Homeಚಳವಳಿದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ. ಇದಕ್ಕೆ ಆಪ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿದ್ದ ದೆಹಲಿ ಚಲೋ ಹೋರಾಟವನ್ನು ದಮನ ಮಾಡಲು ಸರ್ಕಾರ ಮುಂದಾಗಿದೆ. ನಿನ್ನೆಯೆಲ್ಲ ರೈತರ ದೆಹಲಿ ಪ್ರವೇಶಿಸದಂತೆ ತಡೆದ ದೆಹಲಿ ಪೊಲೀಸರು ಇಂದು ಮುಂಜಾನೆ ಸಹ ಪ್ರತಿಭಟನಾನಿರತ ರೈತರ ಮೇಲೆ ಲಾಠೀ ಚಾರ್ಜ್ ನಡೆಸಿ, ಜಲಫಿರಂಗಿ ಮತ್ತು ಅಶ್ರವಾಯು ಸಿಡಿಸಿದ್ದಾರೆ. ಹರಯಾಣದಿಂದ ಟ್ರಾಕ್ಟರ್‌ಗಳಲ್ಲಿ ಅಗತ್ಯವಸ್ತುಗಳನ್ನು ತುಂಬಿಕೊಂಡು ದೆಹಲಿಯತ್ತ ಹೊರಟಿದ್ದ ಸಾವಿರಾರು ಸಂಖ್ಯೆಯಲ್ಲಿದ್ದ ರೈತರ ಗುಂಪನ್ನು ದೆಹಲಿ ಗಡಿಯಲ್ಲಿ ತಡೆದಿರುವ ಪೊಲೀಸರು ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್, ಮುಳ್ಳುತಂತಿಗಳನ್ನು ಹಾಕಿ ತಡೆ ಒಡ್ಡಿದ್ದಾರೆ.

ಹರಿಯಾಣ ಪೊಲೀಸರು ಕೊರೊನಾ ಸಾಂಕ್ರಾಮಿಕ ನಿಯಮಗಳನ್ನು ಮುಂದಿಟ್ಟು ರೈತರು ಗುಂಪುಗೂಡದಂತೆ ತಡೆಯುತ್ತಿದ್ದಾರೆ. ಆದರೆ ರೈತರು ಯಾರಿಗೂ ಇಲ್ಲದ ನಿಯಮಗಳು ಕೇವಲ ರೈತರಿಗೇಕೆ? ನಮ್ಮನ್ನು ತಡೆಯಲು ಸಾವಿರ ಸಂಖ್ಯೆಯಲ್ಲಿ ನೆರೆದಿರುವ ಪೊಲೀಸರಿಗಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಿಂದಲೇ ಪ್ರವಾಹೋಪಾದಿಯಲ್ಲಿ ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ ಎಂದು ಎನ್‌ಟಿಟಿವಿ ವರದಿ ಮಾಡಿದೆ. ಆದರೆ ಆಪ್ ಶಾಸಕ ರಾಘವ್ ಚಾಡ್ಡಾ ಈ ಕ್ರಮಕ್ಕೆ ಕಿಡಿಕಾರಿದ್ದು ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ಇದಕ್ಕೆ ಅನುಮತಿ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ರೈತರು ಕ್ರಿಮಿನಲ್‌ಗಳು ಅಲ್ಲ, ಭಯೋತ್ಪಾದಕರೂ ಅಲ್ಲ. ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಎಲ್ಲರ ಸಾಂವಿಧಾನಿಕ ಹಕ್ಕು ಎಂದು ಟ್ವೀಟ್‌ ಮಾಡಿದ್ದಾರೆ.

ಅದೇ ರೀತಿಯಲ್ಲಿ ಆಪ್ ಶಾಸಕ ಸೌರಭ್ ಭಾರದ್ವಾಜ್ ಟ್ವೀಟ್‌ ಮಾಡಿ ಇನ್ನು ಮುಂದೆ ದೆಹಲಿ ಪೊಲೀಸರು ತಮ್ಮನ್ನು ‘ದಿಲ್ ವಾಲಿ ಪೊಲೀಸ್’ ಎಂದು ಕರೆದುಕೊಳ್ಳಬಾರದು. ಅವರ ರೈತರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅತಿಶಿ ಟ್ವೀಟ್‌ ಮಾಡಿ “ತಮ್ಮ ಹಕ್ಕುಗಳಿಗಾಗಿ ದನಿಯೆತ್ತಿದ್ದ ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೊಲೀಸರು ನಡುಗುವ ಚಳಿಯಲ್ಲಿಯೂ ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ದೇಶ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.

ನೂರಾರು ಕಡೆಗಳಿಂದ ದೆಹಲಿ ಪ್ರವೇಶಿಸಲು ರೈತರು ಶತಪ್ರಯತ್ನ ಮುಂದುವರೆಸಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳಿಂದ ಹತ್ತಾರು ಸಾವಿರ ಜನರು ಇಂದು ರಾಮಲೀಲಾ ಮೈದಾನದಲ್ಲಿ ಒಟ್ಟುಗೂಡು ಕೃಷಿ ಮಸೂದೆಗಳಿಗೆ ವಿರೋಧ ದಾಖಲಿಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಎಲ್ಲಿಂದಲೂ ರೈತರು ಒಳಬರಲು ಬಿಡುತ್ತಿಲ್ಲ. ನಿನ್ನೆ ನಡೆದ ರೈತರ ಪ್ರತಿಭಟನೆಗಳಿಂದಾಗಿ ದೆಹಲಿ ಪೂರ್ತಿ ಟ್ರಾಫಿಕ್ ಜಾಮ್ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಟ್ರಾಫಿಕ್‌ಗಳನ್ನು ಬದಲಿಸಲಾಗಿದೆ.

ಒಟ್ಟಿನಲ್ಲಿ ದೆಹಲಿ ಸುತ್ತಾ ಪೊಲೀಸ್ ಸರ್ಪಗಾವಲಿಟ್ಟು ರೈತರನ್ನು ಒಳಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಆದರೆ ರೈತರ ತಾವು ಇದ್ದಲ್ಲಿಯೇ ಧರಣಿ ಮುಂದುವರೆಸುವುದಾಗಿ, ಅದಕ್ಕೆ ಬೇಕಾದ ಆಹಾರ ಸಾಮಾಗ್ರಿಗಳು ಇವೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....