Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...