Homeಮುಖಪುಟಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

ಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಸಿಂಗು ಗಡಿಯಲ್ಲಿ ಭಾರತದ ರೈತರು ಅಹಿಂಸಾತ್ಮಕ ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೆ ಗಣರಾಜ್ಯ ದಿನವಾದ ಇಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಯನ್ನು ಆಯೋಜಿಸಲಾಗಿದೆ. ದೆಹಲಿಯ ಈ ರೈತ ಹೋರಾಟವನ್ನು ಬೆಂಬಲಿಸಿ ಕರ್ನಾಟಕದಲ್ಲೂ ವಿವಿಧ ರೈತ ಸಂಘಟನೆಗಳು “ಬೆಂಗಳೂರಿಗೆ ಟ್ರ್ಯಾಕ್ಟರ್​ ಚಲೋ” ಹೋರಾಟಕ್ಕೆ ಕರೆ ನೀಡಿದ್ದವು.

ಈ ಸಂಬಂಧ ಪತ್ರಿಕಾಗೋಷ್ಠಿಯನ್ನು ನಡೆಸಿದ್ದ ರೈತ ಮುಖಂಡರು ಟ್ರ್ಯಾಕ್ಟರ್​ ರ‍್ಯಾಲಿ ನಡೆಸಿಯೇ ಸಿದ್ದ ಎಂದು ಖಡಕ್ ಆಗಿ ತಿಳಿಸಿದ್ದರು. ಅಲ್ಲದೆ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸ್​ ಆಯುಕ್ತರಿಗೂ ಮನವಿ ನೀಡಿದ್ದರು. ಆದರೆ, ಒಂದೆಡೆ ಪೊಲೀಸರು ಶಾಂತಿಯುವ ರ‍್ಯಾಲಿಗೆ ಅನುಮತಿ ನೀಡಿದ್ದರೆ, ಮತ್ತೊಂದೆಡೆ ಸರ್ಕಾರ ಯಾವುದೇ ಕಾರಣಕ್ಕೂ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರ ಮತ್ತು ಪೊಲೀಸರ ನಡುವಿನ ಸಮನ್ವಯತೆ ಹಳ್ಳ ಹಿಡಿದಿರುವ ಪರಿಣಾಮ ಇಂದು ರಾಜ್ಯದ ಮೂಲೆ ಮೂಲೆಯಿಂದ ಬೆಂಗಳೂರಿನ ಕಡೆಗೆ ಟ್ರ್ಯಾಕ್ಟರ್​ ರ‍್ಯಾಲಿ ಹೊರಟಿದ್ದ ರೈತ ಹೋರಾಟಗಾರರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ಬೆಂಗಳೂರಿನ ವಿವಿಧ ಗಡಿ ಭಾಗಗಳಿಂದ ರೈತರು ನಗರವನ್ನು ಪ್ರವೇಶಿಸಲು ಮುಂದಾಗಿದ್ದಾರೆ. ಆದರೆ, ಇದೀಗ ಪೊಲೀಸರು ಅಲ್ಲೇ ಹೋರಾಟಗಾರರನ್ನು ತಡೆದು ನಿಲ್ಲಿಸಿದ್ದಾರೆ. ಆದರೆ, ರೈತ ಹೋರಾಟಗಾರರು ಮಾತ್ರ ರ‍್ಯಾಲಿ ನಡೆಸಿಯೇ ಸಿದ್ಧ ಎಂದು ಪಣ ತೊಟ್ಟಂತಿದೆ.

5 ಭಾಗಗಳಿಂದ ರಾಜಧಾನಿ ಪ್ರವೇಶಿಸಲಿದೆ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಕೃಷಿ ಕಾಯ್ದೆಯನ್ನು ವಿರೋಧಿಸಿರುವ ರೈತರು ಈಗಾಗಲೇ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ಗೆ ಮೆರವಣಿಗೆ ಹೊರಟಿದ್ದಾರೆ. ಆದರೆ, ಬೆಂಗಳೂರಿನ ನೆರೆಯ ಜಿಲ್ಲೆಗಳಾದ ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಿಂದ ರೈತರು ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಡದಿ, ನಲಮಂಗಲ, ನಂದಿಕ್ರಾಸ್, ಹೊಸಕೋಟೆ ಸೇರಿದಂತೆ ಬೆಂಗಳೂರಿನ ವಿವಿಧ ಗಡಿಗಳ ಮೂಲಕ ರಾಜಧಾನಿಯನ್ನು ಪ್ರವೇಶಿಸುವುದು ರೈತ ಹೋರಾಟಗಾರರ ಉದ್ದೇಶ. ಆದರೆ, ಸೋಮವಾರ ರ‍್ಯಾಲಿಗೆ ಅನುಮತಿ ನೀಡಿದ್ದ ಪೊಲೀಸರು ಇಂದು ರಾಜಧಾನಿಯ ಎಲ್ಲಾ ಗಡಿಗಳನ್ನೂ ಬಂದ್​ ಮಾಡಿದ್ದಾರೆ. ರೈತ ಹೋರಾಟಗಾರರನ್ನು ಟ್ರ್ಯಾಕ್ಟರ್​ ಸಮೇತ ಅಲ್ಲಲ್ಲೆ ತಡೆದು ನಿಲ್ಲಿಸುತ್ತಿದ್ದಾರೆ.

ಅಲ್ಲದೆ, ಹೊಸಕೋಟೆ ಟೋಲ್ ಮುಂಭಾಗದಲ್ಲಿ ಸಿಐಟಿಯು ಕಾರ್ಯಕರ್ತರು ಜಮಾಯಿಸಿದ್ದಾರೆ. ಆದರೆ, ಅವರನ್ನೂ ಸಹ ತಡೆದು ನಿಲ್ಲಿಸಲಾಗಿದೆ. ಪರಿಣಾಮ ಸಿಐಟಿಯು ಕಾರ್ಯಕರ್ತರು ಮತ್ತು ರೈತ ಹೋರಾಟಗಾರರು ರಾಷ್ಟ್ರ ಧ್ವಜ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲೂ ಸಹ ರೈತರ ಟ್ರಾಕ್ಟರ್ ಗಳಿಗೆ ಪೊಲೀಸರು ತಡೆದಿದ್ದಾರೆ.

ಈ ನಡುವೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ರೈತ ಹೋರಾಟಗಾರರು ಮಾದಾವರದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಅಲ್ಲದೆ, ಮಾದಾವರದಲ್ಲಿ ಭಾರತದ ಧ್ವಜಗಳನ್ನು ಹಿಡಿದು ಪರೇಡ್ ನಡೆಸುವ ಮೂಲಕ ಎಲ್ಲಾ ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್​ ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. ಈ ರ‍್ಯಾಲಿಯಲ್ಲಿ ರೈತರ ಜೊತೆಗೆ ಕಾರ್ಮಿಕರು, ದೆಲಿತರು, ಮಹಿಳೆಯರೂ ಸಹ ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕರು ತಂಡೋಪ ತಂಡವಾಗಿ ನಂದಿಕ್ರಾಸ್ ಬಳಿ ಜಮಾವಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಮೇಲೆ ಪೊಲೀಸರ ದಾಳಿ ಆರಂಭ: ಲಾಠೀಚಾರ್ಚ್, ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...