Homeಚಳವಳಿದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ. ಇದಕ್ಕೆ ಆಪ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಕರೆ ನೀಡಿದ್ದ ದೆಹಲಿ ಚಲೋ ಹೋರಾಟವನ್ನು ದಮನ ಮಾಡಲು ಸರ್ಕಾರ ಮುಂದಾಗಿದೆ. ನಿನ್ನೆಯೆಲ್ಲ ರೈತರ ದೆಹಲಿ ಪ್ರವೇಶಿಸದಂತೆ ತಡೆದ ದೆಹಲಿ ಪೊಲೀಸರು ಇಂದು ಮುಂಜಾನೆ ಸಹ ಪ್ರತಿಭಟನಾನಿರತ ರೈತರ ಮೇಲೆ ಲಾಠೀ ಚಾರ್ಜ್ ನಡೆಸಿ, ಜಲಫಿರಂಗಿ ಮತ್ತು ಅಶ್ರವಾಯು ಸಿಡಿಸಿದ್ದಾರೆ. ಹರಯಾಣದಿಂದ ಟ್ರಾಕ್ಟರ್‌ಗಳಲ್ಲಿ ಅಗತ್ಯವಸ್ತುಗಳನ್ನು ತುಂಬಿಕೊಂಡು ದೆಹಲಿಯತ್ತ ಹೊರಟಿದ್ದ ಸಾವಿರಾರು ಸಂಖ್ಯೆಯಲ್ಲಿದ್ದ ರೈತರ ಗುಂಪನ್ನು ದೆಹಲಿ ಗಡಿಯಲ್ಲಿ ತಡೆದಿರುವ ಪೊಲೀಸರು ಎಲ್ಲಾ ರಸ್ತೆಗಳಲ್ಲಿ ಬ್ಯಾರಿಕೇಡ್, ಮುಳ್ಳುತಂತಿಗಳನ್ನು ಹಾಕಿ ತಡೆ ಒಡ್ಡಿದ್ದಾರೆ.

ಹರಿಯಾಣ ಪೊಲೀಸರು ಕೊರೊನಾ ಸಾಂಕ್ರಾಮಿಕ ನಿಯಮಗಳನ್ನು ಮುಂದಿಟ್ಟು ರೈತರು ಗುಂಪುಗೂಡದಂತೆ ತಡೆಯುತ್ತಿದ್ದಾರೆ. ಆದರೆ ರೈತರು ಯಾರಿಗೂ ಇಲ್ಲದ ನಿಯಮಗಳು ಕೇವಲ ರೈತರಿಗೇಕೆ? ನಮ್ಮನ್ನು ತಡೆಯಲು ಸಾವಿರ ಸಂಖ್ಯೆಯಲ್ಲಿ ನೆರೆದಿರುವ ಪೊಲೀಸರಿಗಿಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಿಂದಲೇ ಪ್ರವಾಹೋಪಾದಿಯಲ್ಲಿ ದೆಹಲಿಗೆ ನುಗ್ಗುತ್ತಿರುವ ರೈತರನ್ನು ಬಂಧಿಸಿಡಲು ದೆಹಲಿ ಪೊಲೀಸರು ಒಂಭತ್ತು ಸ್ಟೇಡಿಯಂಗಳನ್ನು ಬಂಧನಗೃಹಗಳನ್ನಾಗಿ ಮಾರ್ಪಡಿಸಲು ಅನುಮತಿ ಕೋರಿದ್ದಾರೆ ಎಂದು ಎನ್‌ಟಿಟಿವಿ ವರದಿ ಮಾಡಿದೆ. ಆದರೆ ಆಪ್ ಶಾಸಕ ರಾಘವ್ ಚಾಡ್ಡಾ ಈ ಕ್ರಮಕ್ಕೆ ಕಿಡಿಕಾರಿದ್ದು ಯಾವುದೇ ಕಾರಣಕ್ಕೂ ದೆಹಲಿ ಸರ್ಕಾರ ಇದಕ್ಕೆ ಅನುಮತಿ ಕೊಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ರೈತರು ಕ್ರಿಮಿನಲ್‌ಗಳು ಅಲ್ಲ, ಭಯೋತ್ಪಾದಕರೂ ಅಲ್ಲ. ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಎಲ್ಲರ ಸಾಂವಿಧಾನಿಕ ಹಕ್ಕು ಎಂದು ಟ್ವೀಟ್‌ ಮಾಡಿದ್ದಾರೆ.

ಅದೇ ರೀತಿಯಲ್ಲಿ ಆಪ್ ಶಾಸಕ ಸೌರಭ್ ಭಾರದ್ವಾಜ್ ಟ್ವೀಟ್‌ ಮಾಡಿ ಇನ್ನು ಮುಂದೆ ದೆಹಲಿ ಪೊಲೀಸರು ತಮ್ಮನ್ನು ‘ದಿಲ್ ವಾಲಿ ಪೊಲೀಸ್’ ಎಂದು ಕರೆದುಕೊಳ್ಳಬಾರದು. ಅವರ ರೈತರೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅತಿಶಿ ಟ್ವೀಟ್‌ ಮಾಡಿ “ತಮ್ಮ ಹಕ್ಕುಗಳಿಗಾಗಿ ದನಿಯೆತ್ತಿದ್ದ ರೈತರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಪೊಲೀಸರು ನಡುಗುವ ಚಳಿಯಲ್ಲಿಯೂ ಜಲಫಿರಂಗಿ ಸಿಡಿಸುತ್ತಿದ್ದಾರೆ. ಈ ದೇಶ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದಿದ್ದಾರೆ.

ನೂರಾರು ಕಡೆಗಳಿಂದ ದೆಹಲಿ ಪ್ರವೇಶಿಸಲು ರೈತರು ಶತಪ್ರಯತ್ನ ಮುಂದುವರೆಸಿದ್ದಾರೆ. ದೇಶಾದ್ಯಂತ ಹಲವು ರಾಜ್ಯಗಳಿಂದ ಹತ್ತಾರು ಸಾವಿರ ಜನರು ಇಂದು ರಾಮಲೀಲಾ ಮೈದಾನದಲ್ಲಿ ಒಟ್ಟುಗೂಡು ಕೃಷಿ ಮಸೂದೆಗಳಿಗೆ ವಿರೋಧ ದಾಖಲಿಸಲು ಮುಂದಾಗಿದ್ದರು. ಆದರೆ ದೆಹಲಿ ಪೊಲೀಸರು ಎಲ್ಲಿಂದಲೂ ರೈತರು ಒಳಬರಲು ಬಿಡುತ್ತಿಲ್ಲ. ನಿನ್ನೆ ನಡೆದ ರೈತರ ಪ್ರತಿಭಟನೆಗಳಿಂದಾಗಿ ದೆಹಲಿ ಪೂರ್ತಿ ಟ್ರಾಫಿಕ್ ಜಾಮ್ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಟ್ರಾಫಿಕ್‌ಗಳನ್ನು ಬದಲಿಸಲಾಗಿದೆ.

ಒಟ್ಟಿನಲ್ಲಿ ದೆಹಲಿ ಸುತ್ತಾ ಪೊಲೀಸ್ ಸರ್ಪಗಾವಲಿಟ್ಟು ರೈತರನ್ನು ಒಳಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ಆದರೆ ರೈತರ ತಾವು ಇದ್ದಲ್ಲಿಯೇ ಧರಣಿ ಮುಂದುವರೆಸುವುದಾಗಿ, ಅದಕ್ಕೆ ಬೇಕಾದ ಆಹಾರ ಸಾಮಾಗ್ರಿಗಳು ಇವೆ ಎಂದು ಹೇಳಿಕೊಂಡಿದ್ದಾರೆ.


ಇದನ್ನೂ ಓದಿ: ದೇಶವ್ಯಾಪಿ ಕಾರ್ಮಿಕ ಮುಷ್ಕರ: ಕರ್ನಾಟಕದಲ್ಲೂ ಯಶಸ್ವಿ – ಒಂದು ಝಲಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...