Homeಮುಖಪುಟಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

ಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಸಿಂಗು ಗಡಿಯಲ್ಲಿ ಭಾರತದ ರೈತರು ಅಹಿಂಸಾತ್ಮಕ ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೆ ಗಣರಾಜ್ಯ ದಿನವಾದ ಇಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಯನ್ನು ಆಯೋಜಿಸಲಾಗಿದೆ. ದೆಹಲಿಯ ಈ ರೈತ ಹೋರಾಟವನ್ನು ಬೆಂಬಲಿಸಿ ಕರ್ನಾಟಕದಲ್ಲೂ ವಿವಿಧ ರೈತ ಸಂಘಟನೆಗಳು “ಬೆಂಗಳೂರಿಗೆ ಟ್ರ್ಯಾಕ್ಟರ್​ ಚಲೋ” ಹೋರಾಟಕ್ಕೆ ಕರೆ ನೀಡಿದ್ದವು.

ಈ ಸಂಬಂಧ ಪತ್ರಿಕಾಗೋಷ್ಠಿಯನ್ನು ನಡೆಸಿದ್ದ ರೈತ ಮುಖಂಡರು ಟ್ರ್ಯಾಕ್ಟರ್​ ರ‍್ಯಾಲಿ ನಡೆಸಿಯೇ ಸಿದ್ದ ಎಂದು ಖಡಕ್ ಆಗಿ ತಿಳಿಸಿದ್ದರು. ಅಲ್ಲದೆ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸ್​ ಆಯುಕ್ತರಿಗೂ ಮನವಿ ನೀಡಿದ್ದರು. ಆದರೆ, ಒಂದೆಡೆ ಪೊಲೀಸರು ಶಾಂತಿಯುವ ರ‍್ಯಾಲಿಗೆ ಅನುಮತಿ ನೀಡಿದ್ದರೆ, ಮತ್ತೊಂದೆಡೆ ಸರ್ಕಾರ ಯಾವುದೇ ಕಾರಣಕ್ಕೂ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರ ಮತ್ತು ಪೊಲೀಸರ ನಡುವಿನ ಸಮನ್ವಯತೆ ಹಳ್ಳ ಹಿಡಿದಿರುವ ಪರಿಣಾಮ ಇಂದು ರಾಜ್ಯದ ಮೂಲೆ ಮೂಲೆಯಿಂದ ಬೆಂಗಳೂರಿನ ಕಡೆಗೆ ಟ್ರ್ಯಾಕ್ಟರ್​ ರ‍್ಯಾಲಿ ಹೊರಟಿದ್ದ ರೈತ ಹೋರಾಟಗಾರರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ಬೆಂಗಳೂರಿನ ವಿವಿಧ ಗಡಿ ಭಾಗಗಳಿಂದ ರೈತರು ನಗರವನ್ನು ಪ್ರವೇಶಿಸಲು ಮುಂದಾಗಿದ್ದಾರೆ. ಆದರೆ, ಇದೀಗ ಪೊಲೀಸರು ಅಲ್ಲೇ ಹೋರಾಟಗಾರರನ್ನು ತಡೆದು ನಿಲ್ಲಿಸಿದ್ದಾರೆ. ಆದರೆ, ರೈತ ಹೋರಾಟಗಾರರು ಮಾತ್ರ ರ‍್ಯಾಲಿ ನಡೆಸಿಯೇ ಸಿದ್ಧ ಎಂದು ಪಣ ತೊಟ್ಟಂತಿದೆ.

5 ಭಾಗಗಳಿಂದ ರಾಜಧಾನಿ ಪ್ರವೇಶಿಸಲಿದೆ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಕೃಷಿ ಕಾಯ್ದೆಯನ್ನು ವಿರೋಧಿಸಿರುವ ರೈತರು ಈಗಾಗಲೇ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ಗೆ ಮೆರವಣಿಗೆ ಹೊರಟಿದ್ದಾರೆ. ಆದರೆ, ಬೆಂಗಳೂರಿನ ನೆರೆಯ ಜಿಲ್ಲೆಗಳಾದ ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಿಂದ ರೈತರು ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಡದಿ, ನಲಮಂಗಲ, ನಂದಿಕ್ರಾಸ್, ಹೊಸಕೋಟೆ ಸೇರಿದಂತೆ ಬೆಂಗಳೂರಿನ ವಿವಿಧ ಗಡಿಗಳ ಮೂಲಕ ರಾಜಧಾನಿಯನ್ನು ಪ್ರವೇಶಿಸುವುದು ರೈತ ಹೋರಾಟಗಾರರ ಉದ್ದೇಶ. ಆದರೆ, ಸೋಮವಾರ ರ‍್ಯಾಲಿಗೆ ಅನುಮತಿ ನೀಡಿದ್ದ ಪೊಲೀಸರು ಇಂದು ರಾಜಧಾನಿಯ ಎಲ್ಲಾ ಗಡಿಗಳನ್ನೂ ಬಂದ್​ ಮಾಡಿದ್ದಾರೆ. ರೈತ ಹೋರಾಟಗಾರರನ್ನು ಟ್ರ್ಯಾಕ್ಟರ್​ ಸಮೇತ ಅಲ್ಲಲ್ಲೆ ತಡೆದು ನಿಲ್ಲಿಸುತ್ತಿದ್ದಾರೆ.

ಅಲ್ಲದೆ, ಹೊಸಕೋಟೆ ಟೋಲ್ ಮುಂಭಾಗದಲ್ಲಿ ಸಿಐಟಿಯು ಕಾರ್ಯಕರ್ತರು ಜಮಾಯಿಸಿದ್ದಾರೆ. ಆದರೆ, ಅವರನ್ನೂ ಸಹ ತಡೆದು ನಿಲ್ಲಿಸಲಾಗಿದೆ. ಪರಿಣಾಮ ಸಿಐಟಿಯು ಕಾರ್ಯಕರ್ತರು ಮತ್ತು ರೈತ ಹೋರಾಟಗಾರರು ರಾಷ್ಟ್ರ ಧ್ವಜ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲೂ ಸಹ ರೈತರ ಟ್ರಾಕ್ಟರ್ ಗಳಿಗೆ ಪೊಲೀಸರು ತಡೆದಿದ್ದಾರೆ.

ಈ ನಡುವೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ರೈತ ಹೋರಾಟಗಾರರು ಮಾದಾವರದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಅಲ್ಲದೆ, ಮಾದಾವರದಲ್ಲಿ ಭಾರತದ ಧ್ವಜಗಳನ್ನು ಹಿಡಿದು ಪರೇಡ್ ನಡೆಸುವ ಮೂಲಕ ಎಲ್ಲಾ ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್​ ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. ಈ ರ‍್ಯಾಲಿಯಲ್ಲಿ ರೈತರ ಜೊತೆಗೆ ಕಾರ್ಮಿಕರು, ದೆಲಿತರು, ಮಹಿಳೆಯರೂ ಸಹ ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕರು ತಂಡೋಪ ತಂಡವಾಗಿ ನಂದಿಕ್ರಾಸ್ ಬಳಿ ಜಮಾವಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಮೇಲೆ ಪೊಲೀಸರ ದಾಳಿ ಆರಂಭ: ಲಾಠೀಚಾರ್ಚ್, ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...