Homeಮುಖಪುಟಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ -...

ಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ – ಹೈಕೋರ್ಟ್

ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು.

- Advertisement -
- Advertisement -

ಕಳೆದ ವರ್ಷ ಬೀದರ್‌ನ ಶಾಹೀನ್ ಎಜುಕೇಶನ್ ಸೊಸೈಟಿಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶಿಸಿದಕ್ಕೆ ದೇಶದ್ರೋಹದ ಪ್ರಕರಣಕ್ಕೆ ದಾಖಲಾಗಿತ್ತು. ಆಗ ಶಸ್ತ್ರಾಸ್ತ್ರಗಳನ್ನು ಒಳಗೊಂಡ ಸಮವಸ್ತ್ರಧಾರಿ ಪೊಲೀಸರು ಮಕ್ಕಳನ್ನು ವಿಚಾರಣೆ ನಡೆಸಿದ್ದನ್ನು ಗಮನಿಸಿದ ಕರ್ನಾಟಕ ಹೈಕೋರ್ಟ್, ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ಅಡಿಯಲ್ಲಿನ ನಿಬಂಧನೆಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರಿದ್ದ ವಿಭಾಗೀಯ ಪೀಠವು, “ಉಪ ಅಧೀಕ್ಷಕರಾದ ಬಸವೇಶ್ವರವರು ಮಾರ್ಚ್ 16 ರಂದು ಸಲ್ಲಿಸಿದ ಅಫಿಡವಿಟ್ ನಲ್ಲಿ ಯಾವುದೇ ಫೋಟೊಗಳನ್ನು ಲಗತ್ತಿಸಿಲ್ಲ. ಅವರು IA 1, 2020 ರಲ್ಲಿ ಫೋಟೊಗಳನ್ನು ಲಗತ್ತಿಸಿದ್ದಾರೆ. ಏಪ್ರಿಲ್ 1, 2020 ರ ಎರಡನೇ ಫೋಟೋದಲ್ಲಿ ಈ ಶಾಲಾ ಮಕ್ಕಳನ್ನು (2 ಹುಡುಗರು, 1 ಹುಡುಗಿ) ಐದು ಪೋಲಿಸ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದು, ಅದರಲ್ಲಿ ನಾಲ್ವರು ಪೂರ್ಣ ಸಮವಸ್ತ್ರದಲ್ಲಿದ್ದಾರೆ ಮತ್ತು ಕನಿಷ್ಠ ಇಬ್ಬರು ಬಂದೂಕುಗಳನ್ನು ಹೊಂದಿದ್ದಾರೆ. ಇವು ಅಂದಿನ ವಿಚಾರಣೆಯ ಫೋಟೊಗಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ಪ್ರಾಥಮಿಕ ಸಾಕ್ಷ್ಯಗಳು 2016ರ ಜೆಜೆ ಕಾಯ್ದೆಯ 86(5) ಅಡಿಯಲ್ಲಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೆಕ್ಷನ್ 86 ಅದರ ಉಪ-ಸೆಕ್ಷನ್ 5 ರಲ್ಲಿ ಮಕ್ಕಳಿಗಾಗಿ ವಿಶೇಷ ಬಾಲಾಪರಾಧ ಪೊಲೀಸ್ ಘಟಕದ ಸ್ಥಾಪನೆ ಬಗ್ಗೆ ಹೇಳುತ್ತದೆ. ಅದಂರಂತೆ “ಮಕ್ಕಳೊಂದಿಗೆ ಸಂವಹನ ನಡೆಸುವ ಪೋಲಿಸ್ ಅಧಿಕಾರಿ ಸಾಧ್ಯವಾದಷ್ಟು ಸರಳ ಬಟ್ಟೆಯಲ್ಲಿರಬೇಕು ಮತ್ತು ಸಮವಸ್ತ್ರದಲ್ಲಿರಬಾರದು ಮತ್ತು ಹೆಣ್ಣು ಮಗುವಿನೊಂದಿಗೆ ವ್ಯವಹರಿಸಲು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ತೊಡಗಿಸಿಕೊಳ್ಳಬೇಕು” ಎಂದಿದೆ.

“ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಶಾಲಾ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಸರ್ಕಾರದ ಅತ್ಯಂತ ಹಿರಿಯ ಅಧಿಕಾರಿಯು ಅಫಿಡವಿಟ್ ಸಲ್ಲಿಸುವ ಮೂಲಕ ಪ್ರತಿಕ್ರಿಯಿಸಲು ನಾವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇವೆ. ಈ ಕ್ರಮದ ಆಧಾರದಲ್ಲಿ ಸರ್ಕಾರವು ಮುಂದೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಲು ರಾಜ್ಯದಾದ್ಯಂತ ಪೊಲೀಸರಿಗೆ ನಿರ್ದೇಶನಗಳನ್ನು ನೀಡುವುದನ್ನು ಪರಿಗಣಿಸಬಹುದು” ಎಂದು ಕೋರ್ಟ್ ಹೇಳಿದೆ.

“ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು. ಇದು ಹೀಗೆ ಮುಂದುವರೆಯಲು ಸಾಧ್ಯವಿಲ್ಲ” ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ವರ್ಷದ ಶಾಹಿನ್ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು. ಕೋರ್ಟ್ ದೇಶದ್ರೋಹ ನಡೆದಿಲ್ಲ ಎಂದು ತೀರ್ಪಿತ್ತಿತ್ತು.


ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...