Homeಚಳವಳಿದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ. ಇದಕ್ಕೆ ಆಪ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿದ್ದ ದೆಹಲಿ ಚಲೋ ಹೋರಾಟವನ್ನು ದಮನ ಮಾಡಲು ಸರ್ಕಾರ ಮುಂದಾಗಿದೆ. ನಿನ್ನೆಯೆಲ್ಲ ರೈತರ ದೆಹಲಿ ಪ್ರವೇಶಿಸದಂತೆ ತಡೆದ ದೆಹಲಿ ಪೊಲೀಸರು ಇಂದು ಮುಂಜಾನೆ ಸಹ ಪ್ರತಿಭಟನಾನಿರತ ರೈತರ ಮೇಲೆ ಲಾಠೀ ಚಾರ್ಜ್ ನಡೆಸಿ, ಜಲಫಿರಂಗಿ ಮತ್ತು ಅಶ್ರವಾಯು ಸಿಡಿಸಿದ್ದಾರೆ. ಹರಯಾಣದಿಂದ ಟ್ರಾಕ್ಟರ್‌ಗಳಲ್ಲಿ ಅಗತ್ಯವಸ್ತುಗಳನ್ನು ತುಂಬಿಕೊಂಡು ದೆಹಲಿಯತ್ತ ಹೊರಟಿದ್ದ ಸಾವಿರಾರು ಸಂಖ್ಯೆಯಲ್ಲಿದ್ದ ರೈತರ ಗುಂಪನ್ನು ದೆಹಲಿ ಗಡಿಯಲ್ಲಿ ತಡೆದಿರುವ ಪೊಲೀಸರು ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್, ಮುಳ್ಳುತಂತಿಗಳನ್ನು ಹಾಕಿ ತಡೆ ಒಡ್ಡಿದ್ದಾರೆ.

ಹರಿಯಾಣ ಪೊಲೀಸರು ಕೊರೊನಾ ಸಾಂಕ್ರಾಮಿಕ ನಿಯಮಗಳನ್ನು ಮುಂದಿಟ್ಟು ರೈತರು ಗುಂಪುಗೂಡದಂತೆ ತಡೆಯುತ್ತಿದ್ದಾರೆ. ಆದರೆ ರೈತರು ಯಾರಿಗೂ ಇಲ್ಲದ ನಿಯಮಗಳು ಕೇವಲ ರೈತರಿಗೇಕೆ? ನಮ್ಮನ್ನು ತಡೆಯಲು ಸಾವಿರ ಸಂಖ್ಯೆಯಲ್ಲಿ ನೆರೆದಿರುವ ಪೊಲೀಸರಿಗಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಿಂದಲೇ ಪ್ರವಾಹೋಪಾದಿಯಲ್ಲಿ ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ ಎಂದು ಎನ್‌ಟಿಟಿವಿ ವರದಿ ಮಾಡಿದೆ. ಆದರೆ ಆಪ್ ಶಾಸಕ ರಾಘವ್ ಚಾಡ್ಡಾ ಈ ಕ್ರಮಕ್ಕೆ ಕಿಡಿಕಾರಿದ್ದು ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ಇದಕ್ಕೆ ಅನುಮತಿ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ರೈತರು ಕ್ರಿಮಿನಲ್‌ಗಳು ಅಲ್ಲ, ಭಯೋತ್ಪಾದಕರೂ ಅಲ್ಲ. ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಎಲ್ಲರ ಸಾಂವಿಧಾನಿಕ ಹಕ್ಕು ಎಂದು ಟ್ವೀಟ್‌ ಮಾಡಿದ್ದಾರೆ.

ಅದೇ ರೀತಿಯಲ್ಲಿ ಆಪ್ ಶಾಸಕ ಸೌರಭ್ ಭಾರದ್ವಾಜ್ ಟ್ವೀಟ್‌ ಮಾಡಿ ಇನ್ನು ಮುಂದೆ ದೆಹಲಿ ಪೊಲೀಸರು ತಮ್ಮನ್ನು ‘ದಿಲ್ ವಾಲಿ ಪೊಲೀಸ್’ ಎಂದು ಕರೆದುಕೊಳ್ಳಬಾರದು. ಅವರ ರೈತರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅತಿಶಿ ಟ್ವೀಟ್‌ ಮಾಡಿ “ತಮ್ಮ ಹಕ್ಕುಗಳಿಗಾಗಿ ದನಿಯೆತ್ತಿದ್ದ ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೊಲೀಸರು ನಡುಗುವ ಚಳಿಯಲ್ಲಿಯೂ ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ದೇಶ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.

ನೂರಾರು ಕಡೆಗಳಿಂದ ದೆಹಲಿ ಪ್ರವೇಶಿಸಲು ರೈತರು ಶತಪ್ರಯತ್ನ ಮುಂದುವರೆಸಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳಿಂದ ಹತ್ತಾರು ಸಾವಿರ ಜನರು ಇಂದು ರಾಮಲೀಲಾ ಮೈದಾನದಲ್ಲಿ ಒಟ್ಟುಗೂಡು ಕೃಷಿ ಮಸೂದೆಗಳಿಗೆ ವಿರೋಧ ದಾಖಲಿಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಎಲ್ಲಿಂದಲೂ ರೈತರು ಒಳಬರಲು ಬಿಡುತ್ತಿಲ್ಲ. ನಿನ್ನೆ ನಡೆದ ರೈತರ ಪ್ರತಿಭಟನೆಗಳಿಂದಾಗಿ ದೆಹಲಿ ಪೂರ್ತಿ ಟ್ರಾಫಿಕ್ ಜಾಮ್ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಟ್ರಾಫಿಕ್‌ಗಳನ್ನು ಬದಲಿಸಲಾಗಿದೆ.

ಒಟ್ಟಿನಲ್ಲಿ ದೆಹಲಿ ಸುತ್ತಾ ಪೊಲೀಸ್ ಸರ್ಪಗಾವಲಿಟ್ಟು ರೈತರನ್ನು ಒಳಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಆದರೆ ರೈತರ ತಾವು ಇದ್ದಲ್ಲಿಯೇ ಧರಣಿ ಮುಂದುವರೆಸುವುದಾಗಿ, ಅದಕ್ಕೆ ಬೇಕಾದ ಆಹಾರ ಸಾಮಾಗ್ರಿಗಳು ಇವೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...