Homeಮುಖಪುಟಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

ಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಸಿಂಗು ಗಡಿಯಲ್ಲಿ ಭಾರತದ ರೈತರು ಅಹಿಂಸಾತ್ಮಕ ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೆ ಗಣರಾಜ್ಯ ದಿನವಾದ ಇಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಯನ್ನು ಆಯೋಜಿಸಲಾಗಿದೆ. ದೆಹಲಿಯ ಈ ರೈತ ಹೋರಾಟವನ್ನು ಬೆಂಬಲಿಸಿ ಕರ್ನಾಟಕದಲ್ಲೂ ವಿವಿಧ ರೈತ ಸಂಘಟನೆಗಳು “ಬೆಂಗಳೂರಿಗೆ ಟ್ರ್ಯಾಕ್ಟರ್​ ಚಲೋ” ಹೋರಾಟಕ್ಕೆ ಕರೆ ನೀಡಿದ್ದವು.

ಈ ಸಂಬಂಧ ಪತ್ರಿಕಾಗೋಷ್ಠಿಯನ್ನು ನಡೆಸಿದ್ದ ರೈತ ಮುಖಂಡರು ಟ್ರ್ಯಾಕ್ಟರ್​ ರ‍್ಯಾಲಿ ನಡೆಸಿಯೇ ಸಿದ್ದ ಎಂದು ಖಡಕ್ ಆಗಿ ತಿಳಿಸಿದ್ದರು. ಅಲ್ಲದೆ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸ್​ ಆಯುಕ್ತರಿಗೂ ಮನವಿ ನೀಡಿದ್ದರು. ಆದರೆ, ಒಂದೆಡೆ ಪೊಲೀಸರು ಶಾಂತಿಯುವ ರ‍್ಯಾಲಿಗೆ ಅನುಮತಿ ನೀಡಿದ್ದರೆ, ಮತ್ತೊಂದೆಡೆ ಸರ್ಕಾರ ಯಾವುದೇ ಕಾರಣಕ್ಕೂ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರ ಮತ್ತು ಪೊಲೀಸರ ನಡುವಿನ ಸಮನ್ವಯತೆ ಹಳ್ಳ ಹಿಡಿದಿರುವ ಪರಿಣಾಮ ಇಂದು ರಾಜ್ಯದ ಮೂಲೆ ಮೂಲೆಯಿಂದ ಬೆಂಗಳೂರಿನ ಕಡೆಗೆ ಟ್ರ್ಯಾಕ್ಟರ್​ ರ‍್ಯಾಲಿ ಹೊರಟಿದ್ದ ರೈತ ಹೋರಾಟಗಾರರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ಬೆಂಗಳೂರಿನ ವಿವಿಧ ಗಡಿ ಭಾಗಗಳಿಂದ ರೈತರು ನಗರವನ್ನು ಪ್ರವೇಶಿಸಲು ಮುಂದಾಗಿದ್ದಾರೆ. ಆದರೆ, ಇದೀಗ ಪೊಲೀಸರು ಅಲ್ಲೇ ಹೋರಾಟಗಾರರನ್ನು ತಡೆದು ನಿಲ್ಲಿಸಿದ್ದಾರೆ. ಆದರೆ, ರೈತ ಹೋರಾಟಗಾರರು ಮಾತ್ರ ರ‍್ಯಾಲಿ ನಡೆಸಿಯೇ ಸಿದ್ಧ ಎಂದು ಪಣ ತೊಟ್ಟಂತಿದೆ.

5 ಭಾಗಗಳಿಂದ ರಾಜಧಾನಿ ಪ್ರವೇಶಿಸಲಿದೆ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಕೃಷಿ ಕಾಯ್ದೆಯನ್ನು ವಿರೋಧಿಸಿರುವ ರೈತರು ಈಗಾಗಲೇ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ಗೆ ಮೆರವಣಿಗೆ ಹೊರಟಿದ್ದಾರೆ. ಆದರೆ, ಬೆಂಗಳೂರಿನ ನೆರೆಯ ಜಿಲ್ಲೆಗಳಾದ ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಿಂದ ರೈತರು ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಡದಿ, ನಲಮಂಗಲ, ನಂದಿಕ್ರಾಸ್, ಹೊಸಕೋಟೆ ಸೇರಿದಂತೆ ಬೆಂಗಳೂರಿನ ವಿವಿಧ ಗಡಿಗಳ ಮೂಲಕ ರಾಜಧಾನಿಯನ್ನು ಪ್ರವೇಶಿಸುವುದು ರೈತ ಹೋರಾಟಗಾರರ ಉದ್ದೇಶ. ಆದರೆ, ಸೋಮವಾರ ರ‍್ಯಾಲಿಗೆ ಅನುಮತಿ ನೀಡಿದ್ದ ಪೊಲೀಸರು ಇಂದು ರಾಜಧಾನಿಯ ಎಲ್ಲಾ ಗಡಿಗಳನ್ನೂ ಬಂದ್​ ಮಾಡಿದ್ದಾರೆ. ರೈತ ಹೋರಾಟಗಾರರನ್ನು ಟ್ರ್ಯಾಕ್ಟರ್​ ಸಮೇತ ಅಲ್ಲಲ್ಲೆ ತಡೆದು ನಿಲ್ಲಿಸುತ್ತಿದ್ದಾರೆ.

ಅಲ್ಲದೆ, ಹೊಸಕೋಟೆ ಟೋಲ್ ಮುಂಭಾಗದಲ್ಲಿ ಸಿಐಟಿಯು ಕಾರ್ಯಕರ್ತರು ಜಮಾಯಿಸಿದ್ದಾರೆ. ಆದರೆ, ಅವರನ್ನೂ ಸಹ ತಡೆದು ನಿಲ್ಲಿಸಲಾಗಿದೆ. ಪರಿಣಾಮ ಸಿಐಟಿಯು ಕಾರ್ಯಕರ್ತರು ಮತ್ತು ರೈತ ಹೋರಾಟಗಾರರು ರಾಷ್ಟ್ರ ಧ್ವಜ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲೂ ಸಹ ರೈತರ ಟ್ರಾಕ್ಟರ್ ಗಳಿಗೆ ಪೊಲೀಸರು ತಡೆದಿದ್ದಾರೆ.

ಈ ನಡುವೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ರೈತ ಹೋರಾಟಗಾರರು ಮಾದಾವರದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಅಲ್ಲದೆ, ಮಾದಾವರದಲ್ಲಿ ಭಾರತದ ಧ್ವಜಗಳನ್ನು ಹಿಡಿದು ಪರೇಡ್ ನಡೆಸುವ ಮೂಲಕ ಎಲ್ಲಾ ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್​ ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. ಈ ರ‍್ಯಾಲಿಯಲ್ಲಿ ರೈತರ ಜೊತೆಗೆ ಕಾರ್ಮಿಕರು, ದೆಲಿತರು, ಮಹಿಳೆಯರೂ ಸಹ ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕರು ತಂಡೋಪ ತಂಡವಾಗಿ ನಂದಿಕ್ರಾಸ್ ಬಳಿ ಜಮಾವಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಮೇಲೆ ಪೊಲೀಸರ ದಾಳಿ ಆರಂಭ: ಲಾಠೀಚಾರ್ಚ್, ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...