Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...