Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...