Homeಮುಖಪುಟಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

ಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಸಿಂಗು ಗಡಿಯಲ್ಲಿ ಭಾರತದ ರೈತರು ಅಹಿಂಸಾತ್ಮಕ ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೆ ಗಣರಾಜ್ಯ ದಿನವಾದ ಇಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಯನ್ನು ಆಯೋಜಿಸಲಾಗಿದೆ. ದೆಹಲಿಯ ಈ ರೈತ ಹೋರಾಟವನ್ನು ಬೆಂಬಲಿಸಿ ಕರ್ನಾಟಕದಲ್ಲೂ ವಿವಿಧ ರೈತ ಸಂಘಟನೆಗಳು “ಬೆಂಗಳೂರಿಗೆ ಟ್ರ್ಯಾಕ್ಟರ್​ ಚಲೋ” ಹೋರಾಟಕ್ಕೆ ಕರೆ ನೀಡಿದ್ದವು.

ಈ ಸಂಬಂಧ ಪತ್ರಿಕಾಗೋಷ್ಠಿಯನ್ನು ನಡೆಸಿದ್ದ ರೈತ ಮುಖಂಡರು ಟ್ರ್ಯಾಕ್ಟರ್​ ರ‍್ಯಾಲಿ ನಡೆಸಿಯೇ ಸಿದ್ದ ಎಂದು ಖಡಕ್ ಆಗಿ ತಿಳಿಸಿದ್ದರು. ಅಲ್ಲದೆ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸ್​ ಆಯುಕ್ತರಿಗೂ ಮನವಿ ನೀಡಿದ್ದರು. ಆದರೆ, ಒಂದೆಡೆ ಪೊಲೀಸರು ಶಾಂತಿಯುವ ರ‍್ಯಾಲಿಗೆ ಅನುಮತಿ ನೀಡಿದ್ದರೆ, ಮತ್ತೊಂದೆಡೆ ಸರ್ಕಾರ ಯಾವುದೇ ಕಾರಣಕ್ಕೂ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರ ಮತ್ತು ಪೊಲೀಸರ ನಡುವಿನ ಸಮನ್ವಯತೆ ಹಳ್ಳ ಹಿಡಿದಿರುವ ಪರಿಣಾಮ ಇಂದು ರಾಜ್ಯದ ಮೂಲೆ ಮೂಲೆಯಿಂದ ಬೆಂಗಳೂರಿನ ಕಡೆಗೆ ಟ್ರ್ಯಾಕ್ಟರ್​ ರ‍್ಯಾಲಿ ಹೊರಟಿದ್ದ ರೈತ ಹೋರಾಟಗಾರರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ಬೆಂಗಳೂರಿನ ವಿವಿಧ ಗಡಿ ಭಾಗಗಳಿಂದ ರೈತರು ನಗರವನ್ನು ಪ್ರವೇಶಿಸಲು ಮುಂದಾಗಿದ್ದಾರೆ. ಆದರೆ, ಇದೀಗ ಪೊಲೀಸರು ಅಲ್ಲೇ ಹೋರಾಟಗಾರರನ್ನು ತಡೆದು ನಿಲ್ಲಿಸಿದ್ದಾರೆ. ಆದರೆ, ರೈತ ಹೋರಾಟಗಾರರು ಮಾತ್ರ ರ‍್ಯಾಲಿ ನಡೆಸಿಯೇ ಸಿದ್ಧ ಎಂದು ಪಣ ತೊಟ್ಟಂತಿದೆ.

5 ಭಾಗಗಳಿಂದ ರಾಜಧಾನಿ ಪ್ರವೇಶಿಸಲಿದೆ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಕೃಷಿ ಕಾಯ್ದೆಯನ್ನು ವಿರೋಧಿಸಿರುವ ರೈತರು ಈಗಾಗಲೇ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ಗೆ ಮೆರವಣಿಗೆ ಹೊರಟಿದ್ದಾರೆ. ಆದರೆ, ಬೆಂಗಳೂರಿನ ನೆರೆಯ ಜಿಲ್ಲೆಗಳಾದ ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಿಂದ ರೈತರು ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಡದಿ, ನಲಮಂಗಲ, ನಂದಿಕ್ರಾಸ್, ಹೊಸಕೋಟೆ ಸೇರಿದಂತೆ ಬೆಂಗಳೂರಿನ ವಿವಿಧ ಗಡಿಗಳ ಮೂಲಕ ರಾಜಧಾನಿಯನ್ನು ಪ್ರವೇಶಿಸುವುದು ರೈತ ಹೋರಾಟಗಾರರ ಉದ್ದೇಶ. ಆದರೆ, ಸೋಮವಾರ ರ‍್ಯಾಲಿಗೆ ಅನುಮತಿ ನೀಡಿದ್ದ ಪೊಲೀಸರು ಇಂದು ರಾಜಧಾನಿಯ ಎಲ್ಲಾ ಗಡಿಗಳನ್ನೂ ಬಂದ್​ ಮಾಡಿದ್ದಾರೆ. ರೈತ ಹೋರಾಟಗಾರರನ್ನು ಟ್ರ್ಯಾಕ್ಟರ್​ ಸಮೇತ ಅಲ್ಲಲ್ಲೆ ತಡೆದು ನಿಲ್ಲಿಸುತ್ತಿದ್ದಾರೆ.

ಅಲ್ಲದೆ, ಹೊಸಕೋಟೆ ಟೋಲ್ ಮುಂಭಾಗದಲ್ಲಿ ಸಿಐಟಿಯು ಕಾರ್ಯಕರ್ತರು ಜಮಾಯಿಸಿದ್ದಾರೆ. ಆದರೆ, ಅವರನ್ನೂ ಸಹ ತಡೆದು ನಿಲ್ಲಿಸಲಾಗಿದೆ. ಪರಿಣಾಮ ಸಿಐಟಿಯು ಕಾರ್ಯಕರ್ತರು ಮತ್ತು ರೈತ ಹೋರಾಟಗಾರರು ರಾಷ್ಟ್ರ ಧ್ವಜ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲೂ ಸಹ ರೈತರ ಟ್ರಾಕ್ಟರ್ ಗಳಿಗೆ ಪೊಲೀಸರು ತಡೆದಿದ್ದಾರೆ.

ಈ ನಡುವೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ರೈತ ಹೋರಾಟಗಾರರು ಮಾದಾವರದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಅಲ್ಲದೆ, ಮಾದಾವರದಲ್ಲಿ ಭಾರತದ ಧ್ವಜಗಳನ್ನು ಹಿಡಿದು ಪರೇಡ್ ನಡೆಸುವ ಮೂಲಕ ಎಲ್ಲಾ ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್​ ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. ಈ ರ‍್ಯಾಲಿಯಲ್ಲಿ ರೈತರ ಜೊತೆಗೆ ಕಾರ್ಮಿಕರು, ದೆಲಿತರು, ಮಹಿಳೆಯರೂ ಸಹ ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕರು ತಂಡೋಪ ತಂಡವಾಗಿ ನಂದಿಕ್ರಾಸ್ ಬಳಿ ಜಮಾವಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಮೇಲೆ ಪೊಲೀಸರ ದಾಳಿ ಆರಂಭ: ಲಾಠೀಚಾರ್ಚ್, ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...