Homeಮುಖಪುಟಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ -...

ಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ – ಹೈಕೋರ್ಟ್

ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು.

- Advertisement -
- Advertisement -

ಕಳೆದ ವರ್ಷ ಬೀದರ್‌ನ ಶಾಹೀನ್ ಎಜುಕೇಶನ್ ಸೊಸೈಟಿಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶಿಸಿದಕ್ಕೆ ದೇಶದ್ರೋಹದ ಪ್ರಕರಣಕ್ಕೆ ದಾಖಲಾಗಿತ್ತು. ಆಗ ಶಸ್ತ್ರಾಸ್ತ್ರಗಳನ್ನು ಒಳಗೊಂಡ ಸಮವಸ್ತ್ರಧಾರಿ ಪೊಲೀಸರು ಮಕ್ಕಳನ್ನು ವಿಚಾರಣೆ ನಡೆಸಿದ್ದನ್ನು ಗಮನಿಸಿದ ಕರ್ನಾಟಕ ಹೈಕೋರ್ಟ್, ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ಅಡಿಯಲ್ಲಿನ ನಿಬಂಧನೆಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರಿದ್ದ ವಿಭಾಗೀಯ ಪೀಠವು, “ಉಪ ಅಧೀಕ್ಷಕರಾದ ಬಸವೇಶ್ವರವರು ಮಾರ್ಚ್ 16 ರಂದು ಸಲ್ಲಿಸಿದ ಅಫಿಡವಿಟ್ ನಲ್ಲಿ ಯಾವುದೇ ಫೋಟೊಗಳನ್ನು ಲಗತ್ತಿಸಿಲ್ಲ. ಅವರು IA 1, 2020 ರಲ್ಲಿ ಫೋಟೊಗಳನ್ನು ಲಗತ್ತಿಸಿದ್ದಾರೆ. ಏಪ್ರಿಲ್ 1, 2020 ರ ಎರಡನೇ ಫೋಟೋದಲ್ಲಿ ಈ ಶಾಲಾ ಮಕ್ಕಳನ್ನು (2 ಹುಡುಗರು, 1 ಹುಡುಗಿ) ಐದು ಪೋಲಿಸ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದು, ಅದರಲ್ಲಿ ನಾಲ್ವರು ಪೂರ್ಣ ಸಮವಸ್ತ್ರದಲ್ಲಿದ್ದಾರೆ ಮತ್ತು ಕನಿಷ್ಠ ಇಬ್ಬರು ಬಂದೂಕುಗಳನ್ನು ಹೊಂದಿದ್ದಾರೆ. ಇವು ಅಂದಿನ ವಿಚಾರಣೆಯ ಫೋಟೊಗಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ಪ್ರಾಥಮಿಕ ಸಾಕ್ಷ್ಯಗಳು 2016ರ ಜೆಜೆ ಕಾಯ್ದೆಯ 86(5) ಅಡಿಯಲ್ಲಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೆಕ್ಷನ್ 86 ಅದರ ಉಪ-ಸೆಕ್ಷನ್ 5 ರಲ್ಲಿ ಮಕ್ಕಳಿಗಾಗಿ ವಿಶೇಷ ಬಾಲಾಪರಾಧ ಪೊಲೀಸ್ ಘಟಕದ ಸ್ಥಾಪನೆ ಬಗ್ಗೆ ಹೇಳುತ್ತದೆ. ಅದಂರಂತೆ “ಮಕ್ಕಳೊಂದಿಗೆ ಸಂವಹನ ನಡೆಸುವ ಪೋಲಿಸ್ ಅಧಿಕಾರಿ ಸಾಧ್ಯವಾದಷ್ಟು ಸರಳ ಬಟ್ಟೆಯಲ್ಲಿರಬೇಕು ಮತ್ತು ಸಮವಸ್ತ್ರದಲ್ಲಿರಬಾರದು ಮತ್ತು ಹೆಣ್ಣು ಮಗುವಿನೊಂದಿಗೆ ವ್ಯವಹರಿಸಲು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ತೊಡಗಿಸಿಕೊಳ್ಳಬೇಕು” ಎಂದಿದೆ.

“ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಶಾಲಾ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಸರ್ಕಾರದ ಅತ್ಯಂತ ಹಿರಿಯ ಅಧಿಕಾರಿಯು ಅಫಿಡವಿಟ್ ಸಲ್ಲಿಸುವ ಮೂಲಕ ಪ್ರತಿಕ್ರಿಯಿಸಲು ನಾವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇವೆ. ಈ ಕ್ರಮದ ಆಧಾರದಲ್ಲಿ ಸರ್ಕಾರವು ಮುಂದೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಲು ರಾಜ್ಯದಾದ್ಯಂತ ಪೊಲೀಸರಿಗೆ ನಿರ್ದೇಶನಗಳನ್ನು ನೀಡುವುದನ್ನು ಪರಿಗಣಿಸಬಹುದು” ಎಂದು ಕೋರ್ಟ್ ಹೇಳಿದೆ.

“ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು. ಇದು ಹೀಗೆ ಮುಂದುವರೆಯಲು ಸಾಧ್ಯವಿಲ್ಲ” ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ವರ್ಷದ ಶಾಹಿನ್ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು. ಕೋರ್ಟ್ ದೇಶದ್ರೋಹ ನಡೆದಿಲ್ಲ ಎಂದು ತೀರ್ಪಿತ್ತಿತ್ತು.


ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...