Homeಮುಖಪುಟಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ -...

ಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ – ಹೈಕೋರ್ಟ್

ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು.

- Advertisement -
- Advertisement -

ಕಳೆದ ವರ್ಷ ಬೀದರ್‌ನ ಶಾಹೀನ್ ಎಜುಕೇಶನ್ ಸೊಸೈಟಿಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶಿಸಿದಕ್ಕೆ ದೇಶದ್ರೋಹದ ಪ್ರಕರಣಕ್ಕೆ ದಾಖಲಾಗಿತ್ತು. ಆಗ ಶಸ್ತ್ರಾಸ್ತ್ರಗಳನ್ನು ಒಳಗೊಂಡ ಸಮವಸ್ತ್ರಧಾರಿ ಪೊಲೀಸರು ಮಕ್ಕಳನ್ನು ವಿಚಾರಣೆ ನಡೆಸಿದ್ದನ್ನು ಗಮನಿಸಿದ ಕರ್ನಾಟಕ ಹೈಕೋರ್ಟ್, ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ಅಡಿಯಲ್ಲಿನ ನಿಬಂಧನೆಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರಿದ್ದ ವಿಭಾಗೀಯ ಪೀಠವು, “ಉಪ ಅಧೀಕ್ಷಕರಾದ ಬಸವೇಶ್ವರವರು ಮಾರ್ಚ್ 16 ರಂದು ಸಲ್ಲಿಸಿದ ಅಫಿಡವಿಟ್ ನಲ್ಲಿ ಯಾವುದೇ ಫೋಟೊಗಳನ್ನು ಲಗತ್ತಿಸಿಲ್ಲ. ಅವರು IA 1, 2020 ರಲ್ಲಿ ಫೋಟೊಗಳನ್ನು ಲಗತ್ತಿಸಿದ್ದಾರೆ. ಏಪ್ರಿಲ್ 1, 2020 ರ ಎರಡನೇ ಫೋಟೋದಲ್ಲಿ ಈ ಶಾಲಾ ಮಕ್ಕಳನ್ನು (2 ಹುಡುಗರು, 1 ಹುಡುಗಿ) ಐದು ಪೋಲಿಸ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದು, ಅದರಲ್ಲಿ ನಾಲ್ವರು ಪೂರ್ಣ ಸಮವಸ್ತ್ರದಲ್ಲಿದ್ದಾರೆ ಮತ್ತು ಕನಿಷ್ಠ ಇಬ್ಬರು ಬಂದೂಕುಗಳನ್ನು ಹೊಂದಿದ್ದಾರೆ. ಇವು ಅಂದಿನ ವಿಚಾರಣೆಯ ಫೋಟೊಗಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ಪ್ರಾಥಮಿಕ ಸಾಕ್ಷ್ಯಗಳು 2016ರ ಜೆಜೆ ಕಾಯ್ದೆಯ 86(5) ಅಡಿಯಲ್ಲಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೆಕ್ಷನ್ 86 ಅದರ ಉಪ-ಸೆಕ್ಷನ್ 5 ರಲ್ಲಿ ಮಕ್ಕಳಿಗಾಗಿ ವಿಶೇಷ ಬಾಲಾಪರಾಧ ಪೊಲೀಸ್ ಘಟಕದ ಸ್ಥಾಪನೆ ಬಗ್ಗೆ ಹೇಳುತ್ತದೆ. ಅದಂರಂತೆ “ಮಕ್ಕಳೊಂದಿಗೆ ಸಂವಹನ ನಡೆಸುವ ಪೋಲಿಸ್ ಅಧಿಕಾರಿ ಸಾಧ್ಯವಾದಷ್ಟು ಸರಳ ಬಟ್ಟೆಯಲ್ಲಿರಬೇಕು ಮತ್ತು ಸಮವಸ್ತ್ರದಲ್ಲಿರಬಾರದು ಮತ್ತು ಹೆಣ್ಣು ಮಗುವಿನೊಂದಿಗೆ ವ್ಯವಹರಿಸಲು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ತೊಡಗಿಸಿಕೊಳ್ಳಬೇಕು” ಎಂದಿದೆ.

“ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಶಾಲಾ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಸರ್ಕಾರದ ಅತ್ಯಂತ ಹಿರಿಯ ಅಧಿಕಾರಿಯು ಅಫಿಡವಿಟ್ ಸಲ್ಲಿಸುವ ಮೂಲಕ ಪ್ರತಿಕ್ರಿಯಿಸಲು ನಾವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇವೆ. ಈ ಕ್ರಮದ ಆಧಾರದಲ್ಲಿ ಸರ್ಕಾರವು ಮುಂದೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಲು ರಾಜ್ಯದಾದ್ಯಂತ ಪೊಲೀಸರಿಗೆ ನಿರ್ದೇಶನಗಳನ್ನು ನೀಡುವುದನ್ನು ಪರಿಗಣಿಸಬಹುದು” ಎಂದು ಕೋರ್ಟ್ ಹೇಳಿದೆ.

“ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು. ಇದು ಹೀಗೆ ಮುಂದುವರೆಯಲು ಸಾಧ್ಯವಿಲ್ಲ” ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ವರ್ಷದ ಶಾಹಿನ್ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು. ಕೋರ್ಟ್ ದೇಶದ್ರೋಹ ನಡೆದಿಲ್ಲ ಎಂದು ತೀರ್ಪಿತ್ತಿತ್ತು.


ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....