Homeಕರ್ನಾಟಕಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಬಲಪಂಥೀಯ ಗುಂಪುಗಳು ದಾಳಿ ಮಾಡಬಹುದಾಗಿದ್ದು, ನಮಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ದೂರಲಾಗಿದೆ

- Advertisement -
- Advertisement -

ರಾಜ್ಯದ ಚಳಿಗಾಲದ ವಿಧಾನಮಂಡಲ ಅಧಿವೇಶನ ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿದೆ. ಈ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಬೆಳಗಾವಿ ಜಿಲ್ಲೆಯ ಕ್ರೈಸ್ತರಿಗೆ ಪೊಲೀಸರು ‘ಸ್ನೇಹಪೂರ್ವಕ ಎಚ್ಚರಿಕೆ'(ಪ್ರೆಂಡ್‌ಲಿ ವಾರ್ನಿಂಗ್) ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ಯನ್ನು ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

“ಬಲಪಂಥೀಯ ಗುಂಪುಗಳು ಕ್ರಿಶ್ಚಿಯನ್ನರ ಮೇಲೆ ದಾಳಿ ಮಾಡಬಹುದಾಗಿದ್ದು, ಪೊಲೀಸರು ರಕ್ಷಣೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಾರ್ಥನಾ ಸಭೆಗಳನ್ನು ಮಾಡದಂತೆ, ಕೆಲವು ಪಾದ್ರಿಗಳನ್ನು ಕರೆಸಿ ಕೇಳಲಾಗಿದೆ. ಪೊಲೀಸರು ಲಿಖಿತವಾಗಿ ಏನನ್ನೂ ನೀಡಿಲ್ಲ, ಆದರೆ ಇದು ಕೋಮು ಸೌಹಾರ್ದತೆಯನ್ನು ಕಾಪಾಡಲು ಬೇಕಾಗಿ ಎಂದು ಹೇಳುತ್ತಾರೆ” ಎಂದು ಪಾದ್ರಿ ಥಾಮಸ್ ಜಾನ್ಸನ್ ನ್ಯೂಸ್‌ ಮಿನಿ‌ಟ್‌‌ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ 50 ದಾಳಿಗಳು ಇತ್ತೀಚೆಗೆ ನಡೆದಿದೆ: ವರದಿ

“ಪಾದ್ರಿ ಚೆರಿಯನ್ ಮೇಲೆ ಹಲ್ಲೆ ನಡೆದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಮ್ಮ ಸ್ವಂತ ಚರ್ಚ್ ಕಟ್ಟಡಗಳಿದ್ದರೆ, ನೀವು ಪ್ರಾರ್ಥನೆ ಸಭೆಗಳನ್ನು ನಡೆಸಬಹುದು. ಆದರೆ ಬಾಡಿಗೆ ಕಟ್ಟಡಗಳಲ್ಲಿ ಅಥವಾ ಖಾಸಗಿ ಮನೆಗಳಲ್ಲಿ ನಡೆಸಬೇಡಿ ಎಂದು ಪೊಲೀಸರು ಪಾದ್ರಿಗಳಿಗೆ ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

ವಿಶೇಷವೇನೆಂದರೆ, ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯದ ವಿಧಾನಸಭೆಯ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ತಪ್ಪಿಸುವಂತೆ ಕ್ರೈಸ್ತರಿಗೆ ತಿಳಿಸಲಾಗಿದೆ. ಡಿಸೆಂಬರ್ 13 ರಿಂದ 24 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ಜಿಲ್ಲೆಯ 25 ಕ್ಕೂ ಹೆಚ್ಚು ಪಾದ್ರಿಗಳನ್ನು ಪೊಲೀಸರು ಸಂಪರ್ಕಿಸಿದ್ದು, ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಕೇಳಿಕೊಂಡಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ದೃಡಪಡಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

“ಬಲಪಂಥೀಯರು ಚರ್ಚ್‌ಗಳಿಗೆ ನುಗ್ಗಿ, ವಸ್ತುಗಳನ್ನು ಒಡೆಯುತ್ತಾರೆ, ಜನರ ಮೇಲೆ ದಾಳಿ ಮಾಡುತ್ತಾರೆ. ಆದರೆ ಅಂತಿಮವಾಗಿ ಪಾದ್ರಿಗಳ ವಿರುದ್ಧ ಬಲವಂತದ ಮತಾಂತರದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಅನೇಕರು ಈಗ ‘ಜೂಮ್ ಕರೆ’ಗಳಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಬಲಪಂಥೀಯರಿಗೆ ಅವಕಾಶ ನೀಡಲು ಬಯಸುವುದಿಲ್ಲ” ಎಂದು ಪಾದ್ರಿ ಥಾಮಸ್ ಹೇಳಿದ್ದಾರೆ.

ಬುಧವಾರ, ರೆವರೆಂಡ್ ನಂದು ಕುಮಾರ್ ಮತ್ತು ರೆವರೆಂಡ್ ಡೆರೆಕ್ ಫೆರ್ನಾಂಡಿಸ್ ನೇತೃತ್ವದ ಬಿಷಪ್‌ಗಳು ಮತ್ತು ಕ್ರಿಶ್ಚಿಯನ್ ಮುಖಂಡರ ನಿಯೋಗವು ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ರಕ್ಷಣೆ ಕೋರಿ ಮನವಿ ಸಲ್ಲಿಸಿದೆ.

ಕಳೆದ ಕೆಲವು ತಿಂಗಳುಗಳಿಂದ, ಬಿಜೆಪಿ ಬೆಂಬಲಿತ ಬಜರಂಗದಳ ಸೇರಿದಂತೆ ಹಲವಾರು ಸಂಘಟನೆಗಳು ರಾಜ್ಯದ ಹಲವು ಭಾಗಗಳಲ್ಲಿ ಕ್ರಿಶ್ಚಿಯನ್ ಪಾದ್ರಿಗಳಿಂದ ಬಲವಂತದ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಗಳು ಮತಾಂತರವನ್ನು ನಿಷೇಧಿಸುವ ಕಾನೂನನ್ನು ತರುವ ದೊಡ್ಡ ಯೋಜನೆಯ ಭಾಗವಾಗಿದೆ ಎಂಬುವುದನ್ನು ನ್ಯೂಸ್‌ ಮಿನಿಟ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಮಸ್ಯೆಗಳು ಎಂದೂ ಹಿಂದೂ ಸಮುದಾಯಗಳಿಂದ ಉದ್ಬವಿಸಿಲ್ಲಾ ,ಸಮಸ್ಯೆಗಳ ಸರಮಾಲೆ ಇರೋದು ಕ್ರಿಶ್ಚಿಯನ್ನರು ಮಾಡುವ ಮತಾಂತರದಿಂದಲೇ ,ಪಾದ್ರಿಗಳು ಮಾಡು ಅನಾಚಾರ ಚಟುವಟಿಕೆಗಳಿಂದ ,ಮೊದಲು ಸಮಾಜದಲ್ಲಿ ಅನಿಶ್ಚಿತತೆ ಗೆ ಕಾರಣರಾದ ಮತಾಂತರಿಗಳನ್ನ ,ಅದಕ್ಕೆ ಸಹಕರಿಸುವ ಪತ್ರಿಕೆಗಳನ್ನು ಅನಿಶ್ಚಿತತೆ ಯೊಂದಿಗೆ ದುರ್ಬಲ ಗೊಳಿಸಬೇಕು.

  2. ಕರ್ನಾಟಕದ ಪೊಲೀಸರ ಈ ಕ್ರಮ ಕಂಡನಾರ್ಹ. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

  3. (ಬೆಳಗಾವಿ) ಪೊಲೀಸರ ಈ ಕ್ರಮ ಸರಿಯಲ್ಲ ಎಂದು ನನ್ನ ಅಭಿಪ್ರಾಯ, ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನ ಇಷ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ.
    (Article 25 26) “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಬೆಳಗಾವಿ ಪೊಲೀಸರ ಅಭಿಪ್ರಾಯ ಸರಿಯಲ್ಲ, ಪ್ರತಿಯೊಬ್ಬರಿಗೂ ರಕ್ಷಣೆ ಕೊಡುವುದು ನಿಮ್ಮ ಧರ್ಮ ಮತ್ತು ಕರ್ತವ್ಯ , ದಯವಿಟ್ಟು ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ
    ಧನ್ಯವಾದಗಳು

  4. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...