತು ಟೆಂಪೋ ಮೇಲೆ ದಾಳಿ ನಡೆಸಿರುವುದು

ಗುಜರಾತ್ ಮೂಲದ ಮೊಹಮ್ಮದ್ ಉಮರ್ ಎಂಬವರು ಮೀರಾ ರಸ್ತೆಯ ಕನ್ನಡಕದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಅಂಗಡಿಗೆ ಮುಸ್ಲಿಂ ಹೆಸರು ಇರಲಿಲ್ಲ, ಬದಲಾಗಿ ‘ಬ್ಲೂ ಐ’ ಎಂದು ಹೆಸರಿಡಲಾಗಿತ್ತು. ಆದರೂ, ಉದ್ರಿಕ್ತತರ ಗುಂಪು ದಾಳಿ ಮಾಡಿತ್ತು. “ನಾವು ಅಂಗಡಿಯ ಹೊರಗಡೆ ಕೇಸರಿ ಧ್ವಜ ಕಟ್ಟಿರಲಿಲ್ಲ. ಅಲ್ಲದೆ, ನಮ್ಮ ಗಡ್ಡ ನೋಡಿ ಮುಸ್ಲಿಮರು ಎಂದು ಊಹೆ ಮಾಡಿ ಅವರು ದಾಳಿ ಮಾಡಿದ್ದಾರೆ” ಎಂದು ಉಮರ್ ತಿಳಿಸಿದ್ದಾರೆ. “ಯುವಕರು ನಮ್ಮ ಪಕ್ಕದ ಅಂಗಡಿ ‘ಗಂಗಾರ್ ಐನೇಷನ್’ ಮೇಲೆಯೂ ದಾಳಿ ಮಾಡಿದ್ದಾರೆ. ಆ ಅಂಗಡಿ ನಿಜವಾಗಿಯೂ ಒಬ್ಬ ಹಿಂದೂ ವ್ಯಕ್ತಿಗೆ ಸೇರಿದ್ದು. ಆದರೆ, ಅಂಗಡಿಯ ಹೊರಗೆ ಕೇಸರಿ ಧ್ವಜ ಇಲ್ಲದ ಕಾರಣ ಅವರು ದಾಳಿ ಮಾಡಿದ್ದಾರೆ” ಎಂದು ಉಮರ್ ಹೇಳಿದ್ದಾರೆ.

ಮತ್ತೊಂದು ವೈರಲ್ ವಿಡಿಯೋದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿ ಮೇಲೆ ಹಿಂದುತ್ವ ಗುಂಪು ದಾಳಿ ಮಾಡಿರುವುದನ್ನು ನೋಡಬಹುದು. ಅಂಗಡಿಯ ಮಾಲೀಕ ಪರಿ ಪರಿಯಾಗಿ ಬೇಡಿಕೊಂಡರು ಉದ್ರಿಕ್ತರ ಗುಂಪು ದಾಳಿ ನಡೆಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ ಕಾಣುತ್ತಿದೆ. ಅಂಗಡಿಯಲ್ಲಿ ಕೇಸರಿ ಧ್ವಜ ಕಟ್ಟಲು ನಿರಾಕರಿಸಿದ್ದಕ್ಕೆ ದಾಳಿ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಮುಸ್ಲಿಂ ವ್ಯಕ್ತಿಯ ಅಂಗಡಿ ಮೇಲೆ ದಾಳಿ ನಡೆಸಿದ್ದು ಎನ್ನಲಾದ ವಿಡಿಯೋ

“ಸುದೀರ್ಘ ಸಮಯ ಪೊಲೀಸರ ಮನವೊಲಿಸಿ ಅಂತಿಮವಾಗಿ ನಾಲ್ಕು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದೇವೆ. ಅವುಗಳಲ್ಲಿ ಒಂದು ರಸ್ತೆಯಲ್ಲಿ 16 ವರ್ಷದ ಹುಡುಗನ ಮೇಲೆ ಹಲ್ಲೆ ಮಾಡಿದ ಗುಂಪೊಂದರ ವಿರುದ್ಧವಾಗಿತ್ತು. ದಾಳಿಯ ನಂತರ ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರಿಗೆ ಎಫ್‌ಐಆರ್‌ ದಾಖಲಿಸಲು ಇಷ್ಟವಿರಲಿಲ್ಲ. ಆದರೆ, ನಾವು ಬಗ್ಗಲು ನಿರಾಕರಿಸಿದಾಗ ಅವರು ಅಂತಿಮವಾಗಿ ಎಫ್‌ಐಆರ್ ದಾಖಲಿಸಿದರು ಎಂದು ದಾಳಿಯ ಸಂತ್ರಸ್ತರ ಪರ ವಾದ ಮಂಡಿಸಿದ ವಕೀಲ ಸಚಿನ್ ಸಾಲ್ವಿ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

16 ವರ್ಷದ ಹುಡುಗನ ಮೇಲೆ ದಾಳಿ ಮಾಡಿದ್ದು ಎನ್ನಲಾದ ವಿಡಿಯೋ

ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಥಾಣೆ ಜಿಲ್ಲೆಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಮೀರಾ ರಸ್ತೆಯಲ್ಲಿ ಹಿಂಸಾಚಾರ ನಡೆದಿದೆ. 2011ರ ಜನಗಣತಿಯ ಮಾಹಿತಿಯ ಪ್ರಕಾರ, ಮೀರಾ ರಸ್ತೆಯಲ್ಲಿ ಶೇ.16ರಷ್ಟು ಮುಸ್ಲಿಮರಿದ್ದಾರೆ. ಕಳೆದ ದಶಕದಲ್ಲಿ, ಮುಂಬೈನಲ್ಲಿ ಜನಸಂಖ್ಯೆ ಹೆಚ್ಚಾಗಲು ಪ್ರಾರಂಭಿಸಿದಾಗ, ಜನರು ಮೀರಾ ರಸ್ತೆ ಮತ್ತು ಭಾಯಂದರ್‌ನಂತಹ ದೂರದ ಉಪನಗರ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಮೀರಾ ರಸ್ತೆಯ ಆಸುಪಾಸಿನಲ್ಲಿ ಅನೇಕ ಖಾಲಿ ಜಾಗಗಳಿವೆ. ಈ ಜಾಗಗಳ ಮೇಲೆ ರಿಯಲ್ ಎಸ್ಟೇಟ್ ಮಾಫಿಯಾಗಳ ಕಣ್ಣಿದೆ. ಮುಸ್ಲಿಮರು ಈ ಭಾಗದಲ್ಲಿ ಹೆಚ್ಚಿರುವುದು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಒಂದು ರೀತಿ ಅಡ್ಡಿಯಾಗಿದೆ. ಹಾಗಾಗಿ, ಗಲಭೆ ಎಬ್ಬಿಸಿ ಮುಸ್ಲಿಮರುನ್ನು ಇಲ್ಲಿಂದ ಓಡಿಸುವ ತಂತ್ರ ರೂಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಖಾಲಿದ್ ಸಿದ್ದಿಕಿ ಹೇಳಿದ್ದಾರೆ ಎಂದು ದಿ ವೈರ್ ತಿಳಿಸಿದೆ.

ಹಿಂಸಾಚಾರ ಮೊದಲು ಆರಂಭಗೊಂಡಿದ್ದು ರಾಮಮಂದಿರ ಉದ್ಘಾಟನೆಯ ಮುನ್ನಾ ದಿನ, ಅಂದರೆ ಜನವರಿ 21ರಂದು. ಅಂದು ರಾತ್ರಿ 10:30 ರ ಸುಮಾರಿಗೆ ಕೆಲ ಯುವಕರು ನಯಾ ನಗರದ ಬನೇಗರ್ ಗಲ್ಲಿಗೆ ಆಗಮಿಸಿದ್ದರು. ಬಹುತೇಕ ಮುಸ್ಲಿಮರ ಮನೆಗಳಿರುವ ಈ ಪ್ರದೇಶದಲ್ಲಿ ಅವರು ಜೋರಾಗಿ “ಜೈ ಶ್ರೀರಾಮ್” ಎಂಬ ಘೋಷಣೆ ಮೊಳಗಿಸಿದ್ದರು. ಕೊನೆಗೆ, ಇಲ್ಲಿನ ಸಾಂಘ್ವಿ ಎಂಪೈರ್ ಹೌಸಿಂಗ್ ಸೊಸೈಟಿಯ ಬಳಿ ತಮ್ಮ ವಾಹನ ನಿಲ್ಲಿಸಿ ಜೋರಾಗಿ ಹಾಡು ಹಾಕಿದ್ದರು. ಈ ಪ್ರದೇಶದಿಂದ ಹೊರ ಹೋಗಲು ರಸ್ತೆಯಿಲ್ಲ. ಆದರೂ, ಯುವಕರು ಮುಸ್ಲಿಮರನ್ನು ಪ್ರಚೋದಿಸುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದರು ಎಂದು ಸಾಂಘ್ವಿ ಎಂಪೈರ್ ಹೌಸಿಂಗ್ ಸೊಸೈಟಿಯ ನಿವಾಸಿ ಝುಲೇಖಾ ತಿಳಿಸಿದ್ದಾರೆ.

ಯವಕರ ಉಪಟಳ ಹೆಚ್ಚಾದಾಗ ಮುಸ್ಲಿಂ ಪುರುಷರು ಅವರನ್ನು ಪ್ರಶ್ನಿಸಿದ್ದರು. ಅದನ್ನು ಕೆಲವರು ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸಿದ ಹಿಂದುತ್ವ ಸಂಘಟನೆಗಳು ರಾಜ್ಯಾದ್ಯಂತ ಸುದ್ದಿ ಹಬ್ಬಿಸಿದವು. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರಲು ಪ್ರಯತ್ನಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು. ಈ ಬೆನ್ನಲ್ಲೇ 13 ಜನರನ್ನು ಬಂಧಿಸಲಾಯಿತು. ಅವರಲ್ಲಿ ಇಬ್ಬರು ನನ್ನ ಪುತ್ರರು. “ಪೊಲೀಸರು ನಮ್ಮ ಮಕ್ಕಳನ್ನು ಕರೆದುಕೊಂಡು ಹೋದರು. ಆದರೆ, ತಡರಾತ್ರಿ ನಮ್ಮ ಏರಿಯಾಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದವರನ್ನು ಪ್ರಶ್ನಿಸಲಿಲ್ಲ. ಮರುದಿನ ನಗರ ಪಾಲಿಕೆಯವರು ಮುಸ್ಲಿಮರ ಅಂಗಡಿಗಳನ್ನು ತೆರವುಗೊಳಿಸಿದರು” ಎಂದು ಝುಲೇಖಾ ಆರೋಪಿಸಿದ್ದಾರೆ.

ಇದನ್ನೂ ಓದಿ : ಬೀದರ್‌: ದಲಿತ ವಿದ್ಯಾರ್ಥಿಗೆ ‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಹಲ್ಲೆ ಆರೋಪ; ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...