Homeಮುಖಪುಟತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

- Advertisement -
- Advertisement -

ಹಲವಾರು ಭಾಷೆಗಳಲ್ಲಿ ರಿಮೇಕ್ ಆಗಿರುವ ಜನಪ್ರಿಯ ಸಿನೆಮಾ ’ಸಿಂಗಂ’ ಇದರ ನಿರ್ದೇಶಕ ಹರಿ ಅವರು ಪೊಲೀಸರನ್ನು ವೈಭವೀಕರಿಸುವ ಚಿತ್ರಗಳನ್ನು ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಹರಿ ಇದುವರೆಗೆ ಪೊಲೀಸ್ ಕಥಾವಸ್ತುಗಳ ಮೇಲೆ ಐದು ಚಲನಚಿತ್ರಗಳನ್ನು ಮಾಡಿದ್ದು, ಈ ಪಾತ್ರಗಳೆಲ್ಲವೂ  ಎನ್ಕೌಂಟರ್‌ಗಳನ್ನು ಸಮರ್ಥಿಸುತ್ತಾ ಪೊಲೀಸ್ ಹಿಂಸಾಚಾರವನ್ನು ವೈಭವೀಕರಿಸುತ್ತವೆ.

ಜೂನ್ 28 ರ ದಿನಾಂಕ ಮತ್ತು ಅವರ ಸಹಿ ಇರುವ ತನ್ನ ಪತ್ರದಲ್ಲಿ, ತಮಿಳುನಾಡಿನ ಯಾವುದೇ ವ್ಯಕ್ತಿಯು ಸಾಥಂಕುಲಂನಲ್ಲಿ ನಡೆದ ಕ್ರೂರತೆಗೆ ಒಳಗಾಗಬಾರದು ಎಂದು ಬರೆದಿದ್ದಾರೆ.

“ಸಾಥಂಕುಲಂ ಘಟನೆ ತಮಿಳುನಾಡಿನಲ್ಲಿ ಬೇರೆಯವರಿಗೆ ಆಗಬಾರದು. ಅದಕ್ಕೆ ಇರುವ ಏಕೈಕ ಮಾರ್ಗವೆಂದರೆ ಅದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗುವುದು. ಪೊಲೀಸ್ ಪಡೆಯಲ್ಲಿ ಕೆಲವರು ನಿಯಮ ಉಲ್ಲಂಘಿಸಿದ್ದು ಇಡೀ ಪಡೆಗೆ ಅಪಮಾನ ತಂದಿದೆ. ಪೊಲೀಸರನ್ನು ವೈಭವೀಕರಿಸುವ ಐದು ಚಲನಚಿತ್ರಗಳನ್ನು ಮಾಡಿದ್ದಕ್ಕಾಗಿ ನಾನು ಇಂದು ತುಂಬಾ ದುಃಖಿತನಾಗಿದ್ದೇನೆ” ಎಂದು ಅವರು ಬರೆದಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಎಂಬವರು ಪೊಲೀಸರ ವಶದಲ್ಲಿ ಸಾವಿಗೀಡಾದ ನಂತರ ಇವರಿಬ್ಬರನ್ನು ಪೊಲೀಸರು ಚಿತ್ರಹಿಂಸೆಗೊಳಪಡಿಸಿದ್ದಾರೆ, ಅದರಿಂದಾಗಿ ಅವರು ಸಾವಿಗೀಡಾದರು ಎಂಬ ಆರೋಪಗಳೆದ್ದು ತಮಿಳುನಾಡಿನಲ್ಲಿ ಭಾರಿ ಆಕ್ರೋಶದ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ನಿರ್ದೇಶಕ ಹರಿ ಅವರ ಹೇಳಿಕೆ ಬಂದಿದೆ.

ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಹಿರಂಗವಾಗಿಲ್ಲ.

ಹರಿ ಇದುವರೆಗೆ ಪೊಲೀಸ್ ಕಥಾವಸ್ತುಗಳನ್ನಿಟ್ಟು ಐದು ಚಲನಚಿತ್ರಗಳನ್ನು ಮಾಡಿದ್ದಾರೆ. ಈ ಎಲ್ಲಾ ಪಾತ್ರಗಳು  ಎನ್ಕೌಂಟರ್ಗಳನ್ನು ಸಮರ್ಥಿಸುತ್ತದೆ ಮತ್ತು ಪೊಲೀಸ್ ಹಿಂಸಾಚಾರವನ್ನು ವೈಭವೀಕರಿಸುತ್ತದೆ.

ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳಿಗೆ ಹಲವಾರು ಆಕ್ಷನ್ ಸನ್ನಿವೇಶಗಳನ್ನು ಹೊಂದಿದ್ದು, ಅಪರಾಧವನ್ನು ನಿಯಂತ್ರಣದಲ್ಲಿಡಲು ಹಿಂಸಾಚಾರದ ಅಗತ್ಯವನ್ನು ವೈಭವೀಕರಿಸುವ ಪಂಚ್ ಡೈಲಾಗ್‌ಗಳನ್ನು ಈ ಪಾತ್ರಗಳು ಹೇಳುತ್ತದೆ.

ಹರಿ ಅವರ ಸಿಂಗಂ ಸಿನಿಮಾ 2010 ರಲ್ಲಿ ಮೊದಲಿಗೆ ತಮಿಳಿನಲ್ಲಿ ಬಿಡುಗಡೆಯಾಗಿ, ನಂತರ ಕನ್ನಡ, ಹಿಂದಿ, ಬಂಗಾಳಿ ಮತ್ತು ಪಂಜಾಬಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ರಿಮೇಕ್ ಮಾಡಲಾಯಿತು. ಹಿಂದಿಯಲ್ಲಿ ನಟ ಅಜಯ್ ದೇವ್‌ಗನ್ ಪ್ರಮುಖ ಪಾತ್ರ ನಿರ್ವಹಿಸಿದ್ದರು.


ಓದಿ: ಅಮ್ಮ ಆರೋಗ್ಯವಾಗಿದ್ದಾರೆ; ಸುಳ್ಳು ಸುದ್ದಿ ಹಬ್ಬಿಸದಿರಿ: ಹಿನ್ನಲೆ ಗಾಯಕಿ ಎಸ್. ಜಾನಕಿ ಪುತ್ರ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...