Homeಮುಖಪುಟತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

ತಮಿಳುನಾಡು ಲಾಕಪ್ ಡೆತ್: ಪೊಲೀಸರನ್ನು ವೈಭವೀಕರಿಸಿದ್ದಕ್ಕೆ ಬೇಸರವಿದೆಯೆಂದ ಸಿಂಗಂ ನಿರ್ದೇಶಕ ’ಹರಿ’

- Advertisement -
- Advertisement -

ಹಲವಾರು ಭಾಷೆಗಳಲ್ಲಿ ರಿಮೇಕ್ ಆಗಿರುವ ಜನಪ್ರಿಯ ಸಿನೆಮಾ ’ಸಿಂಗಂ’ ಇದರ ನಿರ್ದೇಶಕ ಹರಿ ಅವರು ಪೊಲೀಸರನ್ನು ವೈಭವೀಕರಿಸುವ ಚಿತ್ರಗಳನ್ನು ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಹರಿ ಇದುವರೆಗೆ ಪೊಲೀಸ್ ಕಥಾವಸ್ತುಗಳ ಮೇಲೆ ಐದು ಚಲನಚಿತ್ರಗಳನ್ನು ಮಾಡಿದ್ದು, ಈ ಪಾತ್ರಗಳೆಲ್ಲವೂ  ಎನ್ಕೌಂಟರ್‌ಗಳನ್ನು ಸಮರ್ಥಿಸುತ್ತಾ ಪೊಲೀಸ್ ಹಿಂಸಾಚಾರವನ್ನು ವೈಭವೀಕರಿಸುತ್ತವೆ.

ಜೂನ್ 28 ರ ದಿನಾಂಕ ಮತ್ತು ಅವರ ಸಹಿ ಇರುವ ತನ್ನ ಪತ್ರದಲ್ಲಿ, ತಮಿಳುನಾಡಿನ ಯಾವುದೇ ವ್ಯಕ್ತಿಯು ಸಾಥಂಕುಲಂನಲ್ಲಿ ನಡೆದ ಕ್ರೂರತೆಗೆ ಒಳಗಾಗಬಾರದು ಎಂದು ಬರೆದಿದ್ದಾರೆ.

“ಸಾಥಂಕುಲಂ ಘಟನೆ ತಮಿಳುನಾಡಿನಲ್ಲಿ ಬೇರೆಯವರಿಗೆ ಆಗಬಾರದು. ಅದಕ್ಕೆ ಇರುವ ಏಕೈಕ ಮಾರ್ಗವೆಂದರೆ ಅದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅತ್ಯುಗ್ರ ಶಿಕ್ಷೆಯಾಗುವುದು. ಪೊಲೀಸ್ ಪಡೆಯಲ್ಲಿ ಕೆಲವರು ನಿಯಮ ಉಲ್ಲಂಘಿಸಿದ್ದು ಇಡೀ ಪಡೆಗೆ ಅಪಮಾನ ತಂದಿದೆ. ಪೊಲೀಸರನ್ನು ವೈಭವೀಕರಿಸುವ ಐದು ಚಲನಚಿತ್ರಗಳನ್ನು ಮಾಡಿದ್ದಕ್ಕಾಗಿ ನಾನು ಇಂದು ತುಂಬಾ ದುಃಖಿತನಾಗಿದ್ದೇನೆ” ಎಂದು ಅವರು ಬರೆದಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಎಂಬವರು ಪೊಲೀಸರ ವಶದಲ್ಲಿ ಸಾವಿಗೀಡಾದ ನಂತರ ಇವರಿಬ್ಬರನ್ನು ಪೊಲೀಸರು ಚಿತ್ರಹಿಂಸೆಗೊಳಪಡಿಸಿದ್ದಾರೆ, ಅದರಿಂದಾಗಿ ಅವರು ಸಾವಿಗೀಡಾದರು ಎಂಬ ಆರೋಪಗಳೆದ್ದು ತಮಿಳುನಾಡಿನಲ್ಲಿ ಭಾರಿ ಆಕ್ರೋಶದ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ನಿರ್ದೇಶಕ ಹರಿ ಅವರ ಹೇಳಿಕೆ ಬಂದಿದೆ.

ಮರಣೋತ್ತರ ಪರೀಕ್ಷೆಯ ವರದಿ ಇನ್ನೂ ಬಹಿರಂಗವಾಗಿಲ್ಲ.

ಹರಿ ಇದುವರೆಗೆ ಪೊಲೀಸ್ ಕಥಾವಸ್ತುಗಳನ್ನಿಟ್ಟು ಐದು ಚಲನಚಿತ್ರಗಳನ್ನು ಮಾಡಿದ್ದಾರೆ. ಈ ಎಲ್ಲಾ ಪಾತ್ರಗಳು  ಎನ್ಕೌಂಟರ್ಗಳನ್ನು ಸಮರ್ಥಿಸುತ್ತದೆ ಮತ್ತು ಪೊಲೀಸ್ ಹಿಂಸಾಚಾರವನ್ನು ವೈಭವೀಕರಿಸುತ್ತದೆ.

ಚಲನಚಿತ್ರಗಳಲ್ಲಿ ಪ್ರಮುಖ ಪಾತ್ರಗಳಿಗೆ ಹಲವಾರು ಆಕ್ಷನ್ ಸನ್ನಿವೇಶಗಳನ್ನು ಹೊಂದಿದ್ದು, ಅಪರಾಧವನ್ನು ನಿಯಂತ್ರಣದಲ್ಲಿಡಲು ಹಿಂಸಾಚಾರದ ಅಗತ್ಯವನ್ನು ವೈಭವೀಕರಿಸುವ ಪಂಚ್ ಡೈಲಾಗ್‌ಗಳನ್ನು ಈ ಪಾತ್ರಗಳು ಹೇಳುತ್ತದೆ.

ಹರಿ ಅವರ ಸಿಂಗಂ ಸಿನಿಮಾ 2010 ರಲ್ಲಿ ಮೊದಲಿಗೆ ತಮಿಳಿನಲ್ಲಿ ಬಿಡುಗಡೆಯಾಗಿ, ನಂತರ ಕನ್ನಡ, ಹಿಂದಿ, ಬಂಗಾಳಿ ಮತ್ತು ಪಂಜಾಬಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ರಿಮೇಕ್ ಮಾಡಲಾಯಿತು. ಹಿಂದಿಯಲ್ಲಿ ನಟ ಅಜಯ್ ದೇವ್‌ಗನ್ ಪ್ರಮುಖ ಪಾತ್ರ ನಿರ್ವಹಿಸಿದ್ದರು.


ಓದಿ: ಅಮ್ಮ ಆರೋಗ್ಯವಾಗಿದ್ದಾರೆ; ಸುಳ್ಳು ಸುದ್ದಿ ಹಬ್ಬಿಸದಿರಿ: ಹಿನ್ನಲೆ ಗಾಯಕಿ ಎಸ್. ಜಾನಕಿ ಪುತ್ರ ಸ್ಪಷ್ಟನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...