Homeಮುಖಪುಟಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ -...

ಸಿಎಎ ವಿರೋಧಿ ನಾಟಕಕ್ಕೆ ಪೊಲೀಸ್ ವಿಚಾರಣೆ: ಜೆಜೆ ಕಾಯ್ದೆಯಡಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ – ಹೈಕೋರ್ಟ್

ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು.

- Advertisement -
- Advertisement -

ಕಳೆದ ವರ್ಷ ಬೀದರ್‌ನ ಶಾಹೀನ್ ಎಜುಕೇಶನ್ ಸೊಸೈಟಿಯಲ್ಲಿ ಸಿಎಎ ವಿರೋಧಿ ನಾಟಕ ಪ್ರದರ್ಶಿಸಿದಕ್ಕೆ ದೇಶದ್ರೋಹದ ಪ್ರಕರಣಕ್ಕೆ ದಾಖಲಾಗಿತ್ತು. ಆಗ ಶಸ್ತ್ರಾಸ್ತ್ರಗಳನ್ನು ಒಳಗೊಂಡ ಸಮವಸ್ತ್ರಧಾರಿ ಪೊಲೀಸರು ಮಕ್ಕಳನ್ನು ವಿಚಾರಣೆ ನಡೆಸಿದ್ದನ್ನು ಗಮನಿಸಿದ ಕರ್ನಾಟಕ ಹೈಕೋರ್ಟ್, ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ಅಡಿಯಲ್ಲಿನ ನಿಬಂಧನೆಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರಿದ್ದ ವಿಭಾಗೀಯ ಪೀಠವು, “ಉಪ ಅಧೀಕ್ಷಕರಾದ ಬಸವೇಶ್ವರವರು ಮಾರ್ಚ್ 16 ರಂದು ಸಲ್ಲಿಸಿದ ಅಫಿಡವಿಟ್ ನಲ್ಲಿ ಯಾವುದೇ ಫೋಟೊಗಳನ್ನು ಲಗತ್ತಿಸಿಲ್ಲ. ಅವರು IA 1, 2020 ರಲ್ಲಿ ಫೋಟೊಗಳನ್ನು ಲಗತ್ತಿಸಿದ್ದಾರೆ. ಏಪ್ರಿಲ್ 1, 2020 ರ ಎರಡನೇ ಫೋಟೋದಲ್ಲಿ ಈ ಶಾಲಾ ಮಕ್ಕಳನ್ನು (2 ಹುಡುಗರು, 1 ಹುಡುಗಿ) ಐದು ಪೋಲಿಸ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದು, ಅದರಲ್ಲಿ ನಾಲ್ವರು ಪೂರ್ಣ ಸಮವಸ್ತ್ರದಲ್ಲಿದ್ದಾರೆ ಮತ್ತು ಕನಿಷ್ಠ ಇಬ್ಬರು ಬಂದೂಕುಗಳನ್ನು ಹೊಂದಿದ್ದಾರೆ. ಇವು ಅಂದಿನ ವಿಚಾರಣೆಯ ಫೋಟೊಗಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ಪ್ರಾಥಮಿಕ ಸಾಕ್ಷ್ಯಗಳು 2016ರ ಜೆಜೆ ಕಾಯ್ದೆಯ 86(5) ಅಡಿಯಲ್ಲಿ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೆಕ್ಷನ್ 86 ಅದರ ಉಪ-ಸೆಕ್ಷನ್ 5 ರಲ್ಲಿ ಮಕ್ಕಳಿಗಾಗಿ ವಿಶೇಷ ಬಾಲಾಪರಾಧ ಪೊಲೀಸ್ ಘಟಕದ ಸ್ಥಾಪನೆ ಬಗ್ಗೆ ಹೇಳುತ್ತದೆ. ಅದಂರಂತೆ “ಮಕ್ಕಳೊಂದಿಗೆ ಸಂವಹನ ನಡೆಸುವ ಪೋಲಿಸ್ ಅಧಿಕಾರಿ ಸಾಧ್ಯವಾದಷ್ಟು ಸರಳ ಬಟ್ಟೆಯಲ್ಲಿರಬೇಕು ಮತ್ತು ಸಮವಸ್ತ್ರದಲ್ಲಿರಬಾರದು ಮತ್ತು ಹೆಣ್ಣು ಮಗುವಿನೊಂದಿಗೆ ವ್ಯವಹರಿಸಲು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ತೊಡಗಿಸಿಕೊಳ್ಳಬೇಕು” ಎಂದಿದೆ.

“ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಶಾಲಾ ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಸರ್ಕಾರದ ಅತ್ಯಂತ ಹಿರಿಯ ಅಧಿಕಾರಿಯು ಅಫಿಡವಿಟ್ ಸಲ್ಲಿಸುವ ಮೂಲಕ ಪ್ರತಿಕ್ರಿಯಿಸಲು ನಾವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇವೆ. ಈ ಕ್ರಮದ ಆಧಾರದಲ್ಲಿ ಸರ್ಕಾರವು ಮುಂದೆ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಲು ರಾಜ್ಯದಾದ್ಯಂತ ಪೊಲೀಸರಿಗೆ ನಿರ್ದೇಶನಗಳನ್ನು ನೀಡುವುದನ್ನು ಪರಿಗಣಿಸಬಹುದು” ಎಂದು ಕೋರ್ಟ್ ಹೇಳಿದೆ.

“ನಾವು ಇದನ್ನು ಕ್ಷಮಿಸಿದರೆ ಇದು ಪುನಾರಾವರ್ತನೆಯಾಗುತ್ತದೆ. ಇಂತಹ ಕ್ರಮವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಕ್ಕಳನ್ನು ಹೀಗೆ ಏಕೆ ನಡೆಸಿಕೊಳ್ಳಲಾಗುತ್ತದೆ? ಇದು ಸರಿಯಾಗಬೇಕು. ಇದು ಹೀಗೆ ಮುಂದುವರೆಯಲು ಸಾಧ್ಯವಿಲ್ಲ” ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕಳೆದ ವರ್ಷದ ಶಾಹಿನ್ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು. ಕೋರ್ಟ್ ದೇಶದ್ರೋಹ ನಡೆದಿಲ್ಲ ಎಂದು ತೀರ್ಪಿತ್ತಿತ್ತು.


ಇದನ್ನೂ ಓದಿ: CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....