Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...