Homeಮುಖಪುಟಮಣಿಪುರ: ಅಸಹಾಯಕರಾಗಿ ಮೈತೈಗಳ ವಿರುದ್ಧ ಪ್ರತಿಭಟನೆಗಿಳಿದ ಪೊಲೀಸರು

ಮಣಿಪುರ: ಅಸಹಾಯಕರಾಗಿ ಮೈತೈಗಳ ವಿರುದ್ಧ ಪ್ರತಿಭಟನೆಗಿಳಿದ ಪೊಲೀಸರು

- Advertisement -
- Advertisement -

ಮಣಿಪುರದ ಮೈತೈ ಪ್ರಾಬಲ್ಯದ ಕಣಿವೆ ಜಿಲ್ಲೆಗಳಾದ್ಯಂತ ಪೊಲೀಸ್ ಸಿಬ್ಬಂದಿಗಳು ಮೈತೈ ಸಂಘಟನೆಯಾದ ಅರಾಂಬೈ ತೆಂಗೋಲ್‌ನ ಸದಸ್ಯರು ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವುದನ್ನು ಖಂಡಿಸಿ ಪ್ರತಿಭಟಿಸಿದ್ದಾರೆ.

ಮಂಗಳವಾರ ಸಂಜೆ ಇಂಫಾಲದಲ್ಲಿ ಶಸ್ತ್ರಸಜ್ಜಿತ ಗುಂಪೊಂದು ಎಎಸ್‌ಪಿ ಒಬ್ಬರ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿ ಅವರನ್ನು ಅಪಹರಿಸಿದೆ. ಇದನ್ನು ಖಂಡಿಸಿ ನಾಲ್ಕು ಜಿಲ್ಲೆಗಳ ನೂರಾರು ಮಣಿಪುರ ಪೊಲೀಸ್‌ ಕಮಾಂಡೋಗಳು ಸಾಂಕೇತಿಕವಾಗಿ “ ಆರ್ಮ್ಸ್‌ ಡೌನ್” ಪ್ರತಿಭಟನೆಯನ್ನು ನಡೆಸಿದ್ದಾರೆ. ಪಶ್ಚಿಮ ಇಂಫಾಲ್‌, ಥೌಬಾಲ್‌, ಕಕ್ಚಿಂಗ್‌ ಮತ್ತು ಬಿಷ್ಣುಪುರ್‌ ಜಿಲ್ಲೆಗಳ ಕಮಾಂಡೋಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ದಾಳಿಕೋರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಫೆಬ್ರವರಿ 27ರಂದು ಸುಮಾರು 200 ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಂಫಾಲ್ ಪೂರ್ವದಲ್ಲಿರುವ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಎಎಸ್ಪಿ) ಮೊಯಿರಾಂಗ್ಥೆಮ್ ಅಮಿತ್ ಅವರ ನಿವಾಸಕ್ಕೆ ನುಗ್ಗಿ, ಬಂಧಿತ ಅರಾಂಬೈ ತೆಂಗೋಲ್‌ನ ಸೆಕ್ಮೈ ಘಟಕದ ಮುಖ್ಯಸ್ಥ ರಾಬಿನ್ ಎಂ. ಅವರನ್ನು ಬಿಡುಗಡೆಗೆ ಆಗ್ರಹಿಸಿತ್ತು.

ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ ಜೊತೆಗಿನ ಶಾಂತಿ ಒಪ್ಪಂದದ ತಿಂಗಳ ನಂತರ, ಮಣಿಪುರದಲ್ಲಿ ಅಪಹರಣ, ಸುಲಿಗೆ ಪ್ರಕರಣಗಳು ಹೆಚ್ಚುತ್ತಿವೆ. ಈ ಮಧ್ಯೆ ಹೆಚ್ಚುವರಿ ಎಸ್‌ಪಿ ಮತ್ತು ಅವರ ಬೆಂಗಾವಲು ಸಿಬ್ಬಂದಿಯನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅಪಹರಿಸಿದ್ದಾರೆ, ನಂತರ ಅವರನ್ನು ಕ್ವಾಕಿಥೆಲ್ ಕೊಂಜೆಂಗ್ ಲೈಕೈ ಪ್ರದೇಶದಿಂದ ರಕ್ಷಿಸಲಾಗಿದೆ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಣಿಪುರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಶಸ್ತ್ರಸಜ್ಜಿತ ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಯ ನಿವಾಸವನ್ನು  ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಪೊಲೀಸ್‌ ಕ್ರಮದ ವೇಳೆ ರಬಿನಾಶ್ ಮೊಯಿರಾಂಗ್ಥೆಮ್ (24) ಮತ್ತು ಕಂಗುಜಮ್ ಭೀಮಸೇನ್ (20) ಎಂದು ಗುರುತಿಸಲಾದ ಇಬ್ಬರು ಗಾಯಗೊಂಡಿದ್ದಾರೆ.

ಮಣಿಪುರ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ನಮ್ಮ ನೈತಿಕ ಸ್ಥೈರ್ಯ ಕುಸಿದಿದೆ. ಯಾವುದೇ ನಾಗರಿಕ ಸಮಾಜದ ಗುಂಪುಗಳು ನಮ್ಮ ಬೆಂಬಲಕ್ಕೆ ಬಂದಿಲ್ಲ. ನಮ್ಮ ಕೈಗಳನ್ನು ಕಟ್ಟಿ ಹಾಕಲಾಗಿದೆ, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಂತೆ ತಡೆದಿದ್ದಾರೆ. ನಮ್ಮವರೇ ನಮ್ಮನ್ನು ಬೆಂಬಲಿಸುತ್ತಿಲ್ಲ. ದಾಳಿಗೆ ಒಳಗಾದ ಪೊಲೀಸ್ ಅಧಿಕಾರಿಯೂ ಮೈತೇಯ್ ಸಮುದಾಯಕ್ಕೆ ಸೇರಿದವರು ಎಂದು ಹೇಳಿದ್ದಾರೆ.

ಕಳೆದ ವರ್ಷ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ರಾಜ್ಯದಾದ್ಯಂತ ಪೊಲೀಸರಿಂದ 4,000ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳು ಮತ್ತು ಲಕ್ಷಗಟ್ಟಲೆ ಮದ್ದುಗುಂಡುಗಳನ್ನು ಲೂಟಿ ಮಾಡಲಾಗಿದೆ. ರಾಜ್ಯ ಸರ್ಕಾರದ ಮನವಿಗಳ ಹೊರತಾಗಿಯೂ, ಈ ಶಸ್ತ್ರಾಸ್ತ್ರಗಳನ್ನು ಹಿಂತಿರುಗಿಸಲಾಗಿಲ್ಲ. ಇವು ಈಗಲೂ ನಾಗರಿಕರ ಕೈಯ್ಯಲ್ಲಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...