Homeಕರ್ನಾಟಕಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!

ಬಲಪಂಥೀಯ ಗುಂಪುಗಳು ದಾಳಿ ಮಾಡಬಹುದಾಗಿದ್ದು, ನಮಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ದೂರಲಾಗಿದೆ

- Advertisement -
- Advertisement -

ರಾಜ್ಯದ ಚಳಿಗಾಲದ ವಿಧಾನಮಂಡಲ ಅಧಿವೇಶನ ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿದೆ. ಈ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಬೆಳಗಾವಿ ಜಿಲ್ಲೆಯ ಕ್ರೈಸ್ತರಿಗೆ ಪೊಲೀಸರು ‘ಸ್ನೇಹಪೂರ್ವಕ ಎಚ್ಚರಿಕೆ'(ಪ್ರೆಂಡ್‌ಲಿ ವಾರ್ನಿಂಗ್) ನೀಡಿದ್ದಾರೆ ಎಂದು ದಿ ನ್ಯೂಸ್ ಮಿನಿಟ್‌ ವರದಿ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ಯನ್ನು ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

“ಬಲಪಂಥೀಯ ಗುಂಪುಗಳು ಕ್ರಿಶ್ಚಿಯನ್ನರ ಮೇಲೆ ದಾಳಿ ಮಾಡಬಹುದಾಗಿದ್ದು, ಪೊಲೀಸರು ರಕ್ಷಣೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಾರ್ಥನಾ ಸಭೆಗಳನ್ನು ಮಾಡದಂತೆ, ಕೆಲವು ಪಾದ್ರಿಗಳನ್ನು ಕರೆಸಿ ಕೇಳಲಾಗಿದೆ. ಪೊಲೀಸರು ಲಿಖಿತವಾಗಿ ಏನನ್ನೂ ನೀಡಿಲ್ಲ, ಆದರೆ ಇದು ಕೋಮು ಸೌಹಾರ್ದತೆಯನ್ನು ಕಾಪಾಡಲು ಬೇಕಾಗಿ ಎಂದು ಹೇಳುತ್ತಾರೆ” ಎಂದು ಪಾದ್ರಿ ಥಾಮಸ್ ಜಾನ್ಸನ್ ನ್ಯೂಸ್‌ ಮಿನಿ‌ಟ್‌‌ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಕ್ರಿಶ್ಚಿಯನ್ನರ ವಿರುದ್ಧ 50 ದಾಳಿಗಳು ಇತ್ತೀಚೆಗೆ ನಡೆದಿದೆ: ವರದಿ

“ಪಾದ್ರಿ ಚೆರಿಯನ್ ಮೇಲೆ ಹಲ್ಲೆ ನಡೆದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಮ್ಮ ಸ್ವಂತ ಚರ್ಚ್ ಕಟ್ಟಡಗಳಿದ್ದರೆ, ನೀವು ಪ್ರಾರ್ಥನೆ ಸಭೆಗಳನ್ನು ನಡೆಸಬಹುದು. ಆದರೆ ಬಾಡಿಗೆ ಕಟ್ಟಡಗಳಲ್ಲಿ ಅಥವಾ ಖಾಸಗಿ ಮನೆಗಳಲ್ಲಿ ನಡೆಸಬೇಡಿ ಎಂದು ಪೊಲೀಸರು ಪಾದ್ರಿಗಳಿಗೆ ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ.

ವಿಶೇಷವೇನೆಂದರೆ, ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯದ ವಿಧಾನಸಭೆಯ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆಗಳನ್ನು ತಪ್ಪಿಸುವಂತೆ ಕ್ರೈಸ್ತರಿಗೆ ತಿಳಿಸಲಾಗಿದೆ. ಡಿಸೆಂಬರ್ 13 ರಿಂದ 24 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ಜಿಲ್ಲೆಯ 25 ಕ್ಕೂ ಹೆಚ್ಚು ಪಾದ್ರಿಗಳನ್ನು ಪೊಲೀಸರು ಸಂಪರ್ಕಿಸಿದ್ದು, ಪ್ರಾರ್ಥನಾ ಸಭೆಗಳನ್ನು ನಡೆಸದಂತೆ ಕೇಳಿಕೊಂಡಿದ್ದಾರೆ ಎಂದು ನ್ಯೂಸ್‌ ಮಿನಿಟ್‌ ದೃಡಪಡಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ ಜಾರಿಯಿಂದ ಜನರ ಜೀವನೋಪಾಯಕ್ಕೆ ಧಕ್ಕೆ, ಗೂಂಡಾಗಿರಿ ಹೆಚ್ಚಳ: ಅಧ್ಯಯನ ವರದಿ

“ಬಲಪಂಥೀಯರು ಚರ್ಚ್‌ಗಳಿಗೆ ನುಗ್ಗಿ, ವಸ್ತುಗಳನ್ನು ಒಡೆಯುತ್ತಾರೆ, ಜನರ ಮೇಲೆ ದಾಳಿ ಮಾಡುತ್ತಾರೆ. ಆದರೆ ಅಂತಿಮವಾಗಿ ಪಾದ್ರಿಗಳ ವಿರುದ್ಧ ಬಲವಂತದ ಮತಾಂತರದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಅನೇಕರು ಈಗ ‘ಜೂಮ್ ಕರೆ’ಗಳಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸುತ್ತಿದ್ದಾರೆ. ನಾವು ಬಲಪಂಥೀಯರಿಗೆ ಅವಕಾಶ ನೀಡಲು ಬಯಸುವುದಿಲ್ಲ” ಎಂದು ಪಾದ್ರಿ ಥಾಮಸ್ ಹೇಳಿದ್ದಾರೆ.

ಬುಧವಾರ, ರೆವರೆಂಡ್ ನಂದು ಕುಮಾರ್ ಮತ್ತು ರೆವರೆಂಡ್ ಡೆರೆಕ್ ಫೆರ್ನಾಂಡಿಸ್ ನೇತೃತ್ವದ ಬಿಷಪ್‌ಗಳು ಮತ್ತು ಕ್ರಿಶ್ಚಿಯನ್ ಮುಖಂಡರ ನಿಯೋಗವು ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ರಕ್ಷಣೆ ಕೋರಿ ಮನವಿ ಸಲ್ಲಿಸಿದೆ.

ಕಳೆದ ಕೆಲವು ತಿಂಗಳುಗಳಿಂದ, ಬಿಜೆಪಿ ಬೆಂಬಲಿತ ಬಜರಂಗದಳ ಸೇರಿದಂತೆ ಹಲವಾರು ಸಂಘಟನೆಗಳು ರಾಜ್ಯದ ಹಲವು ಭಾಗಗಳಲ್ಲಿ ಕ್ರಿಶ್ಚಿಯನ್ ಪಾದ್ರಿಗಳಿಂದ ಬಲವಂತದ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಗಳು ಮತಾಂತರವನ್ನು ನಿಷೇಧಿಸುವ ಕಾನೂನನ್ನು ತರುವ ದೊಡ್ಡ ಯೋಜನೆಯ ಭಾಗವಾಗಿದೆ ಎಂಬುವುದನ್ನು ನ್ಯೂಸ್‌ ಮಿನಿಟ್‌ ಉಲ್ಲೇಖಿಸಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸಮಸ್ಯೆಗಳು ಎಂದೂ ಹಿಂದೂ ಸಮುದಾಯಗಳಿಂದ ಉದ್ಬವಿಸಿಲ್ಲಾ ,ಸಮಸ್ಯೆಗಳ ಸರಮಾಲೆ ಇರೋದು ಕ್ರಿಶ್ಚಿಯನ್ನರು ಮಾಡುವ ಮತಾಂತರದಿಂದಲೇ ,ಪಾದ್ರಿಗಳು ಮಾಡು ಅನಾಚಾರ ಚಟುವಟಿಕೆಗಳಿಂದ ,ಮೊದಲು ಸಮಾಜದಲ್ಲಿ ಅನಿಶ್ಚಿತತೆ ಗೆ ಕಾರಣರಾದ ಮತಾಂತರಿಗಳನ್ನ ,ಅದಕ್ಕೆ ಸಹಕರಿಸುವ ಪತ್ರಿಕೆಗಳನ್ನು ಅನಿಶ್ಚಿತತೆ ಯೊಂದಿಗೆ ದುರ್ಬಲ ಗೊಳಿಸಬೇಕು.

  2. ಕರ್ನಾಟಕದ ಪೊಲೀಸರ ಈ ಕ್ರಮ ಕಂಡನಾರ್ಹ. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

  3. (ಬೆಳಗಾವಿ) ಪೊಲೀಸರ ಈ ಕ್ರಮ ಸರಿಯಲ್ಲ ಎಂದು ನನ್ನ ಅಭಿಪ್ರಾಯ, ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನ ಇಷ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ.
    (Article 25 26) “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಬೆಳಗಾವಿ ಪೊಲೀಸರ ಅಭಿಪ್ರಾಯ ಸರಿಯಲ್ಲ, ಪ್ರತಿಯೊಬ್ಬರಿಗೂ ರಕ್ಷಣೆ ಕೊಡುವುದು ನಿಮ್ಮ ಧರ್ಮ ಮತ್ತು ಕರ್ತವ್ಯ , ದಯವಿಟ್ಟು ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ
    ಧನ್ಯವಾದಗಳು

  4. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ತನಗಿಶ್ಟವಾದ ದಾರ್ಮಿಕ ಆಚರಣೆಗಳನ್ನು, ಬೇರೆಯವರಿಗೆ ತೊಂದರೆ ಆಗದಂತೆ ಆಚರಣೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. “ನಾವು ರಕ್ಷಣೆ ಕೊಡುವುದು ಸಾದ್ಯವಿಲ್ಲ” ಎನ್ನುವುದು ಪೊಲೀಸರ ಕರ್ತವ್ಯಲೋಪ ಆಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...