Homeಮುಖಪುಟಮಣಿಪುರ: ಅಸಹಾಯಕರಾಗಿ ಮೈತೈಗಳ ವಿರುದ್ಧ ಪ್ರತಿಭಟನೆಗಿಳಿದ ಪೊಲೀಸರು

ಮಣಿಪುರ: ಅಸಹಾಯಕರಾಗಿ ಮೈತೈಗಳ ವಿರುದ್ಧ ಪ್ರತಿಭಟನೆಗಿಳಿದ ಪೊಲೀಸರು

- Advertisement -
- Advertisement -

ಮಣಿಪುರದ ಮೈತೈ ಪ್ರಾಬಲ್ಯದ ಕಣಿವೆ ಜಿಲ್ಲೆಗಳಾದ್ಯಂತ ಪೊಲೀಸ್ ಸಿಬ್ಬಂದಿಗಳು ಮೈತೈ ಸಂಘಟನೆಯಾದ ಅರಾಂಬೈ ತೆಂಗೋಲ್‌ನ ಸದಸ್ಯರು ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವುದನ್ನು ಖಂಡಿಸಿ ಪ್ರತಿಭಟಿಸಿದ್ದಾರೆ.

ಮಂಗಳವಾರ ಸಂಜೆ ಇಂಫಾಲದಲ್ಲಿ ಶಸ್ತ್ರಸಜ್ಜಿತ ಗುಂಪೊಂದು ಎಎಸ್‌ಪಿ ಒಬ್ಬರ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿ ಅವರನ್ನು ಅಪಹರಿಸಿದೆ. ಇದನ್ನು ಖಂಡಿಸಿ ನಾಲ್ಕು ಜಿಲ್ಲೆಗಳ ನೂರಾರು ಮಣಿಪುರ ಪೊಲೀಸ್‌ ಕಮಾಂಡೋಗಳು ಸಾಂಕೇತಿಕವಾಗಿ “ ಆರ್ಮ್ಸ್‌ ಡೌನ್” ಪ್ರತಿಭಟನೆಯನ್ನು ನಡೆಸಿದ್ದಾರೆ. ಪಶ್ಚಿಮ ಇಂಫಾಲ್‌, ಥೌಬಾಲ್‌, ಕಕ್ಚಿಂಗ್‌ ಮತ್ತು ಬಿಷ್ಣುಪುರ್‌ ಜಿಲ್ಲೆಗಳ ಕಮಾಂಡೋಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ದಾಳಿಕೋರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಫೆಬ್ರವರಿ 27ರಂದು ಸುಮಾರು 200 ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಂಫಾಲ್ ಪೂರ್ವದಲ್ಲಿರುವ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಎಎಸ್ಪಿ) ಮೊಯಿರಾಂಗ್ಥೆಮ್ ಅಮಿತ್ ಅವರ ನಿವಾಸಕ್ಕೆ ನುಗ್ಗಿ, ಬಂಧಿತ ಅರಾಂಬೈ ತೆಂಗೋಲ್‌ನ ಸೆಕ್ಮೈ ಘಟಕದ ಮುಖ್ಯಸ್ಥ ರಾಬಿನ್ ಎಂ. ಅವರನ್ನು ಬಿಡುಗಡೆಗೆ ಆಗ್ರಹಿಸಿತ್ತು.

ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ ಜೊತೆಗಿನ ಶಾಂತಿ ಒಪ್ಪಂದದ ತಿಂಗಳ ನಂತರ, ಮಣಿಪುರದಲ್ಲಿ ಅಪಹರಣ, ಸುಲಿಗೆ ಪ್ರಕರಣಗಳು ಹೆಚ್ಚುತ್ತಿವೆ. ಈ ಮಧ್ಯೆ ಹೆಚ್ಚುವರಿ ಎಸ್‌ಪಿ ಮತ್ತು ಅವರ ಬೆಂಗಾವಲು ಸಿಬ್ಬಂದಿಯನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಪಹರಿಸಿದ್ದಾರೆ, ನಂತರ ಅವರನ್ನು ಕ್ವಾಕಿಥೆಲ್ ಕೊಂಜೆಂಗ್ ಲೈಕೈ ಪ್ರದೇಶದಿಂದ ರಕ್ಷಿಸಲಾಗಿದೆ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಣಿಪುರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶಸ್ತ್ರಸಜ್ಜಿತ ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಯ ನಿವಾಸವನ್ನು  ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಪೊಲೀಸ್‌ ಕ್ರಮದ ವೇಳೆ ರಬಿನಾಶ್ ಮೊಯಿರಾಂಗ್ಥೆಮ್ (24) ಮತ್ತು ಕಂಗುಜಮ್ ಭೀಮಸೇನ್ (20) ಎಂದು ಗುರುತಿಸಲಾದ ಇಬ್ಬರು ಗಾಯಗೊಂಡಿದ್ದಾರೆ.

ಮಣಿಪುರ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ನಮ್ಮ ನೈತಿಕ ಸ್ಥೈರ್ಯ ಕುಸಿದಿದೆ. ಯಾವುದೇ ನಾಗರಿಕ ಸಮಾಜದ ಗುಂಪುಗಳು ನಮ್ಮ ಬೆಂಬಲಕ್ಕೆ ಬಂದಿಲ್ಲ. ನಮ್ಮ ಕೈಗಳನ್ನು ಕಟ್ಟಿ ಹಾಕಲಾಗಿದೆ, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಂತೆ ತಡೆದಿದ್ದಾರೆ. ನಮ್ಮವರೇ ನಮ್ಮನ್ನು ಬೆಂಬಲಿಸುತ್ತಿಲ್ಲ. ದಾಳಿಗೆ ಒಳಗಾದ ಪೊಲೀಸ್ ಅಧಿಕಾರಿಯೂ ಮೈತೇಯ್ ಸಮುದಾಯಕ್ಕೆ ಸೇರಿದವರು ಎಂದು ಹೇಳಿದ್ದಾರೆ.

ಕಳೆದ ವರ್ಷ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ರಾಜ್ಯದಾದ್ಯಂತ ಪೊಲೀಸರಿಂದ 4,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳು ಮತ್ತು ಲಕ್ಷಗಟ್ಟಲೆ ಮದ್ದುಗುಂಡುಗಳನ್ನು ಲೂಟಿ ಮಾಡಲಾಗಿದೆ. ರಾಜ್ಯ ಸರ್ಕಾರದ ಮನವಿಗಳ ಹೊರತಾಗಿಯೂ, ಈ ಶಸ್ತ್ರಾಸ್ತ್ರಗಳನ್ನು ಹಿಂತಿರುಗಿಸಲಾಗಿಲ್ಲ. ಇವು ಈಗಲೂ ನಾಗರಿಕರ ಕೈಯ್ಯಲ್ಲಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...