Homeಚಳವಳಿದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ. ಇದಕ್ಕೆ ಆಪ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿದ್ದ ದೆಹಲಿ ಚಲೋ ಹೋರಾಟವನ್ನು ದಮನ ಮಾಡಲು ಸರ್ಕಾರ ಮುಂದಾಗಿದೆ. ನಿನ್ನೆಯೆಲ್ಲ ರೈತರ ದೆಹಲಿ ಪ್ರವೇಶಿಸದಂತೆ ತಡೆದ ದೆಹಲಿ ಪೊಲೀಸರು ಇಂದು ಮುಂಜಾನೆ ಸಹ ಪ್ರತಿಭಟನಾನಿರತ ರೈತರ ಮೇಲೆ ಲಾಠೀ ಚಾರ್ಜ್ ನಡೆಸಿ, ಜಲಫಿರಂಗಿ ಮತ್ತು ಅಶ್ರವಾಯು ಸಿಡಿಸಿದ್ದಾರೆ. ಹರಯಾಣದಿಂದ ಟ್ರಾಕ್ಟರ್‌ಗಳಲ್ಲಿ ಅಗತ್ಯವಸ್ತುಗಳನ್ನು ತುಂಬಿಕೊಂಡು ದೆಹಲಿಯತ್ತ ಹೊರಟಿದ್ದ ಸಾವಿರಾರು ಸಂಖ್ಯೆಯಲ್ಲಿದ್ದ ರೈತರ ಗುಂಪನ್ನು ದೆಹಲಿ ಗಡಿಯಲ್ಲಿ ತಡೆದಿರುವ ಪೊಲೀಸರು ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್, ಮುಳ್ಳುತಂತಿಗಳನ್ನು ಹಾಕಿ ತಡೆ ಒಡ್ಡಿದ್ದಾರೆ.

ಹರಿಯಾಣ ಪೊಲೀಸರು ಕೊರೊನಾ ಸಾಂಕ್ರಾಮಿಕ ನಿಯಮಗಳನ್ನು ಮುಂದಿಟ್ಟು ರೈತರು ಗುಂಪುಗೂಡದಂತೆ ತಡೆಯುತ್ತಿದ್ದಾರೆ. ಆದರೆ ರೈತರು ಯಾರಿಗೂ ಇಲ್ಲದ ನಿಯಮಗಳು ಕೇವಲ ರೈತರಿಗೇಕೆ? ನಮ್ಮನ್ನು ತಡೆಯಲು ಸಾವಿರ ಸಂಖ್ಯೆಯಲ್ಲಿ ನೆರೆದಿರುವ ಪೊಲೀಸರಿಗಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಿಂದಲೇ ಪ್ರವಾಹೋಪಾದಿಯಲ್ಲಿ ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ ಎಂದು ಎನ್‌ಟಿಟಿವಿ ವರದಿ ಮಾಡಿದೆ. ಆದರೆ ಆಪ್ ಶಾಸಕ ರಾಘವ್ ಚಾಡ್ಡಾ ಈ ಕ್ರಮಕ್ಕೆ ಕಿಡಿಕಾರಿದ್ದು ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ಇದಕ್ಕೆ ಅನುಮತಿ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ರೈತರು ಕ್ರಿಮಿನಲ್‌ಗಳು ಅಲ್ಲ, ಭಯೋತ್ಪಾದಕರೂ ಅಲ್ಲ. ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಎಲ್ಲರ ಸಾಂವಿಧಾನಿಕ ಹಕ್ಕು ಎಂದು ಟ್ವೀಟ್‌ ಮಾಡಿದ್ದಾರೆ.

ಅದೇ ರೀತಿಯಲ್ಲಿ ಆಪ್ ಶಾಸಕ ಸೌರಭ್ ಭಾರದ್ವಾಜ್ ಟ್ವೀಟ್‌ ಮಾಡಿ ಇನ್ನು ಮುಂದೆ ದೆಹಲಿ ಪೊಲೀಸರು ತಮ್ಮನ್ನು ‘ದಿಲ್ ವಾಲಿ ಪೊಲೀಸ್’ ಎಂದು ಕರೆದುಕೊಳ್ಳಬಾರದು. ಅವರ ರೈತರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅತಿಶಿ ಟ್ವೀಟ್‌ ಮಾಡಿ “ತಮ್ಮ ಹಕ್ಕುಗಳಿಗಾಗಿ ದನಿಯೆತ್ತಿದ್ದ ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೊಲೀಸರು ನಡುಗುವ ಚಳಿಯಲ್ಲಿಯೂ ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ದೇಶ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.

ನೂರಾರು ಕಡೆಗಳಿಂದ ದೆಹಲಿ ಪ್ರವೇಶಿಸಲು ರೈತರು ಶತಪ್ರಯತ್ನ ಮುಂದುವರೆಸಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳಿಂದ ಹತ್ತಾರು ಸಾವಿರ ಜನರು ಇಂದು ರಾಮಲೀಲಾ ಮೈದಾನದಲ್ಲಿ ಒಟ್ಟುಗೂಡು ಕೃಷಿ ಮಸೂದೆಗಳಿಗೆ ವಿರೋಧ ದಾಖಲಿಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಎಲ್ಲಿಂದಲೂ ರೈತರು ಒಳಬರಲು ಬಿಡುತ್ತಿಲ್ಲ. ನಿನ್ನೆ ನಡೆದ ರೈತರ ಪ್ರತಿಭಟನೆಗಳಿಂದಾಗಿ ದೆಹಲಿ ಪೂರ್ತಿ ಟ್ರಾಫಿಕ್ ಜಾಮ್ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಟ್ರಾಫಿಕ್‌ಗಳನ್ನು ಬದಲಿಸಲಾಗಿದೆ.

ಒಟ್ಟಿನಲ್ಲಿ ದೆಹಲಿ ಸುತ್ತಾ ಪೊಲೀಸ್ ಸರ್ಪಗಾವಲಿಟ್ಟು ರೈತರನ್ನು ಒಳಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಆದರೆ ರೈತರ ತಾವು ಇದ್ದಲ್ಲಿಯೇ ಧರಣಿ ಮುಂದುವರೆಸುವುದಾಗಿ, ಅದಕ್ಕೆ ಬೇಕಾದ ಆಹಾರ ಸಾಮಾಗ್ರಿಗಳು ಇವೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...