Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...