Homeಮುಖಪುಟಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

ಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಸಿಂಗು ಗಡಿಯಲ್ಲಿ ಭಾರತದ ರೈತರು ಅಹಿಂಸಾತ್ಮಕ ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೆ ಗಣರಾಜ್ಯ ದಿನವಾದ ಇಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಯನ್ನು ಆಯೋಜಿಸಲಾಗಿದೆ. ದೆಹಲಿಯ ಈ ರೈತ ಹೋರಾಟವನ್ನು ಬೆಂಬಲಿಸಿ ಕರ್ನಾಟಕದಲ್ಲೂ ವಿವಿಧ ರೈತ ಸಂಘಟನೆಗಳು “ಬೆಂಗಳೂರಿಗೆ ಟ್ರ್ಯಾಕ್ಟರ್​ ಚಲೋ” ಹೋರಾಟಕ್ಕೆ ಕರೆ ನೀಡಿದ್ದವು.

ಈ ಸಂಬಂಧ ಪತ್ರಿಕಾಗೋಷ್ಠಿಯನ್ನು ನಡೆಸಿದ್ದ ರೈತ ಮುಖಂಡರು ಟ್ರ್ಯಾಕ್ಟರ್​ ರ‍್ಯಾಲಿ ನಡೆಸಿಯೇ ಸಿದ್ದ ಎಂದು ಖಡಕ್ ಆಗಿ ತಿಳಿಸಿದ್ದರು. ಅಲ್ಲದೆ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸ್​ ಆಯುಕ್ತರಿಗೂ ಮನವಿ ನೀಡಿದ್ದರು. ಆದರೆ, ಒಂದೆಡೆ ಪೊಲೀಸರು ಶಾಂತಿಯುವ ರ‍್ಯಾಲಿಗೆ ಅನುಮತಿ ನೀಡಿದ್ದರೆ, ಮತ್ತೊಂದೆಡೆ ಸರ್ಕಾರ ಯಾವುದೇ ಕಾರಣಕ್ಕೂ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರ ಮತ್ತು ಪೊಲೀಸರ ನಡುವಿನ ಸಮನ್ವಯತೆ ಹಳ್ಳ ಹಿಡಿದಿರುವ ಪರಿಣಾಮ ಇಂದು ರಾಜ್ಯದ ಮೂಲೆ ಮೂಲೆಯಿಂದ ಬೆಂಗಳೂರಿನ ಕಡೆಗೆ ಟ್ರ್ಯಾಕ್ಟರ್​ ರ‍್ಯಾಲಿ ಹೊರಟಿದ್ದ ರೈತ ಹೋರಾಟಗಾರರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ಬೆಂಗಳೂರಿನ ವಿವಿಧ ಗಡಿ ಭಾಗಗಳಿಂದ ರೈತರು ನಗರವನ್ನು ಪ್ರವೇಶಿಸಲು ಮುಂದಾಗಿದ್ದಾರೆ. ಆದರೆ, ಇದೀಗ ಪೊಲೀಸರು ಅಲ್ಲೇ ಹೋರಾಟಗಾರರನ್ನು ತಡೆದು ನಿಲ್ಲಿಸಿದ್ದಾರೆ. ಆದರೆ, ರೈತ ಹೋರಾಟಗಾರರು ಮಾತ್ರ ರ‍್ಯಾಲಿ ನಡೆಸಿಯೇ ಸಿದ್ಧ ಎಂದು ಪಣ ತೊಟ್ಟಂತಿದೆ.

5 ಭಾಗಗಳಿಂದ ರಾಜಧಾನಿ ಪ್ರವೇಶಿಸಲಿದೆ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಕೃಷಿ ಕಾಯ್ದೆಯನ್ನು ವಿರೋಧಿಸಿರುವ ರೈತರು ಈಗಾಗಲೇ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ಗೆ ಮೆರವಣಿಗೆ ಹೊರಟಿದ್ದಾರೆ. ಆದರೆ, ಬೆಂಗಳೂರಿನ ನೆರೆಯ ಜಿಲ್ಲೆಗಳಾದ ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಿಂದ ರೈತರು ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಡದಿ, ನಲಮಂಗಲ, ನಂದಿಕ್ರಾಸ್, ಹೊಸಕೋಟೆ ಸೇರಿದಂತೆ ಬೆಂಗಳೂರಿನ ವಿವಿಧ ಗಡಿಗಳ ಮೂಲಕ ರಾಜಧಾನಿಯನ್ನು ಪ್ರವೇಶಿಸುವುದು ರೈತ ಹೋರಾಟಗಾರರ ಉದ್ದೇಶ. ಆದರೆ, ಸೋಮವಾರ ರ‍್ಯಾಲಿಗೆ ಅನುಮತಿ ನೀಡಿದ್ದ ಪೊಲೀಸರು ಇಂದು ರಾಜಧಾನಿಯ ಎಲ್ಲಾ ಗಡಿಗಳನ್ನೂ ಬಂದ್​ ಮಾಡಿದ್ದಾರೆ. ರೈತ ಹೋರಾಟಗಾರರನ್ನು ಟ್ರ್ಯಾಕ್ಟರ್​ ಸಮೇತ ಅಲ್ಲಲ್ಲೆ ತಡೆದು ನಿಲ್ಲಿಸುತ್ತಿದ್ದಾರೆ.

ಅಲ್ಲದೆ, ಹೊಸಕೋಟೆ ಟೋಲ್ ಮುಂಭಾಗದಲ್ಲಿ ಸಿಐಟಿಯು ಕಾರ್ಯಕರ್ತರು ಜಮಾಯಿಸಿದ್ದಾರೆ. ಆದರೆ, ಅವರನ್ನೂ ಸಹ ತಡೆದು ನಿಲ್ಲಿಸಲಾಗಿದೆ. ಪರಿಣಾಮ ಸಿಐಟಿಯು ಕಾರ್ಯಕರ್ತರು ಮತ್ತು ರೈತ ಹೋರಾಟಗಾರರು ರಾಷ್ಟ್ರ ಧ್ವಜ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲೂ ಸಹ ರೈತರ ಟ್ರಾಕ್ಟರ್ ಗಳಿಗೆ ಪೊಲೀಸರು ತಡೆದಿದ್ದಾರೆ.

ಈ ನಡುವೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ರೈತ ಹೋರಾಟಗಾರರು ಮಾದಾವರದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಅಲ್ಲದೆ, ಮಾದಾವರದಲ್ಲಿ ಭಾರತದ ಧ್ವಜಗಳನ್ನು ಹಿಡಿದು ಪರೇಡ್ ನಡೆಸುವ ಮೂಲಕ ಎಲ್ಲಾ ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್​ ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. ಈ ರ‍್ಯಾಲಿಯಲ್ಲಿ ರೈತರ ಜೊತೆಗೆ ಕಾರ್ಮಿಕರು, ದೆಲಿತರು, ಮಹಿಳೆಯರೂ ಸಹ ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕರು ತಂಡೋಪ ತಂಡವಾಗಿ ನಂದಿಕ್ರಾಸ್ ಬಳಿ ಜಮಾವಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಮೇಲೆ ಪೊಲೀಸರ ದಾಳಿ ಆರಂಭ: ಲಾಠೀಚಾರ್ಚ್, ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...