Homeಮುಖಪುಟಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

ಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

- Advertisement -
- Advertisement -

ಮಣಿಪುರದಲ್ಲಿ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿಡಿಯೋವೊಂದು ವೈರಲ್ ಆಗಿದೆ. ಆ ಘಟನೆಯಲ್ಲಿನ ಸಂತ್ರಸ್ತ ಮಹಿಳೆಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, ”ಆ ಗುಂಪಿನೊಂದಿಗೆ ಪೊಲೀಸರೇ ನಮನ್ನು ಬಿಟ್ಟಿದ್ದರು” ಎಂದು ಹೇಳಿದ್ದಾರೆ.

ಆ ವಿಡಿಯೋದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲು ಮಾಡಿ ಗಂಡಸರ ಗುಂಪೊಂದು ಮೆರವಣಿಗೆ ನಡೆಸುತ್ತಿರುವುದನ್ನು ಕಾಣುತ್ತದೆ. ಒಬ್ಬರು 20ರ ಹದಿಹರೆಯದ ಮಹಿಳೆ ಮತ್ತು ಇನ್ನೊಬ್ಬರು 40 ವರ್ಷದ ಮಹಿಳೆಯಾಗಿದ್ದಾರೆ. ಕೆಲವು ಪುರುಷರು ಇಬ್ಬರು ಮಹಿಳೆಯರನ್ನು ಹೊಲದ ಕಡೆಗೆ ಬಲವಂತವಾಗಿ ಎಳೆದೊಯ್ಯುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಮೇ 18ರಂದು ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, 20ರ ಹದಿಹರೆಯದ ಮಹಿಳೆಯನ್ನು ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

”ಕಾಂಗ್‌ಪೊಕ್ಪಿ ಜಿಲ್ಲೆಯ ತಮ್ಮ ಹಳ್ಳಿಯ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಆಶ್ರಯಕ್ಕಾಗಿ ಕಾಡಿಗೆ ಓಡಿಹೋದೆವು. ಆ ನಂತರ ತೌಬಲ್ ಪೊಲೀಸರು ಅವರನ್ನು ರಕ್ಷಿಸಿ ಠಾಣೆಗೆ ಕರೆದೊಯ್ಯುವಾಗ ಗುಂಪೊಂದು ದಾರಿಯಲ್ಲಿ ಅಡ್ಡಗಟ್ಟಿತು. ಪೊಲೀಸ್ ಠಾಣೆ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವಾಗಲೇ  ಪೊಲೀಸರ ಕಸ್ಟಡಿಯಿಂದ ನಮ್ಮನ್ನು ಅವರು ವಶಪಡಿಸಿಕೊಂಡರು” ಎಂದು ದೂರಿನಲ್ಲಿ ಸಂತ್ರಸ್ತರು ಹೇಳಿದ್ದಾರೆ.

ಸಂತ್ರಸ್ತೆಯ ಗಂಡ ಮನೆಯಿಂದ ಫೋನ್‌ನಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತ 20ವರ್ಷದ ಮಹಿಳೆ ಆರೋಪಿಸಿದ್ದನು ಹೇಳಿದ್ದಾರೆ. ”ನಮ್ಮ ಹಳ್ಳಿಯ ಮೇಲೆ ದಾಳಿ ಮಾಡುತ್ತಿದ್ದ ಗುಂಪಿನೊಂದಿಗೆ ಪೊಲೀಸರು ಅಲ್ಲಿದ್ದರು. ಪೋಲೀಸರು ನಮ್ಮನ್ನು ಮನೆಯ ಹತ್ತಿರದಿಂದ ಕರೆದುಕೊಂಡು ಹೋಗಿ, ಹಳ್ಳಿಯಿಂದ ಸ್ವಲ್ಪ ದೂರ ಕರೆದುಕೊಂಡು ಹೋಗಿ ಗುಂಪಿನೊಂದಿಗೆ ರಸ್ತೆಯಲ್ಲಿ ಬಿಟ್ಟರು. ನಮ್ಮನ್ನು ಪೊಲೀಸರು ಅವರಿಗೆ ಒಪ್ಪಿಸಿದ್ದಾರೆ” ಎಂದು ಹೇಳಿರುವುದಾಗಿ ಅವರು ತಿಳಿಸಿದ್ದಾರೆ.

ಸಂತ್ರಸ್ತರು ತಮ್ಮ ದೂರಿನಲ್ಲಿ, ”ನಾವು ಐವರು ಒಟ್ಟಿಗೆ ಇದ್ದೇವು. ವೀಡಿಯೊದಲ್ಲಿ ಕಾಣುವ ಇಬ್ಬರು ಮಹಿಳೆಯರು ಮತ್ತು 50ವರ್ಷದ ಇನ್ನೊಬ್ಬ ಮಹಿಳೆಯನ್ನು ಸಹ ವಿವಸ್ತ್ರಗೊಳಿಸಲಾಗಿದೆ. ಕಿರಿಯ ಮಹಿಳೆಯ ತಂದೆ ಮತ್ತು ಆಕೆಯ ಸಹೋದರನನ್ನು ಆ ಗುಂಪಿನವರು ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈ ಘಟನೆಯ ವಿಡಿಯೋ ಸೆರೆಹಿಡಿದಿರುವ ಬಗ್ಗೆ ನಮಗೆ ತನಗೆ ಮತ್ತು ತನ್ನ ಕುಟುಂಬಕ್ಕೆ ತಿಳಿದಿಲ್ಲ. ಅದು ವೈರಲ್ ಆದಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತು. ಈಗಲಾದರೂ ರಾಜ್ಯ ಸರ್ಕಾರ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕು” ಎಂದು ಸಂತ್ರಸ್ತ ಮಹಿಳೆ ಹೇಳಿದರು.

”ಮಣಿಪುರದಲ್ಲಿ ಇಂಟರ್ನೆಟ್ ಇಲ್ಲ, ನಮಗೆ ಗೊತ್ತಿಲ್ಲ” ಎಂದು ಅವರು ಹೇಳಿದರು.

”ಆ ಜನಸಮೂಹದ ಭಾಗವಾಗಿರುವವರಲ್ಲಿ ಕೆಲವರನ್ನು ಗುರುತಿಸಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಪೈಶಾಚಿಕ ಕೃತ್ಯದ ವೀಡಿಯೋ ವೈರಲ್ ಆದ ಬಳಿಕ ಜನಾಕ್ರೋಶ ವ್ಯಕ್ತವಾಯಿತು. ಗುರುವಾರ ಬೆಳಿಗ್ಗೆ, ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯ ಬಂಧಿಸಲಾಗಿದೆ ಎಂದು ಸರ್ಕಾರ ದೃಢಪಡಿಸಿತು. ಇನ್ನೂ ಹೆಚ್ಚಿನ ದುಷ್ಕರ್ಮಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಗುರುವಾರ ಮಧ್ಯಾಹ್ನ ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...