Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...