Homeಮುಖಪುಟಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

ಬೆತ್ತಲು ಮೆರವಣಿಗೆ ಮಾಡಿ ಅತ್ಯಾಚಾರವೆಸಗಿದ ಗುಂಪಿಗೆ ನಮ್ಮನ್ನು ಒಪ್ಪಿಸಿದ್ದೇ ಪೊಲೀಸರು: ಮಣಿಪುರ ಸಂತ್ರಸ್ತೆಯ ಅಳಲು

- Advertisement -
- Advertisement -

ಮಣಿಪುರದಲ್ಲಿ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ಬುಧವಾರ ವಿಡಿಯೋವೊಂದು ವೈರಲ್ ಆಗಿದೆ. ಆ ಘಟನೆಯಲ್ಲಿನ ಸಂತ್ರಸ್ತ ಮಹಿಳೆಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, ”ಆ ಗುಂಪಿನೊಂದಿಗೆ ಪೊಲೀಸರೇ ನಮನ್ನು ಬಿಟ್ಟಿದ್ದರು” ಎಂದು ಹೇಳಿದ್ದಾರೆ.

ಆ ವಿಡಿಯೋದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲು ಮಾಡಿ ಗಂಡಸರ ಗುಂಪೊಂದು ಮೆರವಣಿಗೆ ನಡೆಸುತ್ತಿರುವುದನ್ನು ಕಾಣುತ್ತದೆ. ಒಬ್ಬರು 20ರ ಹದಿಹರೆಯದ ಮಹಿಳೆ ಮತ್ತು ಇನ್ನೊಬ್ಬರು 40 ವರ್ಷದ ಮಹಿಳೆಯಾಗಿದ್ದಾರೆ. ಕೆಲವು ಪುರುಷರು ಇಬ್ಬರು ಮಹಿಳೆಯರನ್ನು ಹೊಲದ ಕಡೆಗೆ ಬಲವಂತವಾಗಿ ಎಳೆದೊಯ್ಯುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಮೇ 18ರಂದು ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, 20ರ ಹದಿಹರೆಯದ ಮಹಿಳೆಯನ್ನು ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

”ಕಾಂಗ್‌ಪೊಕ್ಪಿ ಜಿಲ್ಲೆಯ ತಮ್ಮ ಹಳ್ಳಿಯ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಆಶ್ರಯಕ್ಕಾಗಿ ಕಾಡಿಗೆ ಓಡಿಹೋದೆವು. ಆ ನಂತರ ತೌಬಲ್ ಪೊಲೀಸರು ಅವರನ್ನು ರಕ್ಷಿಸಿ ಠಾಣೆಗೆ ಕರೆದೊಯ್ಯುವಾಗ ಗುಂಪೊಂದು ದಾರಿಯಲ್ಲಿ ಅಡ್ಡಗಟ್ಟಿತು. ಪೊಲೀಸ್ ಠಾಣೆ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವಾಗಲೇ  ಪೊಲೀಸರ ಕಸ್ಟಡಿಯಿಂದ ನಮ್ಮನ್ನು ಅವರು ವಶಪಡಿಸಿಕೊಂಡರು” ಎಂದು ದೂರಿನಲ್ಲಿ ಸಂತ್ರಸ್ತರು ಹೇಳಿದ್ದಾರೆ.

ಸಂತ್ರಸ್ತೆಯ ಗಂಡ ಮನೆಯಿಂದ ಫೋನ್‌ನಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತ 20ವರ್ಷದ ಮಹಿಳೆ ಆರೋಪಿಸಿದ್ದನು ಹೇಳಿದ್ದಾರೆ. ”ನಮ್ಮ ಹಳ್ಳಿಯ ಮೇಲೆ ದಾಳಿ ಮಾಡುತ್ತಿದ್ದ ಗುಂಪಿನೊಂದಿಗೆ ಪೊಲೀಸರು ಅಲ್ಲಿದ್ದರು. ಪೋಲೀಸರು ನಮ್ಮನ್ನು ಮನೆಯ ಹತ್ತಿರದಿಂದ ಕರೆದುಕೊಂಡು ಹೋಗಿ, ಹಳ್ಳಿಯಿಂದ ಸ್ವಲ್ಪ ದೂರ ಕರೆದುಕೊಂಡು ಹೋಗಿ ಗುಂಪಿನೊಂದಿಗೆ ರಸ್ತೆಯಲ್ಲಿ ಬಿಟ್ಟರು. ನಮ್ಮನ್ನು ಪೊಲೀಸರು ಅವರಿಗೆ ಒಪ್ಪಿಸಿದ್ದಾರೆ” ಎಂದು ಹೇಳಿರುವುದಾಗಿ ಅವರು ತಿಳಿಸಿದ್ದಾರೆ.

ಸಂತ್ರಸ್ತರು ತಮ್ಮ ದೂರಿನಲ್ಲಿ, ”ನಾವು ಐವರು ಒಟ್ಟಿಗೆ ಇದ್ದೇವು. ವೀಡಿಯೊದಲ್ಲಿ ಕಾಣುವ ಇಬ್ಬರು ಮಹಿಳೆಯರು ಮತ್ತು 50ವರ್ಷದ ಇನ್ನೊಬ್ಬ ಮಹಿಳೆಯನ್ನು ಸಹ ವಿವಸ್ತ್ರಗೊಳಿಸಲಾಗಿದೆ. ಕಿರಿಯ ಮಹಿಳೆಯ ತಂದೆ ಮತ್ತು ಆಕೆಯ ಸಹೋದರನನ್ನು ಆ ಗುಂಪಿನವರು ಕೊಂದಿದ್ದಾರೆ” ಎಂದು ಆರೋಪಿಸಿದ್ದಾರೆ.

”ಈ ಘಟನೆಯ ವಿಡಿಯೋ ಸೆರೆಹಿಡಿದಿರುವ ಬಗ್ಗೆ ನಮಗೆ ತನಗೆ ಮತ್ತು ತನ್ನ ಕುಟುಂಬಕ್ಕೆ ತಿಳಿದಿಲ್ಲ. ಅದು ವೈರಲ್ ಆದಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತು. ಈಗಲಾದರೂ ರಾಜ್ಯ ಸರ್ಕಾರ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕು” ಎಂದು ಸಂತ್ರಸ್ತ ಮಹಿಳೆ ಹೇಳಿದರು.

”ಮಣಿಪುರದಲ್ಲಿ ಇಂಟರ್ನೆಟ್ ಇಲ್ಲ, ನಮಗೆ ಗೊತ್ತಿಲ್ಲ” ಎಂದು ಅವರು ಹೇಳಿದರು.

”ಆ ಜನಸಮೂಹದ ಭಾಗವಾಗಿರುವವರಲ್ಲಿ ಕೆಲವರನ್ನು ಗುರುತಿಸಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಪೈಶಾಚಿಕ ಕೃತ್ಯದ ವೀಡಿಯೋ ವೈರಲ್ ಆದ ಬಳಿಕ ಜನಾಕ್ರೋಶ ವ್ಯಕ್ತವಾಯಿತು. ಗುರುವಾರ ಬೆಳಿಗ್ಗೆ, ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯ ಬಂಧಿಸಲಾಗಿದೆ ಎಂದು ಸರ್ಕಾರ ದೃಢಪಡಿಸಿತು. ಇನ್ನೂ ಹೆಚ್ಚಿನ ದುಷ್ಕರ್ಮಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಗುರುವಾರ ಮಧ್ಯಾಹ್ನ ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಹೇಯ ಕೃತ್ಯ: ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...