Homeಮುಖಪುಟಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

ಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

- Advertisement -
- Advertisement -

ಮಣಿಪುರದಲ್ಲಿ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿಡಿಯೋವೊಂದು ವೈರಲ್ ಆಗಿದೆ. ಆ ಘಟನೆಯಲ್ಲಿನ ಸಂತ್ರಸ್ತ ಮಹಿಳೆಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, ”ಆ ಗುಂಪಿನೊಂದಿಗೆ ಪೊಲೀಸರೇ ನಮನ್ನು ಬಿಟ್ಟಿದ್ದರು” ಎಂದು ಹೇಳಿದ್ದಾರೆ.

ಆ ವಿಡಿಯೋದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲು ಮಾಡಿ ಗಂಡಸರ ಗುಂಪೊಂದು ಮೆರವಣಿಗೆ ನಡೆಸುತ್ತಿರುವುದನ್ನು ಕಾಣುತ್ತದೆ. ಒಬ್ಬರು 20ರ ಹದಿಹರೆಯದ ಮಹಿಳೆ ಮತ್ತು ಇನ್ನೊಬ್ಬರು 40 ವರ್ಷದ ಮಹಿಳೆಯಾಗಿದ್ದಾರೆ. ಕೆಲವು ಪುರುಷರು ಇಬ್ಬರು ಮಹಿಳೆಯರನ್ನು ಹೊಲದ ಕಡೆಗೆ ಬಲವಂತವಾಗಿ ಎಳೆದೊಯ್ಯುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಮೇ 18ರಂದು ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, 20ರ ಹದಿಹರೆಯದ ಮಹಿಳೆಯನ್ನು ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

”ಕಾಂಗ್‌ಪೊಕ್ಪಿ ಜಿಲ್ಲೆಯ ತಮ್ಮ ಹಳ್ಳಿಯ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಆಶ್ರಯಕ್ಕಾಗಿ ಕಾಡಿಗೆ ಓಡಿಹೋದೆವು. ಆ ನಂತರ ತೌಬಲ್ ಪೊಲೀಸರು ಅವರನ್ನು ರಕ್ಷಿಸಿ ಠಾಣೆಗೆ ಕರೆದೊಯ್ಯುವಾಗ ಗುಂಪೊಂದು ದಾರಿಯಲ್ಲಿ ಅಡ್ಡಗಟ್ಟಿತು. ಪೊಲೀಸ್ ಠಾಣೆ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವಾಗಲೇ  ಪೊಲೀಸರ ಕಸ್ಟಡಿಯಿಂದ ನಮ್ಮನ್ನು ಅವರು ವಶಪಡಿಸಿಕೊಂಡರು” ಎಂದು ದೂರಿನಲ್ಲಿ ಸಂತ್ರಸ್ತರು ಹೇಳಿದ್ದಾರೆ.

ಸಂತ್ರಸ್ತೆಯ ಗಂಡ ಮನೆಯಿಂದ ಫೋನ್‌ನಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತ 20ವರ್ಷದ ಮಹಿಳೆ ಆರೋಪಿಸಿದ್ದನು ಹೇಳಿದ್ದಾರೆ. ”ನಮ್ಮ ಹಳ್ಳಿಯ ಮೇಲೆ ದಾಳಿ ಮಾಡುತ್ತಿದ್ದ ಗುಂಪಿನೊಂದಿಗೆ ಪೊಲೀಸರು ಅಲ್ಲಿದ್ದರು. ಪೋಲೀಸರು ನಮ್ಮನ್ನು ಮನೆಯ ಹತ್ತಿರದಿಂದ ಕರೆದುಕೊಂಡು ಹೋಗಿ, ಹಳ್ಳಿಯಿಂದ ಸ್ವಲ್ಪ ದೂರ ಕರೆದುಕೊಂಡು ಹೋಗಿ ಗುಂಪಿನೊಂದಿಗೆ ರಸ್ತೆಯಲ್ಲಿ ಬಿಟ್ಟರು. ನಮ್ಮನ್ನು ಪೊಲೀಸರು ಅವರಿಗೆ ಒಪ್ಪಿಸಿದ್ದಾರೆ” ಎಂದು ಹೇಳಿರುವುದಾಗಿ ಅವರು ತಿಳಿಸಿದ್ದಾರೆ.

ಸಂತ್ರಸ್ತರು ತಮ್ಮ ದೂರಿನಲ್ಲಿ, ”ನಾವು ಐವರು ಒಟ್ಟಿಗೆ ಇದ್ದೇವು. ವೀಡಿಯೊದಲ್ಲಿ ಕಾಣುವ ಇಬ್ಬರು ಮಹಿಳೆಯರು ಮತ್ತು 50ವರ್ಷದ ಇನ್ನೊಬ್ಬ ಮಹಿಳೆಯನ್ನು ಸಹ ವಿವಸ್ತ್ರಗೊಳಿಸಲಾಗಿದೆ. ಕಿರಿಯ ಮಹಿಳೆಯ ತಂದೆ ಮತ್ತು ಆಕೆಯ ಸಹೋದರನನ್ನು ಆ ಗುಂಪಿನವರು ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈ ಘಟನೆಯ ವಿಡಿಯೋ ಸೆರೆಹಿಡಿದಿರುವ ಬಗ್ಗೆ ನಮಗೆ ತನಗೆ ಮತ್ತು ತನ್ನ ಕುಟುಂಬಕ್ಕೆ ತಿಳಿದಿಲ್ಲ. ಅದು ವೈರಲ್ ಆದಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತು. ಈಗಲಾದರೂ ರಾಜ್ಯ ಸರ್ಕಾರ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕು” ಎಂದು ಸಂತ್ರಸ್ತ ಮಹಿಳೆ ಹೇಳಿದರು.

”ಮಣಿಪುರದಲ್ಲಿ ಇಂಟರ್ನೆಟ್ ಇಲ್ಲ, ನಮಗೆ ಗೊತ್ತಿಲ್ಲ” ಎಂದು ಅವರು ಹೇಳಿದರು.

”ಆ ಜನಸಮೂಹದ ಭಾಗವಾಗಿರುವವರಲ್ಲಿ ಕೆಲವರನ್ನು ಗುರುತಿಸಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಪೈಶಾಚಿಕ ಕೃತ್ಯದ ವೀಡಿಯೋ ವೈರಲ್ ಆದ ಬಳಿಕ ಜನಾಕ್ರೋಶ ವ್ಯಕ್ತವಾಯಿತು. ಗುರುವಾರ ಬೆಳಿಗ್ಗೆ, ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯ ಬಂಧಿಸಲಾಗಿದೆ ಎಂದು ಸರ್ಕಾರ ದೃಢಪಡಿಸಿತು. ಇನ್ನೂ ಹೆಚ್ಚಿನ ದುಷ್ಕರ್ಮಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಗುರುವಾರ ಮಧ್ಯಾಹ್ನ ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...