Homeಮುಖಪುಟಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

ಬೆಂಗಳೂರು ಟ್ರ್ಯಾಕ್ಟರ್​ ಪರೇಡ್​ಗೆ ಪೊಲೀಸ್​ ಅಡ್ಡಿ; ಗಡಿಗಳಲ್ಲೇ ದಿಟ್ಟ ಹೋರಾಟ ಆರಂಭಿಸಿದ ರೈತರು!

- Advertisement -
- Advertisement -

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಸಿಂಗು ಗಡಿಯಲ್ಲಿ ಭಾರತದ ರೈತರು ಅಹಿಂಸಾತ್ಮಕ ಹೋರಾಟಕ್ಕೆ ಮುಂದಾಗಿದ್ದಾರೆ. ಅಲ್ಲದೆ ಗಣರಾಜ್ಯ ದಿನವಾದ ಇಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಯನ್ನು ಆಯೋಜಿಸಲಾಗಿದೆ. ದೆಹಲಿಯ ಈ ರೈತ ಹೋರಾಟವನ್ನು ಬೆಂಬಲಿಸಿ ಕರ್ನಾಟಕದಲ್ಲೂ ವಿವಿಧ ರೈತ ಸಂಘಟನೆಗಳು “ಬೆಂಗಳೂರಿಗೆ ಟ್ರ್ಯಾಕ್ಟರ್​ ಚಲೋ” ಹೋರಾಟಕ್ಕೆ ಕರೆ ನೀಡಿದ್ದವು.

ಈ ಸಂಬಂಧ ಪತ್ರಿಕಾಗೋಷ್ಠಿಯನ್ನು ನಡೆಸಿದ್ದ ರೈತ ಮುಖಂಡರು ಟ್ರ್ಯಾಕ್ಟರ್​ ರ‍್ಯಾಲಿ ನಡೆಸಿಯೇ ಸಿದ್ದ ಎಂದು ಖಡಕ್ ಆಗಿ ತಿಳಿಸಿದ್ದರು. ಅಲ್ಲದೆ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸ್​ ಆಯುಕ್ತರಿಗೂ ಮನವಿ ನೀಡಿದ್ದರು. ಆದರೆ, ಒಂದೆಡೆ ಪೊಲೀಸರು ಶಾಂತಿಯುವ ರ‍್ಯಾಲಿಗೆ ಅನುಮತಿ ನೀಡಿದ್ದರೆ, ಮತ್ತೊಂದೆಡೆ ಸರ್ಕಾರ ಯಾವುದೇ ಕಾರಣಕ್ಕೂ ಟ್ರ್ಯಾಕ್ಟರ್​ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರ ಮತ್ತು ಪೊಲೀಸರ ನಡುವಿನ ಸಮನ್ವಯತೆ ಹಳ್ಳ ಹಿಡಿದಿರುವ ಪರಿಣಾಮ ಇಂದು ರಾಜ್ಯದ ಮೂಲೆ ಮೂಲೆಯಿಂದ ಬೆಂಗಳೂರಿನ ಕಡೆಗೆ ಟ್ರ್ಯಾಕ್ಟರ್​ ರ‍್ಯಾಲಿ ಹೊರಟಿದ್ದ ರೈತ ಹೋರಾಟಗಾರರಿಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ಬೆಂಗಳೂರಿನ ವಿವಿಧ ಗಡಿ ಭಾಗಗಳಿಂದ ರೈತರು ನಗರವನ್ನು ಪ್ರವೇಶಿಸಲು ಮುಂದಾಗಿದ್ದಾರೆ. ಆದರೆ, ಇದೀಗ ಪೊಲೀಸರು ಅಲ್ಲೇ ಹೋರಾಟಗಾರರನ್ನು ತಡೆದು ನಿಲ್ಲಿಸಿದ್ದಾರೆ. ಆದರೆ, ರೈತ ಹೋರಾಟಗಾರರು ಮಾತ್ರ ರ‍್ಯಾಲಿ ನಡೆಸಿಯೇ ಸಿದ್ಧ ಎಂದು ಪಣ ತೊಟ್ಟಂತಿದೆ.

5 ಭಾಗಗಳಿಂದ ರಾಜಧಾನಿ ಪ್ರವೇಶಿಸಲಿದೆ ರೈತರ ಟ್ರ್ಯಾಕ್ಟರ್​ ರ‍್ಯಾಲಿ

ಕೃಷಿ ಕಾಯ್ದೆಯನ್ನು ವಿರೋಧಿಸಿರುವ ರೈತರು ಈಗಾಗಲೇ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​ಗೆ ಮೆರವಣಿಗೆ ಹೊರಟಿದ್ದಾರೆ. ಆದರೆ, ಬೆಂಗಳೂರಿನ ನೆರೆಯ ಜಿಲ್ಲೆಗಳಾದ ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಜಿಲ್ಲೆಗಳಿಂದ ರೈತರು ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಡದಿ, ನಲಮಂಗಲ, ನಂದಿಕ್ರಾಸ್, ಹೊಸಕೋಟೆ ಸೇರಿದಂತೆ ಬೆಂಗಳೂರಿನ ವಿವಿಧ ಗಡಿಗಳ ಮೂಲಕ ರಾಜಧಾನಿಯನ್ನು ಪ್ರವೇಶಿಸುವುದು ರೈತ ಹೋರಾಟಗಾರರ ಉದ್ದೇಶ. ಆದರೆ, ಸೋಮವಾರ ರ‍್ಯಾಲಿಗೆ ಅನುಮತಿ ನೀಡಿದ್ದ ಪೊಲೀಸರು ಇಂದು ರಾಜಧಾನಿಯ ಎಲ್ಲಾ ಗಡಿಗಳನ್ನೂ ಬಂದ್​ ಮಾಡಿದ್ದಾರೆ. ರೈತ ಹೋರಾಟಗಾರರನ್ನು ಟ್ರ್ಯಾಕ್ಟರ್​ ಸಮೇತ ಅಲ್ಲಲ್ಲೆ ತಡೆದು ನಿಲ್ಲಿಸುತ್ತಿದ್ದಾರೆ.

ಅಲ್ಲದೆ, ಹೊಸಕೋಟೆ ಟೋಲ್ ಮುಂಭಾಗದಲ್ಲಿ ಸಿಐಟಿಯು ಕಾರ್ಯಕರ್ತರು ಜಮಾಯಿಸಿದ್ದಾರೆ. ಆದರೆ, ಅವರನ್ನೂ ಸಹ ತಡೆದು ನಿಲ್ಲಿಸಲಾಗಿದೆ. ಪರಿಣಾಮ ಸಿಐಟಿಯು ಕಾರ್ಯಕರ್ತರು ಮತ್ತು ರೈತ ಹೋರಾಟಗಾರರು ರಾಷ್ಟ್ರ ಧ್ವಜ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲೂ ಸಹ ರೈತರ ಟ್ರಾಕ್ಟರ್ ಗಳಿಗೆ ಪೊಲೀಸರು ತಡೆದಿದ್ದಾರೆ.

ಈ ನಡುವೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಮತ್ತು ರೈತ ಹೋರಾಟಗಾರರು ಮಾದಾವರದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಅಲ್ಲದೆ, ಮಾದಾವರದಲ್ಲಿ ಭಾರತದ ಧ್ವಜಗಳನ್ನು ಹಿಡಿದು ಪರೇಡ್ ನಡೆಸುವ ಮೂಲಕ ಎಲ್ಲಾ ರೈತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್​ ಟ್ರ್ಯಾಕ್ಟರ್​ ಸಮೇತ ಬೆಂಗಳೂರಿಗೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. ಈ ರ‍್ಯಾಲಿಯಲ್ಲಿ ರೈತರ ಜೊತೆಗೆ ಕಾರ್ಮಿಕರು, ದೆಲಿತರು, ಮಹಿಳೆಯರೂ ಸಹ ಭಾಗವಹಿಸಲಿದ್ದಾರೆ. ಈಗಾಗಲೇ ಅನೇಕರು ತಂಡೋಪ ತಂಡವಾಗಿ ನಂದಿಕ್ರಾಸ್ ಬಳಿ ಜಮಾವಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಮೇಲೆ ಪೊಲೀಸರ ದಾಳಿ ಆರಂಭ: ಲಾಠೀಚಾರ್ಚ್, ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...