Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...