Homeಮುಖಪುಟ"ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು": ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

“ದಾಳಿ ವೇಳೆ ಪೊಲೀಸರು ನೋಡುತ್ತಾ ನಿಂತಿದ್ದರು”: ಮುಂಬೈ ಹಿಂದುತ್ವ ಹಿಂಸಾಚಾರ ಸಂತ್ರಸ್ತರ ಅಳಲು

- Advertisement -
- Advertisement -

ಜನವರಿ 22ರಂದು ಅಯೋಧ್ಯೆ ರಾಮಮಂದಿರದ ಉದ್ಘಾಟನೆಯ ದಿನ ಹಿಂದೂಗಳ ರ್‍ಯಾಲಿಗೆ ಮುಸ್ಲಿಮರು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಮುಂಬೈನ ಮೀರಾ ರಸ್ತೆಯಲ್ಲಿ ಹಿಂದುತ್ವ ಗುಂಪಿನ ಉದ್ರಿಕ್ತ ಯುವಕರು ದಾಂಧಲೆ ನಡೆಸಿದ್ದಾರೆ.

ಜನವರಿ 23ರಂದು ಮಂಗಳವಾರ ಮುಂಬೈನ ಮೀರಾ ರಸ್ತೆಯ ಶಾಂತಿ ನಗರದ ಸೆಕ್ಟರ್ 5ರಲ್ಲಿ 200 ರಿಂದ 300 ಹಿಂದುತ್ವ ಗುಂಪಿನ ಯುವಕರು ಮುಸ್ಲಿಮರ ಅಂಗಡಿ-ಮುಂಗಟ್ಟುಗಳನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ. ಅಲ್ಲದೆ, ಮುಸ್ಲಿಮರನ್ನು ಹುಡುಕಿ ಹುಡುಕಿ ಹಲ್ಲೆ ನಡೆಸಿದ್ದಾರೆ. ಯುವಕರ ಗುಂಪು ‘ಜೈ ಶ್ರೀರಾಮ್‌’ ಎಂಬ ಕೇಸರಿ ಧ್ವಜ ಇಲ್ಲದ ಹಾಗೂ ಮುಸ್ಲಿಂ ಹೆಸರಿನ ಅಂಗಡಿ ಮತ್ತು ವಾಹನಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಉದ್ರಿಕ್ತರ ಗುಂಪು ದಾಳಿ ನಡೆಸಿದ ಅಂಗಡಿಗಳ ಪೈಕಿ ಮೀರಾ ರಸ್ತೆಯ ಶಂಶರ್ ಆಲಂ ಅವರದ್ದೂ ಒಂದು. ಕಳೆದ 13 ವರ್ಷಗಳಿಂದ ಶಂಶರ್ ಆಲಂ ಇಲ್ಲಿ ಅಂಗಡಿ ಇಟ್ಟುಕೊಂಡಿದ್ದಾರೆ. ಜನವರಿ 23ರಂದು ಸುಮಾರು 20 ಹರೆಯದ ಯುವಕರ ಗುಂಪು ಏಕಾಏಕಿ ಶಂಶರ್ ಅವರ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದೆ. ಯುವಕರು ತಮ್ಮ ಬಳಿ ಬ್ಯಾಗ್‌ಗಳಲ್ಲಿ ಕಲ್ಲುಗಳನ್ನು ಶೇಖರಿಸಿಟ್ಟುಕೊಂಡಿದ್ದರು. ಇದರಿಂದ ಅವರು ದಾಳಿಗೆ ಮೊದಲೇ ಸಿದ್ದತೆ ನಡೆಸಿದ್ದರು ಎಂದು ಗೊತ್ತಾಗುತ್ತದೆ. ಶಂಶರ್ ಆಲಂ ಅವರ ಅಂಗಡಿಯಲ್ಲಿ 30 ಸೆಕೆಂಡುಗಳ ಕಾಲ ಗಾಜು ಸೇರಿದಂತೆ ಇತ್ಯಾದಿ ವಸ್ತುಗಳನ್ನು ಪುಡಿಗೈದ ಅವರು ಮುಂದೆ ಸಾಗಿದ್ದಾರೆ ಎಂದು ದಿ ವೈರ್ ತಿಳಿಸಿದೆ.

“ನನ್ನ ಅಂಗಡಿ ಧ್ವಂಸಗೈದ ಬಳಿಕ ಉದ್ರಿಕ್ತ ಯುವಕರು ಪಕ್ಕದ ರಸ್ತೆಯ ಮುಸ್ಲಿಮರಿಗೆ ಸೇರಿದ ಇತರ ಅಂಗಡಿಗಳ ಮೇಲೆ ದಾಳಿ ಮುಂದುವರಿಸಿದರು. ಈ ವೇಳೆ ನಯಾ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಅಲ್ಲೇ ಕೇವಲ 20 ಮೀಟರ್ ದೂರದಲ್ಲಿ ರಸ್ತೆಯಲ್ಲಿ ನಿಂತಿದ್ದರು. ಯುವಕರ ದುಷ್ಕೃತ್ಯ ನೋಡಿಯೂ ಅವರು ಸುಮ್ಮನಾಗಿದ್ದರು” ಎಂದು ಶಂಶರ್ ಆಲಂ ಹೇಳಿದ್ದಾರೆ.

ಜನವರಿ 24ರಂದು ಶಂಶರ್ ಆಲಂ ಸೇರಿದಂತೆ ಹಿಂದುತ್ವ ತಂಡದ ದಾಳಿಯಿಂದ ನಷ್ಟ ಅನುಭವಿಸಿದ ಅಂಗಡಿ ಮಾಲೀಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, ಸಾಕ್ಷ್ಯ ಒದಗಿಸಿದರೂ ಪೊಲೀಸರು ಆರೋಪಿಗಳ ವಿರುದ್ದ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೀರಾ ರಸ್ತೆಯ ‘ಚೋಟೆ ನವಾಬ್’ ಎಂಬ ಶೂ ಅಂಗಡಿಯ ಮಾಲೀಕ ಶೇಖ್ ಫೈಯಾಝ್ ಅಹ್ಮದ್ ತನ್ನ ಅಂಗಡಿಯ ಮೇಲೆ ದಾಳಿ ಮಾಡಿದ ಸಮಯದ ಸಿಸಿಟಿವಿ ದೃಶ್ಯಾವಳಿಗಳನ್ನು ನಮಗೆ ತೋರಿಸಿದ್ದಾರೆ. ಅದರಲ್ಲಿ ಹದಿಹರೆಯದ ಯುವಕರು ಅಂಗಡಿಯ ಮೇಲೆ ಕಲ್ಲು ತೂರುವುದನ್ನು ನೋಡಬಹುದು. ಅವರ ಬೆನ್ನಿನಲ್ಲಿ ಕಲ್ಲುಗಳನ್ನು ತುಂಬಿದ್ದ ಭಾರವಾದ ಬ್ಯಾಗ್‌ ಇತ್ತು. ಕೆಲವರು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದರು ಎಂದು ದಿ ವೈರ್ ಹೇಳಿದೆ.

ಮೀರಾ ರಸ್ತೆಯ ಸೆಕ್ಟರ್ 3ರಲ್ಲಿ “ರಶೀದ್ ಟೆಂಪೋ ಸರ್ವಿಸ್” ಎಂದು ಬರೆಯಲಾಗಿದ್ದ ಟೆಂಪೋ ಮೇಲೆ ಯುವಕ ಗುಂಪು ದಾಳಿ ನಡೆಸಿದೆ. ಘಟನೆಯಲ್ಲಿ 21 ವರ್ಷದ ಮೊಹಮ್ಮದ್ ತಾರಿಕ್ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ. ಈ ವೇಳೆ ಪಕ್ಕದ ಮೊಬೈಲ್ ಅಂಗಡಿಯೊಂದರ ಸಮೀಪದಲ್ಲಿದ್ದ ಮತ್ತೊಬ್ಬ 49 ವರ್ಷದ ವ್ಯಕ್ತಿ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ವೈರಲ್‌ ವಿಡಿಯೋವೊಂದರಲ್ಲಿ ಯುವಕರ ಗುಂಪು “ರಶೀದ್ ಟೆಂಪೋ ಸರ್ವಿಸ್” ಎಂದು ಬರೆಯಲಾಗಿದ್ದ ಟೆಂಪೋ ಮೇಲೆ ದಾಳಿ ನಡೆಸಿದ್ದನ್ನು ನೋಡಬಹುದು. ದಾಳಿ ವೇಳೆ ಟೆಂಪೋ ಚಾಲಕ ಹೊರಗಿಳಿದಿದ್ದಾನೆ. ಆಗ ಆತನಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಟೆಂಪೋ ಮೇಲಿದ್ದ ಮತ್ತೊಬ್ಬ ವ್ಯಕ್ತಿ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಆಗ ಅಪ್ರಾಪ್ತ ಹುಡುಗನೊಬ್ಬ ಟೆಂಪೋ ಮೇಲೇರಿ ಆತನಿಗೆ ಥಳಿಸಿರುವುದು ವಿಡಿಯೋದಲ್ಲಿ ಗಮನಿಸಬಹುದು.

ಮುಸ್ಲಿಮರ ಆಟೋ ರಿಕ್ಷಾ ಮತ್ತು ಟೆಂಪೋ ಮೇಲೆ ದಾಳಿ ನಡೆಸಿರುವುದು

ಗುಜರಾತ್ ಮೂಲದ ಮೊಹಮ್ಮದ್ ಉಮರ್ ಎಂಬವರು ಮೀರಾ ರಸ್ತೆಯ ಕನ್ನಡಕದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಅಂಗಡಿಗೆ ಮುಸ್ಲಿಂ ಹೆಸರು ಇರಲಿಲ್ಲ, ಬದಲಾಗಿ ‘ಬ್ಲೂ ಐ’ ಎಂದು ಹೆಸರಿಡಲಾಗಿತ್ತು. ಆದರೂ, ಉದ್ರಿಕ್ತತರ ಗುಂಪು ದಾಳಿ ಮಾಡಿತ್ತು. “ನಾವು ಅಂಗಡಿಯ ಹೊರಗಡೆ ಕೇಸರಿ ಧ್ವಜ ಕಟ್ಟಿರಲಿಲ್ಲ. ಅಲ್ಲದೆ, ನಮ್ಮ ಗಡ್ಡ ನೋಡಿ ಮುಸ್ಲಿಮರು ಎಂದು ಊಹೆ ಮಾಡಿ ಅವರು ದಾಳಿ ಮಾಡಿದ್ದಾರೆ” ಎಂದು ಉಮರ್ ತಿಳಿಸಿದ್ದಾರೆ. “ಯುವಕರು ನಮ್ಮ ಪಕ್ಕದ ಅಂಗಡಿ ‘ಗಂಗಾರ್ ಐನೇಷನ್’ ಮೇಲೆಯೂ ದಾಳಿ ಮಾಡಿದ್ದಾರೆ. ಆ ಅಂಗಡಿ ನಿಜವಾಗಿಯೂ ಒಬ್ಬ ಹಿಂದೂ ವ್ಯಕ್ತಿಗೆ ಸೇರಿದ್ದು. ಆದರೆ, ಅಂಗಡಿಯ ಹೊರಗೆ ಕೇಸರಿ ಧ್ವಜ ಇಲ್ಲದ ಕಾರಣ ಅವರು ದಾಳಿ ಮಾಡಿದ್ದಾರೆ” ಎಂದು ಉಮರ್ ಹೇಳಿದ್ದಾರೆ.

ಮತ್ತೊಂದು ವೈರಲ್ ವಿಡಿಯೋದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿ ಮೇಲೆ ಹಿಂದುತ್ವ ಗುಂಪು ದಾಳಿ ಮಾಡಿರುವುದನ್ನು ನೋಡಬಹುದು. ಅಂಗಡಿಯ ಮಾಲೀಕ ಪರಿ ಪರಿಯಾಗಿ ಬೇಡಿಕೊಂಡರು ಉದ್ರಿಕ್ತರ ಗುಂಪು ದಾಳಿ ನಡೆಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ ಕಾಣುತ್ತಿದೆ. ಅಂಗಡಿಯಲ್ಲಿ ಕೇಸರಿ ಧ್ವಜ ಕಟ್ಟಲು ನಿರಾಕರಿಸಿದ್ದಕ್ಕೆ ದಾಳಿ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.

ಮುಸ್ಲಿಂ ವ್ಯಕ್ತಿಯ ಅಂಗಡಿ ಮೇಲೆ ದಾಳಿ ನಡೆಸಿದ್ದು ಎನ್ನಲಾದ ವಿಡಿಯೋ

“ಸುದೀರ್ಘ ಸಮಯ ಪೊಲೀಸರ ಮನವೊಲಿಸಿ ಅಂತಿಮವಾಗಿ ನಾಲ್ಕು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗುವಂತೆ ಮಾಡಿದ್ದೇವೆ. ಅವುಗಳಲ್ಲಿ ಒಂದು ರಸ್ತೆಯಲ್ಲಿ 16 ವರ್ಷದ ಹುಡುಗನ ಮೇಲೆ ಹಲ್ಲೆ ಮಾಡಿದ ಗುಂಪೊಂದರ ವಿರುದ್ಧವಾಗಿತ್ತು. ದಾಳಿಯ ನಂತರ ಬಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರಿಗೆ ಎಫ್‌ಐಆರ್‌ ದಾಖಲಿಸಲು ಇಷ್ಟವಿರಲಿಲ್ಲ. ಆದರೆ, ನಾವು ಬಗ್ಗಲು ನಿರಾಕರಿಸಿದಾಗ ಅವರು ಅಂತಿಮವಾಗಿ ಎಫ್‌ಐಆರ್ ದಾಖಲಿಸಿದರು ಎಂದು ದಾಳಿಯ ಸಂತ್ರಸ್ತರ ಪರ ವಾದ ಮಂಡಿಸಿದ ವಕೀಲ ಸಚಿನ್ ಸಾಲ್ವಿ ಹೇಳಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ.

16 ವರ್ಷದ ಹುಡುಗನ ಮೇಲೆ ದಾಳಿ ಮಾಡಿದ್ದು ಎನ್ನಲಾದ ವಿಡಿಯೋ

ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಥಾಣೆ ಜಿಲ್ಲೆಯ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಮೀರಾ ರಸ್ತೆಯಲ್ಲಿ ಹಿಂಸಾಚಾರ ನಡೆದಿದೆ. 2011ರ ಜನಗಣತಿಯ ಮಾಹಿತಿಯ ಪ್ರಕಾರ, ಮೀರಾ ರಸ್ತೆಯಲ್ಲಿ ಶೇ.16ರಷ್ಟು ಮುಸ್ಲಿಮರಿದ್ದಾರೆ. ಕಳೆದ ದಶಕದಲ್ಲಿ, ಮುಂಬೈನಲ್ಲಿ ಜನಸಂಖ್ಯೆ ಹೆಚ್ಚಾಗಲು ಪ್ರಾರಂಭಿಸಿದಾಗ, ಜನರು ಮೀರಾ ರಸ್ತೆ ಮತ್ತು ಭಾಯಂದರ್‌ನಂತಹ ದೂರದ ಉಪನಗರ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಮೀರಾ ರಸ್ತೆಯ ಆಸುಪಾಸಿನಲ್ಲಿ ಅನೇಕ ಖಾಲಿ ಜಾಗಗಳಿವೆ. ಈ ಜಾಗಗಳ ಮೇಲೆ ರಿಯಲ್ ಎಸ್ಟೇಟ್ ಮಾಫಿಯಾಗಳ ಕಣ್ಣಿದೆ. ಮುಸ್ಲಿಮರು ಈ ಭಾಗದಲ್ಲಿ ಹೆಚ್ಚಿರುವುದು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರಿಗೆ ಒಂದು ರೀತಿ ಅಡ್ಡಿಯಾಗಿದೆ. ಹಾಗಾಗಿ, ಗಲಭೆ ಎಬ್ಬಿಸಿ ಮುಸ್ಲಿಮರುನ್ನು ಇಲ್ಲಿಂದ ಓಡಿಸುವ ತಂತ್ರ ರೂಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಖಾಲಿದ್ ಸಿದ್ದಿಕಿ ಹೇಳಿದ್ದಾರೆ ಎಂದು ದಿ ವೈರ್ ತಿಳಿಸಿದೆ.

ಹಿಂಸಾಚಾರ ಮೊದಲು ಆರಂಭಗೊಂಡಿದ್ದು ರಾಮಮಂದಿರ ಉದ್ಘಾಟನೆಯ ಮುನ್ನಾ ದಿನ, ಅಂದರೆ ಜನವರಿ 21ರಂದು. ಅಂದು ರಾತ್ರಿ 10:30 ರ ಸುಮಾರಿಗೆ ಕೆಲ ಯುವಕರು ನಯಾ ನಗರದ ಬನೇಗರ್ ಗಲ್ಲಿಗೆ ಆಗಮಿಸಿದ್ದರು. ಬಹುತೇಕ ಮುಸ್ಲಿಮರ ಮನೆಗಳಿರುವ ಈ ಪ್ರದೇಶದಲ್ಲಿ ಅವರು ಜೋರಾಗಿ “ಜೈ ಶ್ರೀರಾಮ್” ಎಂಬ ಘೋಷಣೆ ಮೊಳಗಿಸಿದ್ದರು. ಕೊನೆಗೆ, ಇಲ್ಲಿನ ಸಾಂಘ್ವಿ ಎಂಪೈರ್ ಹೌಸಿಂಗ್ ಸೊಸೈಟಿಯ ಬಳಿ ತಮ್ಮ ವಾಹನ ನಿಲ್ಲಿಸಿ ಜೋರಾಗಿ ಹಾಡು ಹಾಕಿದ್ದರು. ಈ ಪ್ರದೇಶದಿಂದ ಹೊರ ಹೋಗಲು ರಸ್ತೆಯಿಲ್ಲ. ಆದರೂ, ಯುವಕರು ಮುಸ್ಲಿಮರನ್ನು ಪ್ರಚೋದಿಸುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದರು ಎಂದು ಸಾಂಘ್ವಿ ಎಂಪೈರ್ ಹೌಸಿಂಗ್ ಸೊಸೈಟಿಯ ನಿವಾಸಿ ಝುಲೇಖಾ ತಿಳಿಸಿದ್ದಾರೆ.

ಯವಕರ ಉಪಟಳ ಹೆಚ್ಚಾದಾಗ ಮುಸ್ಲಿಂ ಪುರುಷರು ಅವರನ್ನು ಪ್ರಶ್ನಿಸಿದ್ದರು. ಅದನ್ನು ಕೆಲವರು ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸಿದ ಹಿಂದುತ್ವ ಸಂಘಟನೆಗಳು ರಾಜ್ಯಾದ್ಯಂತ ಸುದ್ದಿ ಹಬ್ಬಿಸಿದವು. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರಲು ಪ್ರಯತ್ನಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು. ಈ ಬೆನ್ನಲ್ಲೇ 13 ಜನರನ್ನು ಬಂಧಿಸಲಾಯಿತು. ಅವರಲ್ಲಿ ಇಬ್ಬರು ನನ್ನ ಪುತ್ರರು. “ಪೊಲೀಸರು ನಮ್ಮ ಮಕ್ಕಳನ್ನು ಕರೆದುಕೊಂಡು ಹೋದರು. ಆದರೆ, ತಡರಾತ್ರಿ ನಮ್ಮ ಏರಿಯಾಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದವರನ್ನು ಪ್ರಶ್ನಿಸಲಿಲ್ಲ. ಮರುದಿನ ನಗರ ಪಾಲಿಕೆಯವರು ಮುಸ್ಲಿಮರ ಅಂಗಡಿಗಳನ್ನು ತೆರವುಗೊಳಿಸಿದರು” ಎಂದು ಝುಲೇಖಾ ಆರೋಪಿಸಿದ್ದಾರೆ.

ಇದನ್ನೂ ಓದಿ : ಬೀದರ್‌: ದಲಿತ ವಿದ್ಯಾರ್ಥಿಗೆ ‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಹಲ್ಲೆ ಆರೋಪ; ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...