Homeಕರ್ನಾಟಕಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಬಲಪಂಥೀಯ ಗುಂಪುಗಳು ದಾಳಿ ಮಾಡಬಹುದಾಗಿದ್ದು, ನಮಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ದೂರಲಾಗಿದೆ

- Advertisement -
- Advertisement -

ರಾಜ್ಯದ ಚಳಿಗಾಲದ ವಿಧಾನಮಂಡಲ ಅಧಿವೇಶನ ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿದೆ. ಈ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಬೆಳಗಾವಿ ಜಿಲ್ಲೆಯ ಕ್ರೈಸ್ತರಿಗೆ ಪೊಲೀಸರು ‘ಸ್ನೇಹಪೂರ್ವಕ ಎಚ್ಚರಿಕೆ'(ಪ್ರೆಂಡ್‌ಲಿ ವಾರ್ನಿಂಗ್) ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ಯನ್ನು ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

“ಬಲಪಂಥೀಯ ಗುಂಪುಗಳು ಕ್ರಿಶ್ಚಿಯನ್ನರ ಮೇಲೆ ದಾಳಿ ಮಾಡಬಹುದಾಗಿದ್ದು, ಪೊಲೀಸರು ರಕ್ಷಣೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಾರ್ಥನಾ ಸಭೆಗಳನ್ನು ಮಾಡದಂತೆ, ಕೆಲವು ಪಾದ್ರಿಗಳನ್ನು ಕರೆಸಿ ಕೇಳಲಾಗಿದೆ. ಪೊಲೀಸರು ಲಿಖಿತವಾಗಿ ಏನನ್ನೂ ನೀಡಿಲ್ಲ, ಆದರೆ ಇದು ಕೋಮು ಸೌಹಾರ್ದತೆಯನ್ನು ಕಾಪಾಡಲು ಬೇಕಾಗಿ ಎಂದು ಹೇಳುತ್ತಾರೆ” ಎಂದು ಪಾದ್ರಿ ಥಾಮಸ್ ಜಾನ್ಸನ್ ನ್ಯೂಸ್‌ ಮಿನಿ‌ಟ್‌‌ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ 50 ದಾಳಿಗಳು ಇತ್ತೀಚೆಗೆ ನಡೆದಿದೆ: ವರದಿ

“ಪಾದ್ರಿ ಚೆರಿಯನ್ ಮೇಲೆ ಹಲ್ಲೆ ನಡೆದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಮ್ಮ ಸ್ವಂತ ಚರ್ಚ್ ಕಟ್ಟಡಗಳಿದ್ದರೆ, ನೀವು ಪ್ರಾರ್ಥನೆ ಸಭೆಗಳನ್ನು ನಡೆಸಬಹುದು. ಆದರೆ ಬಾಡಿಗೆ ಕಟ್ಟಡಗಳಲ್ಲಿ ಅಥವಾ ಖಾಸಗಿ ಮನೆಗಳಲ್ಲಿ ನಡೆಸಬೇಡಿ ಎಂದು ಪೊಲೀಸರು ಪಾದ್ರಿಗಳಿಗೆ ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

ವಿಶೇಷವೇನೆಂದರೆ, ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯದ ವಿಧಾನಸಭೆಯ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ತಪ್ಪಿಸುವಂತೆ ಕ್ರೈಸ್ತರಿಗೆ ತಿಳಿಸಲಾಗಿದೆ. ಡಿಸೆಂಬರ್ 13 ರಿಂದ 24 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ಜಿಲ್ಲೆಯ 25 ಕ್ಕೂ ಹೆಚ್ಚು ಪಾದ್ರಿಗಳನ್ನು ಪೊಲೀಸರು ಸಂಪರ್ಕಿಸಿದ್ದು, ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಕೇಳಿಕೊಂಡಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ದೃಡಪಡಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

“ಬಲಪಂಥೀಯರು ಚರ್ಚ್‌ಗಳಿಗೆ ನುಗ್ಗಿ, ವಸ್ತುಗಳನ್ನು ಒಡೆಯುತ್ತಾರೆ, ಜನರ ಮೇಲೆ ದಾಳಿ ಮಾಡುತ್ತಾರೆ. ಆದರೆ ಅಂತಿಮವಾಗಿ ಪಾದ್ರಿಗಳ ವಿರುದ್ಧ ಬಲವಂತದ ಮತಾಂತರದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಅನೇಕರು ಈಗ ‘ಜೂಮ್ ಕರೆ’ಗಳಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಬಲಪಂಥೀಯರಿಗೆ ಅವಕಾಶ ನೀಡಲು ಬಯಸುವುದಿಲ್ಲ” ಎಂದು ಪಾದ್ರಿ ಥಾಮಸ್ ಹೇಳಿದ್ದಾರೆ.

ಬುಧವಾರ, ರೆವರೆಂಡ್ ನಂದು ಕುಮಾರ್ ಮತ್ತು ರೆವರೆಂಡ್ ಡೆರೆಕ್ ಫೆರ್ನಾಂಡಿಸ್ ನೇತೃತ್ವದ ಬಿಷಪ್‌ಗಳು ಮತ್ತು ಕ್ರಿಶ್ಚಿಯನ್ ಮುಖಂಡರ ನಿಯೋಗವು ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ರಕ್ಷಣೆ ಕೋರಿ ಮನವಿ ಸಲ್ಲಿಸಿದೆ.

ಕಳೆದ ಕೆಲವು ತಿಂಗಳುಗಳಿಂದ, ಬಿಜೆಪಿ ಬೆಂಬಲಿತ ಬಜರಂಗದಳ ಸೇರಿದಂತೆ ಹಲವಾರು ಸಂಘಟನೆಗಳು ರಾಜ್ಯದ ಹಲವು ಭಾಗಗಳಲ್ಲಿ ಕ್ರಿಶ್ಚಿಯನ್ ಪಾದ್ರಿಗಳಿಂದ ಬಲವಂತದ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಗಳು ಮತಾಂತರವನ್ನು ನಿಷೇಧಿಸುವ ಕಾನೂನನ್ನು ತರುವ ದೊಡ್ಡ ಯೋಜನೆಯ ಭಾಗವಾಗಿದೆ ಎಂಬುವುದನ್ನು ನ್ಯೂಸ್‌ ಮಿನಿಟ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಮಸ್ಯೆಗಳು ಎಂದೂ ಹಿಂದೂ ಸಮುದಾಯಗಳಿಂದ ಉದ್ಬವಿಸಿಲ್ಲಾ ,ಸಮಸ್ಯೆಗಳ ಸರಮಾಲೆ ಇರೋದು ಕ್ರಿಶ್ಚಿಯನ್ನರು ಮಾಡುವ ಮತಾಂತರದಿಂದಲೇ ,ಪಾದ್ರಿಗಳು ಮಾಡು ಅನಾಚಾರ ಚಟುವಟಿಕೆಗಳಿಂದ ,ಮೊದಲು ಸಮಾಜದಲ್ಲಿ ಅನಿಶ್ಚಿತತೆ ಗೆ ಕಾರಣರಾದ ಮತಾಂತರಿಗಳನ್ನ ,ಅದಕ್ಕೆ ಸಹಕರಿಸುವ ಪತ್ರಿಕೆಗಳನ್ನು ಅನಿಶ್ಚಿತತೆ ಯೊಂದಿಗೆ ದುರ್ಬಲ ಗೊಳಿಸಬೇಕು.

  2. ಕರ್ನಾಟಕದ ಪೊಲೀಸರ ಈ ಕ್ರಮ ಕಂಡನಾರ್ಹ. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

  3. (ಬೆಳಗಾವಿ) ಪೊಲೀಸರ ಈ ಕ್ರಮ ಸರಿಯಲ್ಲ ಎಂದು ನನ್ನ ಅಭಿಪ್ರಾಯ, ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನ ಇಷ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ.
    (Article 25 26) “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಬೆಳಗಾವಿ ಪೊಲೀಸರ ಅಭಿಪ್ರಾಯ ಸರಿಯಲ್ಲ, ಪ್ರತಿಯೊಬ್ಬರಿಗೂ ರಕ್ಷಣೆ ಕೊಡುವುದು ನಿಮ್ಮ ಧರ್ಮ ಮತ್ತು ಕರ್ತವ್ಯ , ದಯವಿಟ್ಟು ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ
    ಧನ್ಯವಾದಗಳು

  4. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...